ಬಿಜೆಪಿ ಜಿಲ್ಲಾಧ್ಯಕ್ಷರಿಗೆ 55ರ ವಯೋಮಿತಿ
ಮಂಡಲ ಅಧ್ಯಕ್ಷರಿಗೆ 45 ವರ್ಷದ ಮಿತಿ ಯುವಕರಿಗೆ ಅವಕಾಶ
Team Udayavani, Dec 29, 2019, 6:30 AM IST
ಬೆಂಗಳೂರು: ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ 55 ಹಾಗೂ ಮಂಡಲ ಅಧ್ಯಕ್ಷ ಸ್ಥಾನಕ್ಕೆ 45ರ ವಯೋಮಿತಿ ನಿಗದಿ ಮಾಡಲಾಗಿದೆ. ಯುವ ಮುಖಂಡರಿಗೆ ಹೆಚ್ಚಿನ ಅವಕಾಶ ನೀಡುವ ಸಲುವಾಗಿ ಹಾಗೂ ಪಕ್ಷ ಸಂಘಟನೆ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಅನುಕೂಲವಾಗುವಂತೆ ಈ ಬದಲಾವಣೆ ಮಾಡಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಸಂಘಟನ ಪರ್ವ ನಡೆದಿದ್ದು, ಮಂಡಲ ಅಧ್ಯಕ್ಷರ ನೇಮಕ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ತಾಲೂಕು ಘಟಕದ ಅಧ್ಯಕ್ಷರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇದೇ ಹೊತ್ತಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾಧ್ಯಕ್ಷರಿಗೆ 55 ವರ್ಷ ಹಾಗೂ ಮಂಡಲ ಅಧ್ಯಕ್ಷರಿಗೆ 45 ವರ್ಷ ವಯೋಮಿತಿ ನಿಗದಿಪಡಿಸಿದ್ದು, ಅದರಂತೆ ನೇಮಕ ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಸದ್ಯ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 55 ವರ್ಷ ಮೀರಿದವರು ಅಧ್ಯಕ್ಷರಾಗಿದ್ದಾರೆ. ಆ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, 55 ವರ್ಷದೊಳಗಿನವರನ್ನು ಆಯ್ಕೆ ಮಾಡಲು ಸಿದ್ಧತೆ ನಡೆದಿದೆ. ಕೆಲವು ಮಂಡಲಗಳಿಗೆ 46, 47 ವರ್ಷದವರನ್ನು ಆಯ್ಕೆ ಮಾಡಿರುವ ಒಂದೆರಡು ಉದಾಹರಣೆ ಹೊರತುಪಡಿಸಿದರೆ ಬಹುತೇಕ ಕಡೆ ವಯೋಮಿತಿಯಂತೆಯೇ ನೇಮಕ ನಡೆದಿದೆ ಎಂದು ಮೂಲಗಳು ಹೇಳಿವೆ.
ಸಂಘಟನೆ ಕಾರ್ಯವನ್ನು ಪರಿಣಾಮಕಾರಿ ಯಾಗಿ ಕೈಗೊಳ್ಳುವ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷರು ಜಿಲ್ಲಾಧ್ಯಕ್ಷರಿಗೆ 55 ವರ್ಷ ಹಾಗೂ ಮಂಡಲ ಅಧ್ಯಕ್ಷರಿಗೆ 45 ವರ್ಷ ವಯೋಮಿತಿ ನಿಗದಿಪಡಿಸಿದ್ದಾರೆ. ಅದರಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇದರಿಂದ ಯುವ ಮುಖಂಡರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ರಾಜ್ಯಕ್ಕೆ ಸೀಮಿತವಾಗಿ ಈ ವಯೋಮಿತಿ ನಿಗದಿಪಡಿಸಿ ಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.
ವ್ಯಾಪಕ ಜಾಗೃತಿ
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜಾಗೃತಿ ಕಾರ್ಯ ಭರದಿಂದ ಸಾಗಿದೆ. ರಾಜ್ಯದಲ್ಲಿ ಸಂಘಟನಾತ್ಮಕವಾಗಿ 10 ವಿಭಾಗಗಳಿದ್ದು, ಬಹುತೇಕ ಕಡೆ ಪ್ರಮುಖರ ಕಾರ್ಯಾಗಾರ ನಡೆದಿದ್ದು ಸೋಮವಾರದೊಳಗೆ ಪೂರ್ಣಗೊಳ್ಳಲಿದೆ. ಅನಂತರ ಜಿಲ್ಲಾ ಮಟ್ಟದಲ್ಲಿ ಬಳಿಕ ಮಂಡಲ ಹಂತದಲ್ಲಿ ಸಾರ್ವಜನಿಕರನ್ನು ಒಳಗೊಂಡಂತೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಅಂತಿಮವಾಗಿ ಜಿಲ್ಲಾ ಮಟ್ಟದಲ್ಲಿ ಬೃಹತ್ ರ್ಯಾಲಿ ನಡೆಸಲು ಚಿಂತಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ