ಯಾರಿಗೆ ಪಂಚ ಕಿರೀಟ : ಐದು ರಾಜ್ಯಗಳ ಮತ ಎಣಿಕೆ ಇಂದು


Team Udayavani, Mar 10, 2022, 6:45 AM IST

ಯಾರಿಗೆ ಪಂಚ ಕಿರೀಟ : ಐದು ರಾಜ್ಯಗಳ ಮತ ಎಣಿಕೆ ಇಂದು

ನವದೆಹಲಿ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರ ಸತತ 2ನೇ ಬಾರಿಗೆ ಅಧಿಕಾರಕ್ಕೆ ಬರಲಿದೆಯೇ? ಗೋವಾದಲ್ಲಿ ಅತಂತ್ರವೋ-ಸ್ವತಂತ್ರವೋ…? ಉತ್ತರಾ ಖಂಡದಲ್ಲಿ ಯಾರಿಗೆ ಅಧಿಕಾರ ಸಿಗಲಿದೆ? ಪಂಜಾಬ್‌ ನಲ್ಲಿ ಆಪ್‌ ಬರುತ್ತಾ? ಮಣಿಪುರದಲ್ಲಿನ ಸ್ಥಿತಿ ಏನು?

ಫೆ.10ರಂದು ಶುರುವಾಗಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣಾ ಫ‌ಲಿತಾಂಶ ಗುರುವಾರ (ಮಾ.10) ಪ್ರಕಟವಾಗಲಿದ್ದು, ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಶುರುವಾಗಲಿದೆ. ಮಧ್ಯಾಹ್ನದ ಹೊತ್ತಿಗೆ ಐದೂ ರಾಜ್ಯಗಳಲ್ಲಿ ಯಾವ ಪಕ್ಷ ಅಥವಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ವಿಚಾರ ಬಹುತೇಕ ಸ್ಪಷ್ಟವಾಗಲಿದೆ.
ಜೂನ್‌-ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆ, 2024ಕ್ಕೆ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ಐದೂ ರಾಜ್ಯಗಳ ಚುನಾವಣೆ, ವಿಶೇಷವಾಗಿ ಉತ್ತರ ಪ್ರದೇಶ ಫ‌ಲಿತಾಂಶ ದಿಕ್ಸೂಚಿಯಾಗಲಿದೆ.

ಮತದಾನ ನಡೆದದ್ದು
ಫೆ.10- ಮಾ.7
ಜ.8- ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದ ದಿನ.

ಏನೇನು ವ್ಯವಸ್ಥೆ-ಸಿದ್ಧತೆಗಳು?
50,000 – ಐದು ರಾಜ್ಯಗಳಲ್ಲಿ ಎಣಿಕೆಯಾಗಿ ನಿಯೋಜನೆಗೊಂಡಿರುವ ಅಧಿಕಾರಿಗಳು
1,200- ಮತಎಣಿಕೆಗಾಗಿ ಇರುವ ಹಾಲ್‌ಗ‌ಳು
750- ಉತ್ತರ ಪ್ರದೇಶದಲ್ಲಿನ ಎಣಿಕೆ ಹಾಲ್‌ಗ‌ಳು
200- ಪಂಜಾಬ್‌ನಲ್ಲಿ ಇರುವ ಎಣಿಕೆ ಹಾಲ್‌ಗ‌ಳು
650- ಎಣಿಕೆ ಪ್ರಕ್ರಿಯೆ ಮೇಲೆ ನಿಗಾ ಇರಿಸಲು ವೀಕ್ಷಕರು
250- ಉ.ಪ್ರ.ದ ಪ್ರತಿ ಜಿಲ್ಲೆಗೆ ನೀಡಲಾಗಿರುವ ಕೇಂದ್ರೀಯ ಅರೆ ಸೇನಾಪಡೆ

ಫ‌ಲಿತಾಂಶದಿಂದ ಯಾರಿಗೆ ಏನು ಸಂದೇಶ?
ನರೇಂದ್ರ ಮೋದಿ
ಐದೂ ರಾಜ್ಯಗಳಲ್ಲಿ ಬಿಜೆಪಿಯ ಪ್ರಚಾರದ ನೇತೃತ್ವ ವಹಿಸಿದ್ದ ಪ್ರಧಾನಿಯವರಿಗೆ ಪಕ್ಷದ ಮೇಲೆ ಹಿಡಿತ ಮತ್ತಷ್ಟು ಬಿಗಿಯಾಗುವುದು ಖಚಿತವಾಗಲಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅವರು 30ಕ್ಕೂ ಹೆಚ್ಚು ಸಾರ್ವಜನಿಕ ಭಾಷಣಗಳನ್ನು ಮಾಡಿದ್ದಾರೆ. ಉ.ಪ್ರ.ಚುನಾವಣೆಯಲ್ಲಿ ಗೆಲ್ಲುವ ಮೂಲಕ 2024 ಲೋಕಸಭೆ ಚುನಾವಣೆಯಲ್ಲಿ ದಾಖಲೆಯ ಮೂರನೇ ಬಾರಿಗೆ ಎನ್‌ಡಿಎಯನ್ನು ಜಯದತ್ತ ಕೊಂಡೊಯ್ಯಲು ಮುನ್ನಡಿ ಈ ಫ‌ಲಿತಾಂಶದ ಮೂಲಕ ಬರೆದಂತಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ನಾಯಕತ್ವವನ್ನು ಇನ್ನೂ ಜನರು ಮೆಚ್ಚಿಕೊಂಡಿದ್ದಾರೆ ಎನ್ನುವ ಅಂಶ ಸಾಬೀತಾಗಲಿದೆ. ಇದರ ಜತೆಗೆ ಮಿತ್ರ ಪಕ್ಷಗಳಿಗೆ ಎನ್‌ಡಿಎನಲ್ಲಿ ಪೂರಕ ವಾತಾವರಣ ಇದೆ ಎನ್ನುವ ಅಂಶವನ್ನೂ ಪುಷ್ಟೀಕರಿಸಲಿದೆ.

ಯೋಗಿ ಆದಿತ್ಯನಾಥ್‌
ಉತ್ತರ ಪ್ರದೇಶದಲ್ಲಿ 2ನೇ ಬಾರಿಗೆ ಬಿಜೆಪಿ ಅಧಿಕಾರ ಉಳಿಸಿಕೊಂಡರೆ 1980ರ ದಶಕದ ಬಳಿಕ ಇಂಥ ಸಾಧನೆ ಮಾಡಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ. ರಾಜ್ಯ ಬಿಜೆಪಿ ಘಟಕ ಮತ್ತು ರಾಷ್ಟ್ರ ಮಟ್ಟದಲ್ಲಿಯೂ ಕೂಡ ಅವರಿಗೆ ವಿಶೇಷ ಮನ್ನಣೆಗೆ ಸಿಗಲಿದೆ. ಇದರ ಜತೆಗೆ 2024ರ ಲೋಕಸಭೆ ಚುನಾವಣೆಯಲ್ಲಿ ಒಟ್ಟು 80 ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರನ್ನು ಗೆಲ್ಲಿಸಿ ಕಳುಹಿಸುವ ಹೆಚ್ಚಿನ ಹೊಣೆಗಾರಿಕೆ ಅವರಿಗೆ ಸಿಗುವ ಸಾಧ್ಯತೆ ಇದೆ. ಈಗಾಗಲೇ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಬಿಗಿತ ತಂದು ಮೆಚ್ಚುಗೆ ಪಡೆದಿರುವ ಯೋಗಿ ಆದಿತ್ಯನಾಥ್‌ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿ ಮತ್ತು ಸಮಾಜಮುಖೀ ಯೋಜನೆಗಳನ್ನು ಇನ್ನಷ್ಟು ಆದ್ಯತೆಯಲ್ಲಿ ಜಾರಿಗೆ ತರಬೇಕಾಗುವ ಹೊಣೆ ಬರಲಿದೆ.

ರಾಹುಲ್‌ ಗಾಂಧಿ
ಐದೂ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ, ರಾಹುಲ್‌ ಗಾಂಧಿಯವರ ನಾಯಕತ್ವ ಮತ್ತಷ್ಟು ಪ್ರಶ್ನೆಗೆ ಒಳಗಾಗುವ ಸಾಧ್ಯತೆಯೇ ಹೆಚ್ಚು. ಸದ್ಯ ಪ್ರಕಟವಾಗಿರುವ ಮತಗಟ್ಟೆ ಸಮೀಕ್ಷೆಗಳಲ್ಲಿ ಕೂಡ ಯಾವೊಂದು ರಾಜ್ಯದಲ್ಲಿಯೂ ಅವರ ಪಕ್ಷ ಅಧಿಕಾರಕ್ಕೆ ಬರುವ ಸೂಚನೆಗಳಿಲ್ಲ. ಹೀಗಾಗಿ, ಕಾಂಗ್ರೆಸ್‌ನಲ್ಲಿರುವ ಜಿ-23 ನಾಯಕರು ಪಕ್ಷದಲ್ಲಿ ಮತ್ತಷ್ಟು ಸುಧಾರಣೆಗಳು ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಪ್ರತಿಪಾದಿಸುವುದಕ್ಕೆ ಮತ್ತಷ್ಟು ಪುಷ್ಟಿ ಬರಬಹುದು. ಜತೆಗೆ, ಯುಪಿಎನಲ್ಲಿರುವ ಇತರ ಪಕ್ಷಗಳೂ ರಾಹುಲ್‌ ನಾಯಕತ್ವ ಪ್ರಶ್ನಿಸಬಹುದು.

ಅಖೀಲೇಶ್‌ ಯಾದವ್‌
ಈ ಬಾರಿ ಎಸ್‌ಪಿ ಸೋತರೆ ನಿಜಕ್ಕೂ ಅವರಿಗೆ ಹಿನ್ನಡೆಯೇ. ಸಮೀಕ್ಷೆಗಳ ಪ್ರಕಾರ ನೋಡುವುದಿದ್ದರೆ ಅವರಿಗೆ ತೃಪ್ತಿ ತರುವ ವಿಚಾರವೆಂದರೆ 2017ಕ್ಕಿಂತ ಹೆಚ್ಚಿನ ಸ್ಥಾನಗಳು ಸಿಗುವ ನಿರೀಕ್ಷೆ ಇದೆ. ಮುಂದಿನ ಲೋಕಸಭೆ ಚುನಾವಣೆಗಾಗಿ ಅವರು, ಈಗಿನಿಂದಲೇ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಮತ್ತಷ್ಟು ಹೊಸ ವ್ಯೂಹ ರಚನೆ ಮಾಡಬೇಕಾಗಬಹುದು. ಟಿಎಂಸಿ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ರಚಿಸಲು ಪ್ರಯತ್ನಿಸುತ್ತಿರುವ ಬಿಜೆಪಿ-ಕಾಂಗ್ರೆಸ್‌ ಹೊರತಾಗಿರುವ ಮೈತ್ರಿಕೂಟ ಸೇರುವತ್ತ ಅಖೀಲೇಶ್‌ ಯೋಚನೆ ಮಾಡುವಂತಾಗಬಹುದು.

ಅರವಿಂದ ಕೇಜ್ರಿವಾಲ್‌
ಆಮ್‌ ಆದ್ಮಿ ಪಕ್ಷ ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ಸಮೀಕ್ಷೆಗಳ ಅಭಿಪ್ರಾಯದಿಂದ ಅವರ ಪಕ್ಷ “ದೆಹಲಿಗೆ ಸೀಮಿತವಾಗಿರುವ ಪಕ್ಷ’ ಎಂಬ ಟೀಕೆಯಿಂದ ಮುಕ್ತವಾಗಬಹುದು. ಗೋವಾದಲ್ಲಿ ಸರ್ಕಾರ ರಚನೆಯಲ್ಲಿ ಪ್ರಧಾನ ಪಾತ್ರ ವಹಿಸುವ ಸಾಧ್ಯತೆಯೂ ಅಲ್ಲಗಳೆಯುವಂತಿಲ್ಲ. ಜತೆಗೆ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪರ್ಯಾಯವಾಗಿ ಬೆಳೆಯುತ್ತಿರುವ ತೃತೀಯ ಶಕ್ತಿ ಎಂಬ ಗೌರವಕ್ಕೆ ಪಾತ್ರವಾಗಹುದು. ಜತೆಗೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಕೆಲವು ರಾಜ್ಯಗಳಲ್ಲಿಯಾದರೂ ಸವಾಲೊಡ್ಡುವ ಬಲ ಬರಬಹುದು.

ಮಾಯಾವತಿ
ಒಂದು ವೇಳೆ ಹಾಲಿ ಚುನಾವಣೆಯಲ್ಲಿ ನಿರೀಕ್ಷಿತ ಸಾಧನೆ ಮಾಡಿಲ್ಲ ಎಂದಾದರೆ, ಬಿಎಸ್‌ಪಿಯ ಅಸ್ತಿತ್ವಕ್ಕೇ ಧಕ್ಕೆ ಬರಬಹುದು. ಈಗಾಗಲೇ ಎರಡನೇ ಹಂತದ ನಾಯಕರೆಲ್ಲ ಸಮಾಜವಾದಿ ಪಕ್ಷ, ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ, ರಾಜಕೀಯವಾಗಿ ಅದರ ಅಸ್ತಿತ್ವಕ್ಕೇ ಸವಾಲು ಉಂಟಾಗುವ ಬೆಳವಣಿಗೆ ಉಂಟಾಗಬಹುದು

ನವಜೋತ್‌ ಸಿಂಗ್‌ ಸಿಧು
ಪಂಜಾಬ್‌ನಲ್ಲಿ ಚುನಾವಣೆಯಲ್ಲಿ ಸೋತ ಸಂಪೂರ್ಣ ಹೊಣೆ ಹೊರಬೇಕಾಗಬಹುದು. ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಪಕ್ಷದ ಸೋಲಿಗೆ ಅವರೇ ಕಾರಣ ಎಂಬ ಅಪಖ್ಯಾತಿ ಬರಬಹುದು. ಈ ಬೆಳವಣಿಗೆ ಕಾಂಗ್ರೆಸ್‌ನ ವರಿಷ್ಠರ ಅವಕೃಪೆಗೆ ಸಿಧು ಪಾತ್ರರಾಗುವ ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.