ರಾಜ್ಯಕ್ಕೆ 50 ಆಮ್ಲಜನಕ ಉತ್ಪಾದನ ಘಟಕ : ಪಿಎಂ ಕೇರ್ ನಿಂದ ಮಂಜೂರು
Team Udayavani, Jun 26, 2021, 7:10 AM IST
ರಾಯಚೂರು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೊರೊನಾ 3ನೇ ಅಲೆಗೆ ಸಿದ್ಧತೆ ಆರಂಭಿಸಿವೆ. ಕೇಂದ್ರವು ಪಿಎಂ ಕೇರ್ ನಡಿ ರಾಜ್ಯಕ್ಕೆ 50 ಆಮ್ಲಜನಕ ಉತ್ಪಾದನ ಘಟಕಗಳನ್ನು ಮಂಜೂರು ಮಾಡಿದೆ.
ಕೊರೊನಾ ಸಂದರ್ಭದಲ್ಲಿ ಆಮ್ಲಜನಕ ಸಿಗದೆ ಇದ್ದಾಗ ಬಹುತೇಕ ರಾಜ್ಯಗಳಿಂದ ಕೇಂದ್ರಕ್ಕೆ ಪಿಎಸ್ಎ ಆಮ್ಲಜನಕ ಉತ್ಪಾದನ ಘಟಕಗಳಿಗಾಗಿ ಬೇಡಿಕೆ ಬಂದಿತ್ತು. ಈಗ ಆದ್ಯತೆಯ ಅನುಸಾರ ಕೇಂದ್ರ ಸರಕಾರವು ಆಯಾ ರಾಜ್ಯಗಳಿಗೆ ಘಟಕಗಳನ್ನು ಮಂಜೂರು ಮಾಡುತ್ತಿದೆ.
ಎಲ್ಲೆಲ್ಲಿ ಘಟಕ?
ಬೆಂಗಳೂರು ನಗರ, ಗ್ರಾಮೀಣ ಸೇರಿ 6 ಘಟಕ, ಕಲಬುರಗಿ, ಮೈಸೂರು ಜಿಲ್ಲೆಗೆ ತಲಾ 3, ಬೀದರ್, ಗದಗ, ದಾವಣಗೆರೆ, ಕೊಡಗು, ಕೊಪ್ಪಳ, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 2, ಉಳಿದ ಜಿಲ್ಲೆಗಳಿಗೆ ಒಂದೊಂದು ಘಟಕ ಮಂಜೂರಾಗಿದೆ.
ಜಿಲ್ಲೆಗೆ ನೋಡಲ್ ಅಧಿಕಾರಿ
ರಾಜ್ಯದಲ್ಲಿ ಘಟಕಗಳ ಸ್ಥಾಪನೆಗೆ ಡಿಫೆನ್ಸ್ ರಿಸರ್ಚ್ ಆ್ಯಂಡ್ ಡೆವಲಪ್ಮೆಂಟ್ ಆರ್ಗನೈಸೇಶನ್ (ಡಿಆರ್ ಡಿಒ), ಸೆಂಟ್ರಲ್ ಮೆಡಿಕಲ್ ಸರ್ವೀಸ್ ಸೊಸೈಟಿ (ಸಿಎಂಎಸ್ಎಸ್), ಎಚ್ಎಲ್ಎಲ್ ಇನ್ಫ್ರಾಟೆಕ್ ಸರ್ವಿಸ್ ಲಿ. ಸಂಸ್ಥೆಗಳಿಗೆ ಹೊಣೆ ನೀಡಲಾಗಿದೆ. ಘಟಕ ನಿರ್ವಹಣೆಗೆ ಜಿಲ್ಲೆಗೆ ಒಬ್ಬ ನೋಡಲ್ ಅಧಿಕಾರಿ, ಇಬ್ಬರು ತಾಂತ್ರಿಕ ಸಿಬಂದಿ ನಿಯೋಜಿಸಲಾಗುತ್ತಿದೆ. ರಾಜ್ಯಕ್ಕೆ ಒಬ್ಬ ನೋಡಲ್ ಅಧಿಕಾರಿ ಕಾರ್ಯ ನಿರ್ವಹಿಸಲಿದ್ದಾರೆ.
ಕೇಂದ್ರ ಸರಕಾರ 1 ಸಾವಿರ ಎಲ್ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನ ಘಟಕ ಮಂಜೂರು ಮಾಡಿರುವ ಮಾಹಿತಿ ಲಭ್ಯವಾಗಿದೆ.
-ಡಾ| ಬಸವರಾಜ ವಿ. ಪೀರಾಪುರ, ರಿಮ್ಸ್ ನಿರ್ದೇಶಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ