ಇಂಧನ ಬೆಲೆ ಏರಿಕೆ ನಮ್ಮ ಕೈಯಲ್ಲಿಲ್ಲ; ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್
ಕಚ್ಚಾ ತೈಲದ ಬೆಲೆ ವಿನಿಮಯ ದರ, ಸರಕು ಸಾಗಣೆ ಮತ್ತು ಡೀಲರ್ ಬೆಲೆ ಆಧಾರಿತವಾಗಿರುತ್ತದೆ
Team Udayavani, Feb 4, 2022, 11:56 AM IST
ಹೊಸದಿಲ್ಲಿ: ಇಂಧನ ಬೆಲೆ ಏರಿಕೆ ಕೇಂದ್ರ ಸರಕಾರದ ಕೈಯಲ್ಲಿಲ್ಲ. ಅದು ಅಂತಾರಾಷ್ಟ್ರೀಯವಾಗಿ ನಿರ್ಧಾರವಾಗು ತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಇದನ್ನೂ ಓದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 220 ಅಂಕ ಇಳಿಕೆ; ಲಾಭ, ನಷ್ಟ ಕಂಡ ಷೇರು ಯಾವುದು?
1979-86ರ ಅವಧಿಯಲ್ಲಿ ಪೆಟ್ರೋಲ್ ಮತ್ತು ನೈಸರ್ಗಿಕ ಅನಿಲ ಬೆಲೆ ಶೇ.126 ಮತ್ತು 2000-2007ರಲ್ಲಿ ಶೇ.60 ಏರಿಕೆ ಯಾಗಿದೆ. ಕಳೆದ 7 ವರ್ಷಗಳಲ್ಲಿ ಶೇ. 30 ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ಲಭ್ಯವಿರುವ ಕಚ್ಚಾ ತೈಲಕ್ಕಿಂತ ಹೆಚ್ಚಿನ ಬೇಡಿಕೆಯಿದೆ. ಇದರಿಂದಾಗಿ ಬೆಲೆ ಏರಿಕೆ ಯಾಗುತ್ತಿದೆ. ಕಚ್ಚಾ ತೈಲದ ಬೆಲೆ ವಿನಿಮಯ ದರ, ಸರಕು ಸಾಗಣೆ ಮತ್ತು ಡೀಲರ್ ಬೆಲೆ ಆಧಾರಿತವಾಗಿರುತ್ತದೆ ಎಂದು ಲೋಕಸಭೆಗೆ ಅವರು ತಿಳಿಸಿದ್ದಾರೆ.
ಪೆಟ್ರೋಲ್ ಜತೆ ಎಥೆನಾಲ್ ಬೆರೆಸುವ ವಿಚಾರದಲ್ಲಿ ಮಾತನಾಡಿದ ಅವರು, “ಶೇ.9 ಎಥೆನಾಲ್ ಬೆರೆಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. 2025ರ ವೇಳೆಗೆ ಶೇ.20ರಷ್ಟು ಪ್ರಮಾಣದಲ್ಲಿ ಎಥೆನಾಲ್ ಬೆರೆಸುವ ಪ್ರಕ್ರಿಯೆಯಲ್ಲಿ ಯಶಸ್ವಿಯಾಗುವ ಸಾಧ್ಯತೆ ಇದೆ ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.
ರಿವರ್ಸ್ ರೆಪೋ ದರ ಹೆಚ್ಚಳ ಸಾಧ್ಯತೆ?
ಮುಂಬಯಿ: ಆರ್ಬಿಐನ ವಿತ್ತೀಯ ನೀತಿ ಪರಿಶೀಲನ ಸಭೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ರಿಸರ್ವ್ ರೆಪೋ ದರವನ್ನು ಶೇ. 0.20ರಿಂದ ಶೇ.0.25ರವರೆಗೆ ಪರಿಷ್ಕರಿಸುವ ಸಾಧ್ಯತೆ ಇದೆ. ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣ, ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ಸಂಬಂಧಿಸಿದ ವಿಚಾರಗಳು ಪ್ರೋತ್ಸಾಹದಾಯಕವಾಗಿಲ್ಲ. ಹೀಗಾಗಿ ಇಂಥ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಬ್ಯಾಂಕ್ಗಳು ತಮ್ಮಲ್ಲಿ ಇರುವ ಹೆಚ್ಚುವರಿ ಹಣವನ್ನು ಆರ್ಬಿಐನಲ್ಲಿ ಇರಿಸುವ ಠೇವಣಿಗೆ ವಿಧಿಸುವ ಬಡ್ಡಿದರಕ್ಕೆ ರಿವರ್ಸ್ ರೆಪೋ ಎಂದು ಹೆಸರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ