ಕೈ ನಿರ್ದೇಶಕರನ್ನೇ ಹೈಜಾಕ್ ಮಾಡಿದ ರೇವಣ್ಣ
ಕೆಎಂಎಫ್ ಗಾದಿಗೆ ದೋಸ್ತಿಗಳ ನಡುವೆ ಕಾದಾಟ
Team Udayavani, Jul 27, 2019, 11:09 PM IST
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವೆ ಫೈಟ್ ಆರಂಭವಾಗಿದ್ದು, ಕಾಂಗ್ರೆಸ್ಗೆ ಸೇರಿದ ನಾಲ್ವರು ನಿರ್ದೇಶಕರನ್ನು ಜೆಡಿಎಸ್ ನಾಯಕರು ಹೈದರಾಬಾದ್ನಲ್ಲಿರುವ ರೆಸಾರ್ಟ್ಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ನ ಹಗರಿಬೊಮ್ಮನಹಳ್ಳಿಯ ಶಾಸಕ ಭೀಮಾನಾಯ್ಕ ಅವರ ಹೆಸರು ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಎಚ್.ಡಿ.ರೇವಣ್ಣ ಅವರು ಆಕಾಂಕ್ಷಿಯಾಗಿದ್ದರು. ಸಮ್ಮಿಶ್ರ ಸರಕಾರ ಇದ್ದಾಗ ಎಚ್.ಡಿ.ಕುಮಾರಸ್ವಾಮಿ, ಡಾ| ಜಿ.ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಚರ್ಚಿಸಿ ಭೀಮಾನಾಯ್ಕಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಡಲು ತೀರ್ಮಾನಿಸಲಾಗಿತ್ತು ಎಂದು ಹೇಳಲಾಗಿದೆ.
ಆದರೆ ಇದೀಗ ಉಡುಪಿ, ಧಾರವಾಡ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳ ಕಾಂಗ್ರೆಸ್ಗೆ ಸೇರಿದ ನಿರ್ದೇಶಕರನ್ನು ಹೈದರಾಬಾದ್ ರೆಸಾರ್ಟ್ಗೆ ಕರೆದೊಯ್ಯಲಾಗಿದೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರೇ ನಿರ್ದೇಶಕರನ್ನು ಹೈಜಾಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಜೆಡಿಎಸ್ ನಾಯಕರು ಇದನ್ನು ನಿರಾಕರಿಸಿದ್ದಾರೆ.
ಕೆಎಂಎಫ್ ನಲ್ಲಿ ಕಾಂಗ್ರೆಸ್ನ 9, ಜೆಡಿಎಸ್ನ ಮೂವರು ನಿರ್ದೇಶಕರಿದ್ದು ಕಾಂಗ್ರೆಸ್ಗೆ ಅಧ್ಯಕ್ಷ ಸ್ಥಾನ ಸಿಗುತ್ತಿತ್ತು. ಆದರೆ ಇದೀಗ ನಾಲ್ವರು ನಿರ್ದೇಶಕರನ್ನು ಹೈಜಾಕ್ ಮಾಡಿರುವುದರಿಂದ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ