ಮನೆ ಕಳಕೊಂಡವರಿಗೆ 5 ಲ.ರೂ. ಪರಿಹಾರ


Team Udayavani, Oct 12, 2019, 5:40 AM IST

d-56

ಬೆಂಗಳೂರು: ಪ್ರವಾಹದಲ್ಲಿ ಮನೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಐದು ಲಕ್ಷ ರೂ. ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದು, ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಕುಟುಂಬಗಳು ವಾಸವಿದ್ದ ಪ್ರಕರಣಗಳಲ್ಲೂ ಇದು ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಪ್ರವಾಹ ಪರಿಹಾರ ಚರ್ಚೆಗೆ ಸರಕಾರದ ವತಿಯಿಂದ ಉತ್ತರ ನೀಡಿದ ಅವರು, ಪ್ರವಾಹದಲ್ಲಿ ಅಂಗಡಿ-ಮುಂಗಟ್ಟು ಕಳೆದುಕೊಂಡವರಿಗೂ ತಲಾ 25 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಿದರು.

ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಖುಷ್ಕಿ ಭೂಮಿಗೆ ಪ್ರತಿ ಹೆಕ್ಟೇರ್‌ಗೆ 6,800 ರೂ. ನೀಡಲಾಗುತ್ತಿದ್ದು ಅದಕ್ಕೆ ರಾಜ್ಯ ಸರಕಾರ 10 ಸಾವಿರ ರೂ. ಸೇರಿಸಿ 16,800 ರೂ. ನೀಡಲಾಗುವುದು. ತೋಟಗಾರಿಕೆ ಬೆಳೆಗಳಿಗೆ 13,500 ರೂ. ನೀಡಲಾಗುತ್ತಿದ್ದು, ಇದಕ್ಕೆ 10 ಸಾವಿರ ಸೇರಿಸಿ 23,500 ರೂ. ನೀಡಲಾಗುತ್ತದೆ. ನೀರಾವರಿ ಪ್ರದೇಶದ ಬೆಳೆಗಳಿಗೆ 18,000 ರೂ. ನೀಡಲಾಗುತ್ತಿದ್ದು, ಇದಕ್ಕೆ 10 ಸಾವಿರ ರೂ. ಸೇರಿಸಿ 28,000 ರೂ. ನೀಡಲಾಗುವುದು. ಕಾಫಿ ಬೆಳೆಗಾರರಿಗೂ ಪ್ರತಿ ಹೆಕ್ಟೇರ್‌ಗೆ 28,000 ರೂ. ನೀಡಲಾಗುವುದು. ರೇಷ್ಮೆ, ಅಡಿಕೆ ಬೆಳೆ ನಷ್ಟಕ್ಕೂ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಭರವಸೆ ನೀಡಿದರು. ಸರಕಾರವು ಪರಿಹಾರ ಹಾಗೂ ಪುನರ್ವಸತಿ ಕಾರ್ಯದಲ್ಲಿ ಯಾವುದೇ ಹಿನ್ನಡೆಯಾಗದಂತೆ ನೋಡಿಕೊಳ್ಳುತ್ತದೆ ಎಂಬ ಭರವಸೆ ಯನ್ನು ಸಿಎಂ ನೀಡಿದರು.

2009ರಲ್ಲಿ ರಾಜ್ಯದಲ್ಲಿ ಪ್ರವಾಹ ಉಂಟಾದಾಗ ಪ್ರವಾಹಕ್ಕೆ ಸಿಲುಕಿದವರನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಅವರು ಕಾರಣಾಂತರಗಳಿಂದ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಗೊಂಡಿಲ್ಲ. ಈಗಲೂ ಅವರು ಸ್ಥಳಾಂತರಗೊಳ್ಳಲು ಬಯಸಿದರೆ ಅವರನ್ನು ಸ್ಥಳಾಂತರಿಸಲು ಸರಕಾರ ಸಿದ್ಧ ಎಂದು ಹೇಳಿದರು.

ನೆರೆ ಪ್ರದೇಶದಲ್ಲಿ ಒಂದು ವಾರ ಮೊಕ್ಕಾಂ
ರಾಜ್ಯದಲ್ಲಿ ಉಂಟಾದ ಪ್ರವಾಹ ಪರಿಹಾರಕ್ಕಾಗಿ ರಾಜ್ಯ ಸರಕಾರ ಇದುವರೆಗೂ 2950 ಕೋಟಿ ರೂ. ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರು ಸುಮಾರು 300 ಕೋಟಿ ರೂ, ದೇಣಿಗೆ ನೀಡಿದ್ದಾರೆ. ನಾನು ಪ್ರವಾಹ ಪೀಡಿತ ಪ್ರದೇಶದಲ್ಲಿ ಒಂದು ವಾರ ಮೊಕ್ಕಾಂ ಹೂಡಿ ಪ್ರವಾಹ ಪರಿಹಾರ ಕಾರ್ಯ ಪರಿಶೀಲನೆ ಮಾಡಿದ್ದೇನೆ ಎಂದು ಹೇಳಿದರು.

ರಾಜ್ಯದಲ್ಲಿ ನೂರು ವರ್ಷಗಳ ಇತಿಹಾಸದಲ್ಲಿ ಆಗದಷ್ಟು ಮಳೆ ಆಗಸ್ಟ್‌ ತಿಂಗಳ ಒಂದು ವಾರದಲ್ಲಿ ಸುರಿದಿದೆ. ಕೃಷ್ಣಾ, ಭೀಮಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಗೆ ಸುಮಾರು 6 ಲಕ್ಷ ಕ್ಯೂಸೆಕ್ಸ್‌ಗಿಂತಲೂ ಹೆಚ್ಚು ನೀರು ಬಂದಿರುವುದರಿಂದ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ ಎಂದು ತಿಳಿಸಿದರು.

ಮನೆ ಕಳೆದುಕೊಂಡವರಿಗೆ ಎನ್‌ಡಿಆರ್‌ಎಫ್ ನಿಯಮದ ಪ್ರಕಾರ 95 ಸಾವಿರ ರೂ. ಮಾತ್ರ ನೀಡಲಾಗುತ್ತಿದ್ದು ರಾಜ್ಯ ಸರಕಾರವು ಮನೆ ಕಳೆದುಕೊಂಡ ಎ ಮತ್ತು ಬಿ ವರ್ಗದ 42,893 ಕುಟುಂಬಗಳಿಗೆ ಪ್ರತಿ ಮನೆಗೂ 5 ಲಕ್ಷ ರೂ.ಪರಿಹಾರ ನೀಡುತ್ತಿದೆ. ಸಿ ಕೆಟಗೆರಿಯ 77,513 ಮನೆ ಕಳೆದುಕೊಂಡ ಕುಟುಂಬಗಳಿಗೆ 25 ಸಾವಿರದಿಂದ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದರು.

ದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪರಿಹಾರ ನೀಡಲಾಗುತ್ತಿದ್ದು, ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಟ್ಟು ಮೂಲ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.