ಕರಾವಳಿಯಲ್ಲಿ ವಾಯಿದೆ ಮೀರಿವೆ 68 ಸಾವಿರ ಹಳೆ ವಾಹನಗಳು!


Team Udayavani, Feb 7, 2023, 7:10 AM IST

ಕರಾವಳಿಯಲ್ಲಿ ವಾಯಿದೆ ಮೀರಿವೆ 68 ಸಾವಿರ ಹಳೆ ವಾಹನಗಳು!

ಮಂಗಳೂರು: ಕರಾವಳಿಯಲ್ಲಿ ನಾಲ್ಕು ವರ್ಷಗಳ ಅಂತರದಲ್ಲಿ ಬರೋಬ್ಬರಿ 68,951 ಸಾರಿಗೇತರ ವಾಹನಗಳು ವಾಯಿದೆ ಮೀರಿದ ವಾಹನಗಳ ಯಾದಿ ಸೇರಿವೆ.

ಈ ಪೈಕಿ ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ ಹಾಗೂ ಪುತ್ತೂರು ಆರ್‌ಟಿಒ ವ್ಯಾಪ್ತಿಯಲ್ಲಿ 48,522 ಹಾಗೂ ಉಡುಪಿಯಲ್ಲಿ 20,429 ಹಳೆವಾಹನಗಳು. ನೋಂದಣಿ ದಿನಾಂಕದಿಂದ 15 ವರ್ಷ ಮೀರಿದ ಸಾರಿಗೇತರ ದ್ವಿಚಕ್ರ, ಲಘು ಮೋಟಾರು ವಾಹನಗಳು ಇವುಗಳಲ್ಲಿ ಸೇರಿವೆ.

ಪ್ರಸ್ತುತ ರಾಜ್ಯದಲ್ಲಿ ಸುಮಾರು 14.3 ಲಕ್ಷ ವಾಹನಗಳು ವಾಯಿದೆ ಮೀರಿವೆ. ಇಂತಹ ವಾಹನಗಳನ್ನು ಗುಜರಿಗೆ ಹಾಕುವ ನೋಂದಾಯಿತ ವಾಹನಗಳ ಗುಜರಿ ಕೇಂದ್ರ (ಆರ್‌ವಿಎಸ್‌ಪಿ) ಗಳನ್ನು ಸ್ಥಾಪಿಸಲು ಸಲ್ಲಿಸಿದ್ದ “ಕರ್ನಾಟಕ ಗುಜರಿ ನೀತಿ-2022′ ಕರಡು ಯೋಜನೆ ಪ್ರಸ್ತಾವನೆಗೆ ರಾಜ್ಯ ಸರಕಾರ ಈಗಾಗಲೇ ಅನುಮೋದನೆ ನೀಡಿದೆ. ಇದರಂತೆ 15 ವರ್ಷ ತುಂಬಿರುವ ಖಾಸಗಿ ಹಾಗೂ ಸರಕಾರಿ ವಾಹನಗಳನ್ನು ಗುಜರಿಗೆ ಹಾಕುವ ಪ್ರಕ್ರಿಯೆ ಆರಂಭವಾಗಲಿದೆ.

ಗುಜರಿ ನೀತಿ ಯಾವಾಗ-ಗೊತ್ತಿಲ್ಲ!
“ಗುಜರಿ ನೀತಿ’ ಜಾರಿಯನ್ನು ಕೇಂದ್ರ-ರಾಜ್ಯ ಸರಕಾರಗಳು ಈಗಾಗಲೇ ಘೋಷಣೆ ಮಾಡಿವೆಯೇ ವಿನಾ ಈ ಕುರಿತ ಯಾವುದೇ ಬೆಳವಣಿಗೆ ನಡೆದಿಲ್ಲ. ಹೀಗಾಗಿ ನೀತಿ ಯಾವಾಗದಿಂದ ಜಾರಿಯಾಗುತ್ತದೆ ಎಂಬ ಬಗ್ಗೆ ನಿಖರತೆ ಇಲಾಖೆಯಲ್ಲಿಲ್ಲ. ಆದರೆ ವಾಯಿದೆ ಮೀರಿದ ವಾಹನಗಳು ಎಷ್ಟು ಎಂಬಿತ್ಯಾದಿ ಮಾಹಿತಿ ಸಂಗ್ರಹ ಮಾತ್ರ ಇಲಾಖೆಯಿಂದ ಸದ್ಯ ನಡೆಯುತ್ತಿದೆ.

ಏನಾಗಲಿದೆ?
ಗುಜರಿ ನೀತಿ ಬಂದ ಬಳಿಕ 15 ವರ್ಷ ಮೀರಿದ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಿ ಸವಲತ್ತು ಪಡೆಯಲು ಇಚ್ಛಿಸುವವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. 15 ವರ್ಷ ಮೀರಿದ ವಾಹನಗಳನ್ನು “ಹಸುರು ತೆರಿಗೆ’ ಪಾವತಿಸಿ ಬಳಸಲು ಕೂಡ ನೀತಿಯಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ವಾಹನಗಳು ಸುಸ್ಥಿತಿಯಲ್ಲಿ ಇವೆಯೇ ಎಂಬುದನ್ನು ತಪಾಸಣೆಗೆ ಒಳಪಡಿಸಲು ಸಂಪೂರ್ಣ ಸ್ವಯಂಚಾಲಿತ ಪರೀಕ್ಷಾ ಕೇಂದ್ರಗಳು ಅಲ್ಲಲ್ಲಿ ಸ್ಥಾಪನೆಯಾಗಲಿವೆ.

ಗುಜರಿ ಕೇಂದ್ರ-ಎಲ್ಲಿ?
ಸಾರಿಗೆ ಇಲಾಖೆಯಿಂದ ಅನುಮತಿ ಪಡೆದು ಸ್ಥಾಪಿಸುವ ಗುಜರಿ ಕೇಂದ್ರಗಳಲ್ಲಿ ಹಳೇ ವಾಹನಗಳನ್ನು “ಸಾðéಪ್‌’ ಮಾಡಲಾಗುತ್ತದೆ. ಆದರೆ ಗುಜರಿಗೆ ಹಾಕಲು ವಾಹನಗಳನ್ನು ಕೊಡುವ ಮುನ್ನ ವಾಹನದ ಮೇಲೆ ಯಾವುದೇ ಕ್ರಿಮಿನಲ್‌ ಹಿನ್ನೆಲೆ, ಕೇಸ್‌ ಹಾಗೂ ದಂಡ ಶುಲ್ಕ ಪಾವತಿ ಬಾಕಿ ಉಳಿಸಿಕೊಂಡಿಲ್ಲ ಎಂದು ಮಾಲಕ ಮುಚ್ಚಳಿಕೆ ಬರೆದುಕೊಡಬೇಕು. ಯಾವುದೇ ವ್ಯಕ್ತಿ, ಸಂಸ್ಥೆ, ಸೊಸೈಟಿ ಕಾನೂನುಬದ್ಧವಾಗಿ ಸಾðéಪಿಂಗ್‌ ಕೇಂದ್ರ ಸ್ಥಾಪಿಸಲು ಇಲಾಖೆ ಅವಕಾಶ ನೀಡುವ ಸಾಧ್ಯತೆಯಿದೆ.

ಗುಜರಿ ನಿಯಮ; ಲಾಭವೇನು ?
ಸ್ವಯಂಪ್ರೇರಿತವಾಗಿ ಹಳೆವಾಹನಗಳನ್ನು ಗುಜರಿಗೆ ಹಾಕಿದರೆ ವಾಹನ ಮಾಲಕರಿಗೆ ಸಾರಿಗೆ ಇಲಾಖೆಯು ಠೇವಣಿ ಪ್ರಮಾಣಪತ್ರ (ಸಿಒಡಿ) ವಿತರಿಸುತ್ತದೆ. ಹೊಸ ವಾಹನ ಖರೀದಿಸುವಾಗ ಆ ಪ್ರಮಾಣಪತ್ರ ತೋರಿಸಿದರೆ ಸಾರಿಗೇತರ ವಾಹನಕ್ಕೆ ಶೇ. 25ರಷ್ಟು ಹಾಗೂ ಸಾರಿಗೆ ವಾಹನಕ್ಕೆ ಶೇ. 15ರಷ್ಟು ತೆರಿಗೆ ವಿನಾಯಿತಿ ಸಿಗಲಿದೆ. ಈ ವಿನಾಯಿತಿ ಸಾರಿಗೇತರ ವಾಹನಕ್ಕೆ 15 ವರ್ಷದವರೆಗೆ ಹಾಗೂ ಸಾರಿಗೆ ವಾಹನಕ್ಕೆ 8 ವರ್ಷದವರೆಗೆ ಲಭ್ಯವಿರುತ್ತದೆ.

ವಾಯಿದೆ ಮೀರಿದ ವಾಹನಗಳು ಹಾಗೂ ಗುಜರಿ ನೀತಿ ಜಾರಿಗೆ ಸಂಬಂಧಿಸಿದ ಕೊನೆಯ ಹಂತದ ಪ್ರಕ್ರಿಯೆ ಸಾರಿಗೆ ಇಲಾಖೆಯಲ್ಲಿ ನಡೆಯುತ್ತಿದೆ. ಸದ್ಯಕ್ಕೆ ಈ ಬಗ್ಗೆ ಇಲಾಖೆಯಿಂದ ಯಾವುದೇ ನಿರ್ದೇಶನ ಬಂದಿಲ್ಲ. ಆದರೆ ಶೀಘ್ರದಲ್ಲಿ ಹಳೆ ವಾಹನಗಳಿಗೆ ಮುಕ್ತಿ ನೀಡುವ ನೀತಿಯ ಅನುಷ್ಠಾನದ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ.
– ಭೀಮನಗೌಡ ಪಾಟೀಲ್‌, ಆರ್‌ಟಿಒ, ಮಂಗಳೂರು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.