ಉಡುಪಿ ಜಿಲ್ಲೆಯಲ್ಲಿ ಚರ್ಮಗಂಟು ರೋಗದಿಂದ 74 ಜಾನುವಾರು ಸಾವು

ಗರಿಷ್ಠ ಪರಿಹಾರದ ನಿರೀಕ್ಷೆಯಲ್ಲಿ ಹೈನುಗಾರರು : ರೋಗ ಹಬ್ಬುವಿಕೆ ಪ್ರಮಾಣ ನಿಯಂತ್ರಣಕ್ಕೆ

Team Udayavani, Feb 22, 2023, 11:18 AM IST

poll

ಉಡುಪಿ: ಹೈನುಗಾರಿಕೆ, ಕೃಷಿಕ ಸಮೂಹವನ್ನೇ ಬೆಚ್ಚಿ ಬೀಳಿಸಿರುವ ಚರ್ಮಗಂಟು ರೋಗಕ್ಕೆ ಜಿಲ್ಲೆಯಲ್ಲಿ ಈವರೆಗೂ 74 ಜಾನುವಾರುಗಳು ಸಾವನ್ನಪ್ಪಿವೆ. ಡಿಸೆಂಬರ್‌, ಜನವರಿ ತಿಂಗಳಲ್ಲಿ ರೋಗ ಪ್ರಮಾಣ ಹೆಚ್ಚಿದ್ದು, ಜಾನುವಾರುಗಳ ಜೀವ ಹಿಂಡಿತ್ತು, ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಜಾನುವಾರು ರೋಗಬಾಧೆಯಿಂದ ಬಳಲುತ್ತಿವೆ. ಜಿಲ್ಲೆಯಲ್ಲಿ 2,57,184 ಲಕ್ಷ ಜಾನುವಾರುಗಳಿದ್ದು, ಸಂಪೂರ್ಣ ಲಸಿಕೆ ಹಾಕಿಸುವ ಪ್ರಕ್ರಿಯೆ ಜಿಲ್ಲೆ ಪಶುವೈದ್ಯರು, ಸಿಬಂದಿ ತಂಡ ಮುಗಿಸಿದೆ. ಕುಂದಾಪುರ, ಹೆಬ್ರಿ, ಬ್ರಹ್ಮಾವರ, ಕಾರ್ಕಳ ಭಾಗದಲ್ಲಿ ಹೈನುಗಾರಿಕೆ ಹೆಚ್ಚಿದೆ.

ಆರಂಭದಲ್ಲಿ ಬೇರೆ ಜಿಲ್ಲೆಗಳಲ್ಲಿ ಸೋಂಕು ವ್ಯಾಪಕವಾಗಿ ಹಬ್ಬಿದ್ದು, ಅನಂತರ ಉಡುಪಿ ಜಿಲ್ಲೆಯಲ್ಲಿಯೂ ಕಾಣಿಸಿಕೊಂಡಿರುವುದು ಹೈನುಗಾರಿಕೆ, ಕೃಷಿಕ ವರ್ಗದವರಲ್ಲಿ ತೀರ ಆತಂಕಕ್ಕೆ ಕಾರಣವಾಗಿತ್ತು. ಹೈನುಗಾರರು ಚರ್ಮಗಂಟು ರೋಗದಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹಸುಗಳು ಆರ್ಥಿಕ ಶಕ್ತಿಯ ಜತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿವೆ. ಬೈಂದೂರು, ಹೆಬ್ರಿ, ಬ್ರಹ್ಮಾವರ ಭಾಗದಲ್ಲಿ ಹೆಚ್ಚು ಜಾನುವಾರುಗಳು ಮೃತಪಟ್ಟಿದೆ. ಪ್ರಸ್ತುತ ಚರ್ಮಗಂಟು ರೋಗ ಹಬ್ಬುವಿಕೆ ಪ್ರಮಾಣ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ಈಗಾಗಲೆ ಮೃತಪಟ್ಟ ಜಾನುವಾರುಗಳ ಸಾಕಣೆದಾರರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದೆ.

ಶೀಘ್ರದಲ್ಲೇ ಪರಿಹಾರ
ರೋಗ ಪ್ರಮಾಣ ಸಂಪೂರ್ಣ ಇಳಿಮುಖವಾಗಿದ್ದು, ಹೈನುಗಾರರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಎಲ್ಲ ದನಗಳಿಗೆ ಲಸಿಕೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ನಿರಂತರ ಲಸಿಕೆ ಹಾಕುವುದು, ಕ್ವಾರಂಟೈನ್‌ ನೀತಿ, ವ್ಯವಸ್ಥಿತ ಚಿಕಿತ್ಸೆಯಿಂದ ರೋಗ ಹಬ್ಬುವ ಪ್ರಮಾಣ ನಿಯಂತ್ರಿಸಲು ಸಾಧ್ಯವಾಯಿತು. ಈಗಾಗಲೇ ಸಾವನ್ನಪ್ಪಿರುವ ಹಸುಗಳಿಗೆ ಪರಿಹಾರ ನೀಡಲು ಸರಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಹೈನುಗಾರರಿಗೆ ಪರಿಹಾರ ದೊರೆಯಲಿದೆ.
-ಡಾ| ಶಂಕರ್‌ಶೆಟ್ಟಿ, ಉಪ ನಿರ್ದೇಶಕರು, ಪಶು ಸಂಗೋಪನ ಇಲಾಖೆ, ಉಡುಪಿ ಜಿಲ್ಲೆ

ಸರಕಾರ ಕ್ರಮ ಕೈಗೊಳ್ಳಲಿ
ಮೂರು ವರ್ಷಗಳ ಅವಧಿಗೆ ಸಾಮೂಹಿಕ ಜಾನುವಾರು ವಿಮೆ ಅಡಿಯಲ್ಲಿ ದ.ಕ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಜಿಲ್ಲೆಯಲ್ಲಿ 50 ಸಾವಿರ ದನಗಳಿಗೆ ವಿಮೆ ಮಾಡಿಸಲಾಗಿದೆ. ಇದರಲ್ಲಿ ಶೇ.75 ವಿಮಾ ಮೊತ್ತವನ್ನು ಒಕ್ಕೂಟವೇ ಭರಿಸಲಿದ್ದು, ಉಳಿದ ಶೇ.25 ಮೊತ್ತವನ್ನು ದನ ಸಾಕಣೆದಾರರು ಭರಿಸಬೇಕು. ದನಗಳಿಗೆ ವಿಮೆ ಮಾಡಿಸದವರು ಈ ವಿಮಾ ಸೌಲಭ್ಯ ಪಡೆಯಲು ಒಂದು ತಿಂಗಳು ಕಾಲಾವಕಾಶ ನೀಡಲಾಗಿದೆ. ಚರ್ಮಗಂಟು ರೋಗದಿಂದ ಸಾವನ್ನಪ್ಪಿರುವ ಜಾನುವಾರುಗಳಿಗೆ ಸರಕಾರ ಗರಿಷ್ಠ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳಬೇಕು.
– ಸಾಣೂರು ನರಸಿಂಹ ಕಾಮತ್‌, ರಾಜ್ಯ ಸಂಚಾಲಕ, ಸಹಕಾರ ಭಾರತೀ ಹಾಲು ಪ್ರಕೋಷ್ಠ

ಪರಿಹಾರ ಮೊತ್ತವೆಷ್ಟು ?
ಒಟ್ಟು ದನಗಳ ಸಂಖ್ಯೆಗೆ ಹೋಲಿಸಿದಲ್ಲಿ ಸಾವಿನ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆ ಇದೆ. ಸಾವನ್ನಪ್ಪಿರುವ ಜಾನುವಾರುಗಳಿಗೆ ಸರಕಾರದಿಂದ ಪರಿಹಾರ ಸಿಗಲಿದೆ. ಕರುವಿಗೆ 5 ಸಾವಿರ ರೂ., ಹಸುವಿಗೆ 10 ಸಾವಿರ ರೂ., ಎತ್ತುಗಳಿಗೆ 30 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ರೋಗಬಾಧಿತ – ಸಾವನ್ನಪ್ಪಿದ ಹಸುಗಳ ವಿವರ
ತಾಲೂಕು       ಬಾಧಿತ      ಚಿಕಿತ್ಸೆ        ಸಾವು
ಉಡುಪಿ             225            77                 6
ಕಾಪು                 355             33                5
ಬ್ರಹ್ಮಾವರ         1,629         7                  18
ಕುಂದಾಪುರ       409          18                  5
ಬೈಂದೂರು       1,553         17                 16
ಕಾರ್ಕಳ             1,031         10                 9
ಹೆಬ್ರಿ                  1,167          56                15
ಒಟ್ಟು             6,369       218             74

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.