Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ಎಡಪಂಥೀಯ ಭಯೋತ್ಪಾದನೆಗೆ ಸಂಬಂಧಿಸಿದ ಹಿಂಸಾಚಾರ ದೇಶದಲ್ಲಿ ಶೇ.52ರಷ್ಟು ಇಳಿಕೆ
Team Udayavani, Apr 18, 2024, 4:58 PM IST
ನವದೆಹಲಿ: ಛತ್ತೀಸ್ ಗಢದಲ್ಲಿ ಈ ವರ್ಷದಲ್ಲಿ ಈವರೆಗೆ ಕನಿಷ್ಠ 80 ನಕ್ಸಲೀಯರು ಹತ್ಯೆಗೀಡಾಗಿದ್ದು, 125ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೇ 150 ನಕ್ಸಲೀಯರು ಶರಣಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?
ಎರಡು ದಿನಗಳ ಹಿಂದಷ್ಟೇ 29 ನಕ್ಸಲೀಯರು ಭದ್ರತಾ ಪಡೆಯ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಎಡಪಂಥೀಯ ಭಯೋತ್ಪಾದನೆಗೆ ಸಂಬಂಧಿಸಿದ ಹಿಂಸಾಚಾರ ದೇಶದಲ್ಲಿ ಶೇ.52ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿಅಂಶ ವಿವರಿಸಿದೆ.
ಕಳೆದ ವರ್ಷ ನಕ್ಸಲ್ ಹಾವಳಿ ಇರುವ ರಾಜ್ಯಗಳ ಭದ್ರತಾ ಪರಿಶೀಲನಾ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾವೋವಾದಿಗಳ ವಿರುದ್ಧ ತೀವ್ರ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದರು.
ಶಾ ಅವರ ನಿರ್ದೇಶನದಂತೆ ಡೈರೆಕ್ಟರ್ ಜನರಲ್ ಪೊಲೀಸ್, ಡೈರೆಕ್ಟರ್ ಜನರಲ್ ಆಫ್ ಸೆಂಟ್ರಲ್ ರಿಸರ್ವ್ ಪೊಲೀಸ್ ಪೋರ್ಸ್, ಗಡಿ ಭದ್ರತಾ ಪಡೆ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್, ಇಂಟೆಲಿಜೆನ್ಸ್ ಬ್ಯುರೂ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿತ್ತು ಎಂದು ವರದಿ ವಿವರಿಸಿದೆ.
2004ರಿಂದ 2014ವರೆಗೆ ಮಾವೋವಾದಿಗಳ ದಾಳಿಯಲ್ಲಿ 1,750 ಭದ್ರತಾ ಸಿಬಂದಿಗಳು ಸಾವನ್ನಪ್ಪಿದ್ದರು. 2014ರಿಂದ 2023ರವರೆಗೆ ಈ ಸಂಖ್ಯೆ 4,285ರಿಂದ 1,383ಕ್ಕೆ ಇಳಿಕೆಯಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ