ಸ್ಪೀಕರ್ ವಿರುದ್ಧ ಮತ್ತೆ ಐವರು ಅತೃಪ್ತ ಶಾಸಕರು ಸುಪ್ರೀಂಗೆ
ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ಗೆ ನಿರ್ದೇಶಿಸಿ
Team Udayavani, Jul 13, 2019, 3:11 PM IST
ಬೆಂಗಳೂರು: ರಾಜೀನಾಮೆ ಯನ್ನು ಅಂಗೀಕರಿಸಲು ಸ್ಪೀಕರ್ಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಿ ಐವರು ಅತೃಪ್ತ ಶಾಸಕರು ಶನಿವಾರ ಸುಪ್ರೀಂ ಮೆಟ್ಟಿಲೇರಿದ್ದಾರೆ.
ಶಾಸಕರಾದ ರೋಷನ್ ಬೇಗ್, ಎಂಟಿಬಿ ನಾಗರಾಜ್ , ಡಾ.ಕೆ ಸುಧಾಕರ್, ಮುನಿರತ್ನ,ಆನಂದ್ ಸಿಂಗ್ ಅವರು ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆ 10 ಶಾಸಕರು ಅಫಿಡವಿಟ್ನಲ್ಲಿ ಪ್ರಸ್ತಾವನೆ ಮಾಡಿದ್ದ ಅಂಶಗಳನ್ನೇ ಪ್ರಸ್ತಾವಿಸಿದ್ದು, ನಮ್ಮ ರಾಜೀನಾಮೆಯನ್ನು ಅಂಗೀಕರಿಸದೆ ಸ್ಪೀಕರ್ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ. ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ ಎಂದು ಮನವಿ ಸಲ್ಲಿಸಿದ್ದಾರೆ.
10 ಶಾಸಕರ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಮಂಗಳವಾರದ ವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚನೆ ನೀಡಿದೆ.