ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ 40 ಲಕ್ಷ ಸದಸ್ವತ್ವ
Team Udayavani, Feb 7, 2023, 10:15 PM IST
ಬೆಂಗಳೂರು: ರಾಜ್ಯ ಬಿಜೆಪಿಯು ಮುಂಬರುವ ವಿಧಾನ ಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಸಿದ ಜನ ಸಂಕಲ್ಪ ಅಭಿಯಾನದಲ್ಲಿ 40.50 ಲಕ್ಷ ಮಂದಿ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಮತ್ತು ಅಭಿಯಾನದ ಸಂಚಾಲಕ ಡಾ| ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ರಾಜ್ಯ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 21ರಿಂದ ಫೆ. 5ರ ವರೆಗೆ ನಡೆದ ಅಭಿಯಾನದಲ್ಲಿ ಒಂದು ಕೋಟಿ ಮನೆ ಹಾಗೂ ಎರಡು ಕೋಟಿ ಜನರನ್ನು ಸಂಪರ್ಕಿಸುವ ಗುರಿ ಹೊಂದಲಾಗಿತ್ತು. ದಕ್ಷಿಣಕನ್ನಡ, ಉಡುಪಿ, ಕೊಡಗು, ಮೈಸೂರು, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಅಭಿಯಾನ ಯಶಸ್ವಿಯಾಗಿದ್ದು, ಎಲ್ಲ ಮನೆಗಳನ್ನು ಸಂಪರ್ಕಿಸಲಾಗಿದೆ. ಉಳಿದ ಜಿಲ್ಲೆಗಲ್ಲಿ ಶೇ. 80 ಯಶಸ್ಸು ಸಿಕ್ಕಿದೆ ಎಂದು ತಿಳಿಸಿದರು.
ಗೋಡೆಬರಹ, ಸದಸ್ಯತ್ವ ಮಿಸ್ಡ್ ಕಾಲ್, ಮನೆ-ಮನೆಗೆ ಕರಪತ್ರ ನೀಡುವ ಮೂಲಕ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರದ ಗೃಹ ಸಚಿವ ಅಮಿತ್ ಶಾ, ಸಂಘಟನ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಮುಂತಾದವರು ಸಾಮಾನ್ಯ ಕಾರ್ಯಕರ್ತರಂತೆ ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿಸಿದರು.
ಮಹಿಳಾ ಮೋರ್ಚಾ, ಯುವ ಮೋರ್ಚಾ, ಎಸ್.ಸಿ. ಮೋರ್ಚಾ, ರೈತ ಮೋರ್ಚಾ, ಒಬಿಸಿ ಮೋರ್ಚಾ, ಅಲ್ಪಸಂಖ್ಯಾಕ ಮೋರ್ಚಾ ಸಹಿತ ಎಲ್ಲ ಪ್ರಕೋಷ್ಠಗಳು ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿವೆ ಎಂದು ಹೇಳಿದರು.
ಇಲ್ಲಿಯವರೆಗೆ 40.50 ಲಕ್ಷ ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಗಿದೆ. ಒಟ್ಟು 58,186 ಬೂತ್ ಗಳಲ್ಲಿ 39,272 ಬೂತ್ಗಳನ್ನು ಸಂಪರ್ಕಿಸಲಾಗಿದೆ. 22.55 ಲಕ್ಷ ಮನೆಗಳಿಗೆ ಭೇಟಿ ನೀಡಿ 13.35 ಲಕ್ಷ ಸ್ಟಿಕ್ಕರ್ ಅಂಟಿಸಲಾಗಿದೆ. 4.91 ಲಕ್ಷ ವಾಹನಗಳಿಗೆ ಸ್ಟಿಕ್ಕರ್ ಅಂಟಿಸಲಾಗಿದೆ. 1.94 ಲಕ್ಷ ಗೋಡೆ ಬರಹ ಬರೆಯಲಾಗಿದೆ. 32,489 ಡಿಜಿಟಲ್ ವಾಲ್ ಪೇಟಿಂಗ್ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ