Underwater:ದೇಶದ ಮೊದಲ ಜಲಮೆಟ್ರೋಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ; ವಿದ್ಯಾರ್ಥಿಗಳ ಸಾಥ್
ಹೌರಾ-ಕೋಲ್ಕತಾ ಅವಳಿ ಸಿಟಿ ಸಂಪರ್ಕ ಸುಗಮವಾಗಲಿದೆ
Team Udayavani, Mar 6, 2024, 1:18 PM IST
ಕೋಲ್ಕತಾ: ಪಶ್ಚಿಮಬಂಗಾಳದ ಹೌರಾ ಮೈದಾನ-ಎಸ್ ಪ್ಲಾಂಡೆ ಮಧ್ಯೆ ಹೂಗ್ಲಿ ನದಿಯ ಕೆಳಗೆ ನೀರಿನಾಳದಲ್ಲಿ ನಿರ್ಮಿಸಿರುವ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಮಾರ್ಚ್ 06) ಚಾಲನೆ ನೀಡಿದರು.
ಇದನ್ನೂ ಓದಿ:ರಾಜ್ಯ ಪಠ್ಯಕ್ರಮದ 5,8,9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ಆದೇಶ
ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ಪಶ್ಚಿಮಬಂಗಾಳದಲ್ಲಿ 15,400 ಕೋಟಿ ರೂಪಾಯಿ ಮೌಲ್ಯದ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮೆಟ್ರೋ ಸೇವೆಯು ಪಶ್ಚಿಮಬಂಗಾಳ ರಾಜಧಾನಿಯ ಅವಳಿ ನಗರಗಳಾದ ಹೌರಾ ಮತ್ತು ಸಾಲ್ಟ್ ಲೇಕ್ ಅನ್ನು ಸಂಪರ್ಕಿಸುತ್ತದೆ. ಆರು ನಿಲ್ದಾಣಗಳಲ್ಲಿ ಮೂರು ನಿಲ್ದಾಣ ನೀರಿನಾಳದಲ್ಲಿದೆ. ದೇಶದ ಮೊದಲ ಜಲ ಮೆಟ್ರೋ ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸಿದ್ದರು.
ಮೆಟ್ರೋ ರೈಲಿನೊಳಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ನಗುತ್ತಾ ಸಂವಹನ ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.
ಇದು ದೇಶದ ಮೊದಲ ನೀರಿನಾಳದ ಮೆಟ್ರೋ ಮಾರ್ಗ ಎಂಬ ಖ್ಯಾತಿಗೆ ಪಾತ್ರವಾಗಿದೆ. ಕೊಲ್ಕೊತ್ತಾ ಮೆಟ್ರೋದ 16.6 ಕಿಲೋಮೀಟರ್ ಉದ್ದದ ಪೂರ್ವ-ಪಶ್ಚಿಮ ಮೆಟ್ರೋ ಮಾರ್ಗದಲ್ಲಿ 10.8 ಕಿಮೀ ಮಾರ್ಗ ಸುರಂಗದಲ್ಲಿದ್ದರೆ, 5.75 ಕಿಮೀ ಎತ್ತರಿಸಿದ ಮಾರ್ಗದಲ್ಲಿದೆ.
ಈ ಪೈಕಿ 4.8 ಕಿಮೀ ಹೌರಾ ಮೈದಾನ- ಎಸ್ಪ್ಲಾಂಡೆ ಮಧ್ಯೆ ಇದೆ. ಈ ಮಾರ್ಗ 6 ನಿಲ್ದಾಣಗಳನ್ನು ಹೊಂದಿದ್ದು ಈ ಪೈಕಿ ಮೂರು ಸುರಂಗದಲ್ಲಿ ಬರುತ್ತವೆ. ಹೂಗ್ಲಿ ನದಿಯ ಕೆಳಭಾಗದಲ್ಲಿ 520 ಮೀಟರ್ ಕ್ರಮಿಸಲು ಕೇವಲ 45 ಸೆಕೆಂಡ್ಗಳು ಸಾಕು. ಹೂಗ್ಲಿ ನಿಲ್ದಾಣ ದೇಶದ ಅತಿ ಆಳದ ನಿಲ್ದಾಣ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಕಳೆದ ವರ್ಷದ ಏಪ್ರಿಲ್ನಲ್ಲೇ ಕೋಲ್ಕತಾ ಮೆಟ್ರೋ ಸುರಂಗ ಮಾರ್ಗದ ಹೂಗ್ಲಿ ನದಿಯ ಕೆಳಗೆ ನೀರಿನಾಳದಲ್ಲಿ ಮೆಟ್ರೋ ರೈಲು ಓಡಿಸುವಲ್ಲಿ ಯಶಸ್ವಿಯಾಗಿತ್ತು. ಇದರಿಂದ ಹೌರಾ-ಕೋಲ್ಕತಾ ಅವಳಿ ಸಿಟಿ ಸಂಪರ್ಕ ಸುಗಮವಾಗಲಿದೆ.
40 ವರ್ಷಗಳ ಹಿಂದೆಯೇ ಶುರುವಾಗಿತ್ತು ಮೆಟ್ರೋ ರೈಲು
ಕೋಲ್ಕತಾ ನಗರ 40 ವರ್ಷಗಳ ಹಿಂದೆಯೇ ಮೆಟ್ರೋ ಸೌಲಭ್ಯ ಹೊಂದಿತ್ತು. 1984ರಲ್ಲಿ ನೇತಾಜಿ ಭವನದಿಂದ ಎಸ್ಪ್ಲಾಂಡೆ ಮಧ್ಯೆ 3.4 ಕಿಲೋ ಮೀಟರ್ ಮೆಟ್ರೋ ಸಂಚಾರ ಆರಂಭವಾಗಿತ್ತು. ಈಗ ನೀರಿನಾಳದ ಮೆಟ್ರೋ ಮಾರ್ಗದ ಮೂಲಕ ಮತ್ತೂಂದು ಹೊಸ ಐತಿಹಾಸಿಕ ಬೆಳವಣಿಗೆಗೆ ಪಶ್ಚಿಮ ಬಂಗಾಳದ ರಾಜಧಾನಿ ಸಾಕ್ಷಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!