ಕಸಿವಿಸಿ…ಅಳುಕು… ಆತಂಕ ಕಡಿಮೆ ಮಾಡಿಕೊಳ್ಳಲು 5 ಸುಲಭ ವಿಧಾನಗಳು

ಅಲ್ಪಾವಧಿಯ ಮತ್ತು ದೀರ್ಘಾವಧಿಯ ವ್ಯಾಯಾಮ ಉತ್ತಮವಾದದ್ದು,

Team Udayavani, Sep 10, 2022, 4:10 PM IST

ಕಸಿವಿಸಿ…ಅಳುಕು… ಆತಂಕ ಕಡಿಮೆ ಮಾಡಿಕೊಳ್ಳಲು 5 ಸುಲಭ ವಿಧಾನಗಳು

ಕಸಿವಿಸಿ, ಅಳುಕು, ಬೆವರುವುದು ಇವುಗಳೆಲ್ಲವೂ ಆತಂಕದ ಲಕ್ಷಣಗಳಾಗಿವೆ. ಆತಂಕದಿಂದ ಬರುವ ಅಸ್ವಸ್ಥತೆ ತುಂಬಾ ಕಷ್ಟಕರವಾಗುತ್ತದೆ. ಅತಿಯಾದ ಹೊಟ್ಟೆನೋವು, ಹೃದಯಬಡಿತ ಹೆಚ್ಚಳದಿಂದ ಉದ್ವಿಗ್ನತೆ, ಆತಂಕ ತಲೆದೋರುತ್ತದೆ.ಆತಂಕ ಎಂಬುದು ಮಾನಸಿಕ ಸಮಸ್ಯೆಗೆ ಸಂಬಂಧಿಸಿದ್ದಲ್ಲ. ಇದು ಪರಿಸ್ಥಿತಿಗೆ ಹೊಂದಿಕೊಂಡು, ವ್ಯಕ್ತಿಯಿಂದ, ವ್ಯಕ್ತಿಗೆ ಭಿನ್ನವಾಗಿರುತ್ತದೆ. ಆತಂಕವನ್ನು ನೀವು ಹೇಗೆ ಭಾವಿಸಿಕೊಳ್ಳುತ್ತೀರಿ ಎಂಬುದು ದೊಡ್ಡ ವಿಷಯವಲ್ಲ, ಇದು ಕಾಳಜಿಯ ಮತ್ತು ಪರಿಗಣನೆಯ ವಿಷಯವಾಗಿದೆ.

ನಿರಂತರ ಧ್ಯಾನ, ದೈಹಿಕ ಚಟುವಟಿಕೆ, ಹೊರಗೆ ಕಾಲ ಕಳೆಯುವುದು ಅಥವಾ ಆಹಾರ ಪದ್ಧತಿ ಸೇರಿದಂತೆ ಜೀವನಶೈಲಿಯಲ್ಲಿ ಕೆಲವು ಬದಲಾವಣೆ ತಂದುಕೊಳ್ಳುವ ಮೂಲಕ ಆತಂಕವನ್ನು ಕಡಿಮೆ ಮಾಡಿಕೊಳ್ಳಲು ನೆರವಾಗುತ್ತದೆ.

ಆತಂಕ ಕಡಿಮೆ ಮಾಡಿಕೊಳ್ಳಲು 5 ಸುಲಭ ವಿಧಾನಗಳು:

1)ದೀರ್ಘ ಉಸಿರಾಟ ಸಹಕಾರಿ: ನಾವು ತಳಮಳಕ್ಕೊಳಗಾದ ಸಂದರ್ಭದಲ್ಲಿ ನಮ್ಮ ಉಸಿರಾಟ ಪ್ರಕ್ರಿಯೆ ವೇಗವಾಗಿರುತ್ತದೆ. ದೇಹದ ವಿಶ್ರಾಂತಿ ಪ್ರತಿಕ್ರಿಯೆ ಪ್ರೇರೇಪಿಸುವ ಸಂದರ್ಭದಲ್ಲಿ ನಮ್ಮ ಹೃದಯದ ಬಡಿತ ಮತ್ತು ರಕ್ತದ ಒತ್ತಡ ಕಡಿಮೆಯಾಗಿರುತ್ತದೆ. ಈ ಸಂದರ್ಭದಲ್ಲಿ ಕೆಲವು ದೀರ್ಘವಾದ ಉಸಿರನ್ನು ಎಳೆದುಕೊಳ್ಳುವ ಮೂಲಕ ಆತಂಕವನ್ನು ಕಡಿಮೆ ಮಾಡಿಕೊಳ್ಳಬಹುದು.

2)ವಾಕಿಂಗ್: ಆತಂಕ ನಿವಾರಣೆಗೆ ಅತ್ಯುತ್ತಮ ವಿಧಾನಗಳಲ್ಲಿ ಇದು ಕೂಡಾ ಒಂದು. ಅಲ್ಪಾವಧಿಯ ಮತ್ತು ದೀರ್ಘಾವಧಿಯ ವ್ಯಾಯಾಮ ಉತ್ತಮವಾದದ್ದು, ಅದೇ ರೀತಿ ನಮ್ಮ ಚಿಂತೆಗಳನ್ನು ದೂರ ಮಾಡಲು ವಾಕಿಂಗ್ ಅತ್ಯುತ್ತಮವಾದದ್ದು.

3)ಗಮನ ಬೇರೆಡೆಗೆ ಹರಿಸಿ: ನಿಮ್ಮ ಮನಸ್ಸನ್ನು ಘಾಸಿಗೊಳಿಸುವ ಅಥವಾ ನೋವು ನೀಡುವ ಯಾವುದೇ ವಿಚಾರ ಎದುರಿಸುವ ಸಂದರ್ಭ ಬಂದಾಗ ಗಮನವನ್ನು ಬೇರೆ ವಿಷಯಗಳತ್ತ ಹೊರಳಿಸಿ. ತಂಪಾದ ನೀರಿನೊಳಗೆ ಕೈಗಳನ್ನು ಇರಿಸುವುದು, ಬಣ್ಣ ಹಚ್ಚುವುದು, ಪೇಪರ್ ನಲ್ಲಿ ಚಿತ್ರ ಬಿಡಿಸುವುದು ಹೀಗೆ ನಿಮ್ಮ ಗಮನ ಬೇರೆಡೆ ಸೆಳೆಯುವ ಮೂಲಕ ಆತಂಕ ಕಡಿಮೆ ಮಾಡಿಕೊಳ್ಳಬಹುದು.

4) ಒಳ್ಳೆಯ ನಿದ್ದೆ: ಆತಂಕ ಕಡಿಮೆಯಾಗಲು ಒಬ್ಬ ವ್ಯಕ್ತಿ ದಿನಕ್ಕೆ 7ರಿಂದ 9ಗಂಟೆಗಳ ಕಾಲ ಉತ್ತಮವಾಗಿ ನಿದ್ದೆ ಮಾಡಬೇಕು. ನಿದ್ರಾಹೀನತೆ ಕೂಡಾ ಆತಂಕ ಹೆಚ್ಚಾಗಲು ಕಾರಣವಾಗುತ್ತದೆ.

5) ಪ್ರಕೃತಿಯಲ್ಲಿ ಸಮಯ ಕಳೆಯಿರಿ: ನಾವು ಹೊರಗೆ ತಿರುಗಾಟದಲ್ಲಿದ್ದಾಗ ನಮ್ಮನ್ನು ಚಿಂತೆ ಹೆಚ್ಚು ಆವರಿಸಿಕೊಂಡಿರುವುದಿಲ್ಲ. ಆ ನಿಟ್ಟಿನಲ್ಲಿ ಪ್ರಕೃತಿಯಲ್ಲಿ ಹೆಚ್ಚು ಸಮಯ ಕಳೆಯುವುದು ಉತ್ತಮ, ಈ ಸಂದರ್ಭದಲ್ಲಿ ನಮ್ಮ ಹೃದಯ ಬಡಿತ, ರಕ್ತದ ಒತ್ತಡ, ನಮ್ಮ ಮಾನಸಿಕ ಒತ್ತಡ ಎಲ್ಲವೂ ಒಂದೇ ತೆರನಾಗಿರಲು ನೆರವಾಗಿರುತ್ತದೆ.

ಒಂದು ವೇಳೆ ಆತಂಕ ಹೆಚ್ಚಳವಾಗಿದ್ದು, ಇದಕ್ಕೆ ವೈದ್ಯರ ಟ್ರೀಟ್ ಮೆಂಟ್ ಅಗತ್ಯವಿದ್ದರೆ ನಿಮ್ಮ ವೈದ್ಯರ ಜೊತೆ ಮಾತುಕತೆ ನಡೆಸಿ ಚಿಕಿತ್ಸೆ ಪಡೆಯಿರಿ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.