ಎಂತಹ ದುರಂತ…ಭಿಕ್ಷಾಟನೆಗಿಳಿದಿದ್ದ ತಮಿಳು ಹಾಸ್ಯ ನಟ ಮೋಹನ್ ಶವ ಮದುರೈ ಬೀದಿಯಲ್ಲಿ ಪತ್ತೆ
ಕುಬ್ಜ ದೇಹದ ಮೋಹನ್ ಗೆ ಅಲ್ಲಿಯೂ ಸೂಕ್ತವಾದ ಕೆಲಸ ಸಿಗದೇ ಅಲೆದಾಟ
Team Udayavani, Aug 3, 2023, 4:53 PM IST
ಚೆನ್ನೈ: ಇತ್ತೀಚೆಗಷ್ಟೇ ಖ್ಯಾತ ನಿರ್ದೇಶಕ ನಿತಿನ್ ದೇಸಾಯಿ ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿಯ ಬೆನ್ನಲ್ಲೇ ಇದೀಗ 1980-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್ (60ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:BJP ಅಧಿಕಾರಕ್ಕೆ ಬಂದಿದ್ದೆ ರಕ್ತ ಕ್ರಾಂತಿ ಮಾಡಿ: ಆರ್.ಎಂ.ಮಂಜುನಾಥ್ ಗೌಡ
ಕಮಲ್ ಹಾಸನ್ ನಟನೆಯ ಸೂಪರ್ ಹಿಟ್ ಸಿನಿಮಾ ತಮಿಳಿನ ಅಪೂರ್ವ ಸಹೋದರ್ ಗಳ್ ಹಾಗೂ ನಾನ್ ಕಡವುಳ್ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಮೋಹನ್ ನಟಿಸಿದ್ದರು. ಆದರೆ ಇತ್ತೀಚೆಗೆ ಅವರಿಗೆ ಅವಕಾಶಗಳ ಕೊರತೆಯಿಂದಾಗಿ ತೀವ್ರ ಬಡತನದಲ್ಲಿ ಜೀವನ ಸಾಗಿಸುತ್ತಿದ್ದರು. ಅಷ್ಟೇ ಅಲ್ಲ ನಟ ಮೋಹನ್ ತಿರುಪರಂಕುಂದ್ರಂನ ದೇವಸ್ಥಾನದ ಸಮೀಪ ಭಿಕ್ಷೆ ಬೇಡಿ ಜೀವನ ಕಳೆಯುತ್ತಿದ್ದರು ಎಂದು ವರದಿ ವಿವರಿಸಿದೆ.
ರಸ್ತೆಯಲ್ಲಿಯೇ ಕೊನೆಯುಸಿರೆಳೆದ ಮೋಹನ್ ಬಗ್ಗೆ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ನಂತರ ಗುರುತುಪತ್ತೆ ಹಚ್ಚಲಾಗಿತ್ತು ಎಂದು ವರದಿ ತಿಳಿಸಿದೆ.
ಬಾಲಾ ನಿರ್ದೇಶನದ ನಾನ್ ಕಡವುಳ್ ತಮಿಳು ಸಿನಿಮಾ 2009ರಲ್ಲಿ ತೆರೆಕಂಡಿತ್ತು. ಚಿತ್ರ ಭರ್ಜರಿ ಕಲೆಕ್ಷನ್ ಕೂಡಾ ಮಾಡಿತ್ತು. ಆದರೆ ಈ ಸಿನಿಮಾದಲ್ಲಿ ಮೋಹನ್ ನಟಿಸಿದ ನಂತರ ಯಾವುದೇ ಅವಕಾಶಗಳು ಸಿಕ್ಕಿರಲಿಲ್ಲವಾಗಿತ್ತು. ಈ ಹಿನ್ನೆಲೆಯಲ್ಲಿ ಮೋಹನ್ ತಮ್ಮ ಊರಾದ ತಿರುಪರಂಕುಂದ್ರಂಗೆ ತೆರಳಿದ್ದರು. ಕುಬ್ಜ ದೇಹದ ಮೋಹನ್ ಗೆ ಅಲ್ಲಿಯೂ ಸೂಕ್ತವಾದ ಕೆಲಸ ಸಿಗದೇ, ರಸ್ತೆಯಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುವ ಸ್ಥಿತಿ ಬಂದೊದಗಿತ್ತು.
ಸುಮಾರು 10 ವರ್ಷಗಳ ಹಿಂದೆ ಮೋಹನ್ ಅವರ ಪತ್ನಿ ತೀರಿಕೊಂಡಿದ್ದರು. ಜುಲೈ 31ರಂದು ಮೋಹನ್ ಮೃತದೇಹ ಪತ್ತೆಯಾಗಿದ್ದು, ನಟನ ದೇಹ ಗುರುತಿಸಲಾಗದ ಸ್ಥಿತಿಯಲ್ಲಿದ್ದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್