ಅವಿಭಜಿತ ಕುಂದಾಪುರ ತಾ.: 69 ಕೆರೆಗಳಿಗೆ ಮರುಜೀವ

ಕುಂದಾಪುರ 48 ಕೆರೆ, ಬೈಂದೂರು 21 ಕೆರೆ ಅಭಿವೃದ್ಧಿ ಆಲೂರು, ಹೇರೂರು ಗ್ರಾ.ಪಂ.ಗಳಿಂದ ಗರಿಷ್ಠ ಸಾಧನೆ

Team Udayavani, Feb 8, 2023, 9:50 AM IST

ponds

ಕುಂದಾಪುರ: ಗ್ರಾಮೀಣ ಜನರ ಜೀವನೋಪಾಯಕ್ಕಾಗಿ ವರದಾನವಾಗಿರುವ ನರೇಗಾ ಯೋಜನೆಯು, ಇದೇ ಗ್ರಾಮಾಂತರ ಪ್ರದೇಶಗಳ ಜೀವನಾಡಿಯಾಗಿರುವ ಹತ್ತಾರು ಕೆರೆಗಳಿಗೆ ಕಾಯಕಲ್ಪ ನೀಡುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತಿದೆ. 2022ನೇ ಸಾಲಿನಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ 69 ಕೆರೆಗಳ ಪುನಶ್ಚೇತನಗೊಳಿಸಲಾಗಿದೆ. ಕುಂದಾಪುರ ತಾಲೂಕಿನಲ್ಲಿ ಕಳೆದ ವರ್ಷವಿವಿಧ ಗ್ರಾಮಗಳ ಒಟ್ಟು 48 ಕೆರೆಗಳನ್ನು
ಹಾಗೂ ಬೈಂದೂರು ತಾಲೂಕಿನ 21 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. 2021 ರಲ್ಲಿ ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಒಟ್ಟು 82 ಕೆರೆಗಳಿಗೆ ಮರುಜೀವ ನೀಡಲಾಗಿದೆ.

ಕುಂದಾಪುರ ತಾ: 48 ಕೆರೆ ಕುಂದಾಪುರ ತಾಲೂಕಿನ ಆಲೂರಲ್ಲಿ ಗರಿಷ್ಠ 8 ಕೆರೆ ಅಭಿವೃದ್ಧಿಪಡಿಸಿದ್ದು, ಹಕ್ಲಾಡಿ 6, ಬೀಜಾಡಿ, ಕಟ್‌ಬೆಲ್ತೂರು ತಲಾ 4, ಕಾಳಾವರ, ಬಳ್ಕೂರು ತಲಾ 3, ವಂಡ್ಸೆ 2, ತಲ್ಲೂರು, ಹೆಮ್ಮಾಡಿ, 74 ಉಳ್ಳೂರು, ಆನಗಳ್ಳಿ, ಗುಜ್ಜಾಡಿ, ಚಿತ್ತೂರು, ಗೋಪಾಡಿ, ಹಾಲಾಡಿ, ಹಂಗಳೂರು, ಹಾರ್ದಳ್ಳಿ – ಮಂಡಳ್ಳಿ, ಹೊಂಬಾಡಿ- ಮಂಡಾಡಿ, ಹಟ್ಟಿಯಂಗಡಿ, ಹೆಮ್ಮಾಡಿ, ಹೆಂಗವಳ್ಳಿ, ಕಂದಾವರ, ಕೆದೂರು, ಕುಂಭಾಶಿ, ತೆಕ್ಕಟ್ಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೆರೆ ಸೇರಿದಂತೆ ಒಟ್ಟು 48 ಕೆರೆಗಳಿಗೆ ಉದ್ಯೋಗ ಖಾತರಿ ಯೋಜನೆಯಡಿ ಮರುಜೀವ ನೀಡಲಾಗಿದೆ.

ಬೈಂದೂರು ತಾ: 21 ಕೆರೆ ಬೈಂದೂರು ತಾಲೂಕಿನ ಹೇರೂರಲ್ಲಿ ಗರಿಷ್ಠ 7 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ನಾಡ-4, ನಾವುಂದ -3,
ಶಿರೂರು 2, ಬಿಜೂರು, ಉಪ್ಪುಂದ, ಮರವಂತೆ, ಕೊಲ್ಲೂರು, ಕೆರ್ಗಾಲು ಗ್ರಾ.ಪಂ. ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೆರೆ ಸೇರಿದಂತೆ ಒಟ್ಟು 21 ಕೆರೆಗಳಿಗೆ ಉದ್ಯೋಗ ಖಾತರಿ ಯೋಜನೆಯಡಿ ಮರುಜೀವ ನೀಡಲಾಗಿದೆ.

ಗ್ರಾ.ಪಂ.ಗಳಿಗೆ ಸೂಚನೆ
ನರೇಗಾದಡಿ ಬೈಂದೂರು ತಾಲೂಕಿನಲ್ಲಿ ಅನೇಕ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಕೆರೆ ಮಾತ್ರವಲ್ಲದೆ ನದಿ ಹೂಳೆತ್ತುವ ಕಾರ್ಯ, ಮಳೆ ನೀರು ಕೊಯ್ಲುಗಳನ್ನು ಅಳವಡಿಸಲಾಗಿದೆ. ಇದರಿಂದ ಜಲ ಸಂರಕ್ಷಣೆ, ಅಂತರ್ಜಲ ವೃದ್ಧಿಗೂ ಸಹಾಯವಾಗಲಿದೆ. ಮಳೆಗಾಲದವರೆಗೆ ಗರಿಷ್ಠ ಕೆರೆಗಳನ್ನು ಅಭಿವೃದ್ಧಿಪಡಿಸಲು ಗ್ರಾ.ಪಂ.ಗಳಿಗೆ ಸೂಚನೆ ನೀಡಲಾಗಿದೆ.
ಭಾರತಿ, ಕಾರ್ಯನಿರ್ವಹಣಾಧಿಕಾರಿ, ಬೈಂದೂರು ತಾ.ಪಂ.

 

40 ಸಾವಿರ ಮಾನವ ದಿನ ಸೃಜನೆ

ಉಭಯ ತಾಲೂಕಿನಲ್ಲಿ ಈ 69 ಕೆರೆಗಳ ಪುನಶ್ಚೇತನಕ್ಕಾಗಿ ಒಟ್ಟಾರೆ 40,990 ಮಾನವ ದಿನಗಳ ಸೃಜನೆ ಮಾಡಲಾಗಿದೆ. ಈ ಪೈಕಿ ಕುಂದಾಪುರದಲ್ಲಿ 31,014 ಮಾನವ ದಿನಗಳು ಹಾಗೂ ಬೈಂದೂರಲ್ಲಿ 9,976 ಮಾನವ ದಿನಗಳ ಸೃಜನೆ ಗುರಿ ಸಾಧಿಸಲಾಗಿದೆ.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

1-wqewqe

ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್

josh hazlewood glenn maxwell will not feature opening match of RCB

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆ ಅಕ್ರಮ ತಡೆಗೆ ಹದ್ದಿನ ಕಣ್ಣು: ತಪಾಸಣೆ ಬಿಗಿ 

ಚುನಾವಣೆ ಅಕ್ರಮ ತಡೆಗೆ ಹದ್ದಿನ ಕಣ್ಣು: ತಪಾಸಣೆ ಬಿಗಿ 

ಮದ್ಯಪಾನ ಮಾಡಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಿ ಉಪಚರಿಸಿ ಮಾನವೀಯತೆ ಮೆರೆದ ಡಿಸಿ, ಎಸ್‌ಪಿ

ಮದ್ಯಪಾನ ಮಾಡಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಿ ಉಪಚರಿಸಿ ಮಾನವೀಯತೆ ಮೆರೆದ ಡಿಸಿ, ಎಸ್‌ಪಿ

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಕುಡಿಯುವ ನೀರು ಪೂರೈಕೆಗೆ ಕ್ರಮ: ಉಡುಪಿ ಡಿ.ಸಿ

ಕುಡಿಯುವ ನೀರು ಪೂರೈಕೆಗೆ ಕ್ರಮ: ಉಡುಪಿ ಡಿ.ಸಿ

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ

ಯಕ್ಷಗಾನ, ಕೋಲ ನಡೆಸಬಹುದೇ..? ಚುನಾವಣಾ ನೀತಿ ಸಂಹಿತೆ ಬಗ್ಗೆ ದ.ಕನ್ನಡ ಡಿಸಿ ಮಾಹಿತಿ