ರಾಮನಗರ ಜಿಲ್ಲೆಯಾದ್ಯಂತ ಕಳೆದ 5 ವರ್ಷದಲ್ಲಿ 91 ಕೆ.ಜಿ.ಗಾಂಜಾ ವಶ


Team Udayavani, Sep 10, 2020, 11:00 AM IST

ರಾಮನಗರ ಜಿಲ್ಲೆಯಾದ್ಯಂತ ಕಳೆದ 5 ವರ್ಷದಲ್ಲಿ 91 ಕೆ.ಜಿ.ಗಾಂಜಾ ವಶ

ರಾಮನಗರ: ಜಿಲ್ಲೆಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಗಾಂಜಾ ಬೆಳೆ ವಿರುದ್ಧ ಜಿಲ್ಲಾ ಪೊಲೀಸರು, ಹದ್ದಿನ ಕಣ್ಣು ಇಟ್ಟಿದ್ದಾರೆ.

ಕಳೆದ 5 ವರ್ಷಗಳಲ್ಲಿ ಸುಮಾರು 91 ಕೆ.ಜಿ. ಗಾಂಜಾವನ್ನು ಜಿಲ್ಲಾದ್ಯಂತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, 52 ಪ್ರಕರಣ  ದಾಖಲಿಸಿದ್ದಾರೆ. ಕಳೆದೊಂದು ವಾರದಲ್ಲಿ ಪೊಲೀಸರು ಸುಮಾರು 15 ಕೆ.ಜಿ ಗಾಂಜಾ ವಶಕ್ಕೆ ಪಡೆದು 9 ಮಂದಿಯನ್ನು ಬಂಧಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮಾದಕ ವಸ್ತುಗಳ ಕಮಟು ವಾಸನೆ ಬಂದ ಕೂಡಲೇ ಜಿಲ್ಲೆಯಲ್ಲಿ ಪೊಲೀಸರು ಇನ್ನಷ್ಟು ಅಲರ್ಟ್‌ ಆಗಿದ್ದಾರೆ. ಕಳೆದ ವರ್ಷ ಐಜೂರು ಠಾಣೆ ಪೊಲೀಸರು 4.4 ಲಕ್ಷ ರೂ., ಮೌಲ್ಯದ 44 ಕೆ.ಜಿ. ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು.
ಕಳೆದೊಂದು ವಾರದಲ್ಲೇ ಸುಮಾರು 15 ಕೆ.ಜಿ ಗಾಂಜಾವನ್ನು ಪೊಲೀಸರು ಅಮಾನತುಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಇತ್ತೀಚೆಗಷ್ಟೆ ವರ್ಗಾವಣೆ  ಆಗಿರುವ ಎಸ್ಪಿ ಅನೂಪ್‌ ಎ.ಶೆಟ್ಟಿ ಮಾದಕ ದ್ರವ್ಯ ಮತ್ತು ವಸ್ತುಗಳ ವಿರುದ್ಧ ಸಮರವನ್ನೇ ಸಾರಿದ್ದರು. ಇದೀಗ ನೂತನ ಎಸ್ಪಿಯಾಗಿ ವರ್ಗವಾಗಿರುವ ಎಸ್‌.ಗಿರೀಶ್‌ ಅವರೂ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಕೃಷಿ ಬೆಳೆ ನಡುವೆ ಗಾಂಜಾ ಬೆಳೆ: ಹಣದಾಸೆಗೆ ಬಿದ್ದಿರುವ ಅನೇಕರು ಗ್ರಾಮಗಳಲ್ಲಿ ತಮ್ಮ ತೋಟ, ಗದ್ದೆ, ಮನೆಯ ಹಿತ್ತಲು ಹೀಗೆ ಅನ್ಯ ಗಿಡಗಳು, ಕೃಷಿ ಬೆಳೆಗಳ ನಡುವೆ ಗಾಂಜಾ ಗಿಡ ಬೆಳೆಸಿರುವ ಪ್ರಕರಣ ಪತ್ತೆಯಾಗುತ್ತಿವೆ. ಆ.30ರಂದು ಬಿಡದಿ ಠಾಣೆ ವ್ಯಾಪ್ತಿಯ ಬೆತ್ತನಗೆರೆ ಗ್ರಾಮದ ಜಮೀನಿನಲ್ಲಿ ತೊಗರಿ, ಮೆಣಸಿನಕಾಯಿ ಮಧ್ಯೆ ಬೆಳೆಯಲಾಗಿದ್ದ 40 ಸಾವಿರ ಮೌಲ್ಯದ 10 ಕೆ.ಜಿ.ಯನ್ನು ವಶಕ್ಕೆ ಪಡೆದಿದ್ದರು.

ಇದೇ ದಿನ ಕಗ್ಗಲಿಪುರ ಠಾಣೆ ವ್ಯಾಪ್ತಿಯಲ್ಲಿ ಗುಳಕ ಮಲೆ ಗ್ರಾಮದ ಬಳಿ ವಿಜಯ್‌ ಕುಮಾರ್‌ ಎಂಬವರ ತೋಟದಲ್ಲಿ ಇಬ್ಬರನ್ನು ಬಂಧಿಸಿ 145 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಸೆ.8ರಂದು ಜಿಲ್ಲೆಯ ಕೋಡಿಹಳ್ಳಿ ಠಾಣಾ ವ್ಯಾಪ್ತಿಯ ಬೆಟ್ಟೇಗೌಡನ ದೊಡ್ಡಿ ಗ್ರಾಮದಲ್ಲಿ ಅಲಗೇ ಗೌಡ ಎಂಬ ವ್ಯಕ್ತಿ ತನ್ನ ಮನೆ ಹಿತ್ತಲಲ್ಲಿ ಈರೇಕಾಯಿ, ಸೌತೇ ಕಾಯಿ ಬಳ್ಳಿಗಳ ಮಧ್ಯೆ ಬೆಳೆಸಿದ್ದ ಗಾಂಜಾ ಗಿಡ ಪತ್ತೆ ಹಚ್ಚಿದ್ದರು. ಜಿಲ್ಲೆಯ ನಗರ, ಪಟ್ಟಣ, ಪ್ರವಾಸೋದ್ಯಮ ತಾಣ, ರೈಲು, ಬಸ್‌ ನಿಲ್ದಾಣ, ಕಾಲೇಜು ಬಳಿ, ಪ್ರಮುಖ ವೃತ್ತ ಹೀಗೆ ಜನನಿಬಿಡ ಪ್ರದೇಶ, ಅಕ್ರಮ ಮದ್ಯ ಸ್ಥಳಗಳಲ್ಲಿ ನಿಗಾ ಇಟ್ಟಿದ್ದಾರೆ.

ಟಾಪ್ ನ್ಯೂಸ್

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.