ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ
Team Udayavani, Mar 29, 2023, 4:19 PM IST
ಸಾಗರ: ಅಳಿಯ ಗೋಪಾಲಕೃಷ್ಣ ಬೇಳೂರು ಪರವಾಗಿ ಕ್ಷೇತ್ರದಾದ್ಯಂತ ಪ್ರಚಾರ ನಡೆಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೇ ನನ್ನ ಮುಂದಿರುವ ಗುರಿ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.
ಇಲ್ಲಿನ ಜೋಸೆಫ್ ನಗರದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ತಮ್ಮ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಶೀರ್ವಾದ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಕ್ಷದ ವಿರುದ್ಧ ಬಂಡಾಯ ಎದ್ದಿರುವವರ ಕಾಲು ಹಿಡಿದು ಪಕ್ಷದ ಪರವಾಗಿ ಕೆಲಸ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ಹೇಳಿದರು.
ಕ್ಷೇತ್ರವ್ಯಾಪ್ತಿಯಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ. ಗಣಪತಿ ಕೆರೆ ಒಂದು ದಂಡೆ ಮಾತ್ರ ಅಭಿವೃದ್ಧಿಯಾಗಿದ್ದು ಅದನ್ನೇ ಪರಿಪೂರ್ಣ ಅಭಿವೃದ್ಧಿ ಎಂದು ಶಾಸಕ ಹಾಲಪ್ಪ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬೇಳೂರು ಪಕ್ಷದಿಂದ ಟಿಕೇಟ್ ಪಡೆದು ಬಂದಿದ್ದು ಸಂತೋಷ ತಂದಿದೆ. ಜನರಲ್ಲಿ, ಕಾರ್ಯಕರ್ತರಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ಉತ್ಸಾಹ ಇದೆ. ಕಾಂಗ್ರೇಸ್ ಪಕ್ಷ ನನ್ನ ಮಾತೃಪಕ್ಷ ಜೊತೆಗೆ ನನ್ನ ಅಳಿಯನೇ ಅಭ್ಯರ್ಥಿ ಆಗಿರುವುದರಿಂದ ಶತಾಯಗತಾಯ ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕಾಂಗ್ರೆಸ್ ಭೀಷ್ಮ ಇಲ್ಲಿರುವಾಗ ಗೆಲುವು ಸುಲಭ. ಪಕ್ಷದಲ್ಲಿ ಟಿಕೆಟ್ಗೆ ಸಂಬಂಧಪಟ್ಟ ಸಣ್ಣಪುಟ್ಟ ಗೊಂದಲ ಇದ್ದು ಅದನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ. ಕ್ಷೇತ್ರವ್ಯಾಪ್ತಿಯಲ್ಲಿ ಕಾಗೋಡು ಮತ್ತು ನಾನು ತಂದ ಕಾಮಗಾರಿಗಳನ್ನು ತಾವೇ ತಂದಿದ್ದು ಎಂದು ಶಾಸಕರು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಕುಡಿಯುವ ನೀರು, ಮಿನಿ ವಿಧಾನಸೌಧ ಕಾಗೋಡು ಮತ್ತು ನನ್ನ ಅವಧಿಯಲ್ಲಿ ತಂದದ್ದು, 70ಕೋಟಿ ರೂ. ಶರಾವತಿ ನೀರು ಸಾಗರಕ್ಕೆ ತರುವ ಯೋಜನೆ ಜಾರಿಗೆ ತರಲಾಗಿತ್ತು. ಈತನಕ ಗ್ರಾಮೀಣ ಭಾಗಕ್ಕೆ ನೀರು ಕೊಡಲು ಇವರ ಕೈನಲ್ಲಿ ಸಾಧ್ಯವಾಗಿಲ್ಲ ಎಂದು ದೂರಿದರು.
ಜನರಿಗೆ ಒಂದು ನಿವೇಶನವನ್ನು ಹಾಲಿ ಶಾಸಕರು ಕೊಟ್ಟಿಲ್ಲ. ರಸ್ತೆ ಮಾಡಿದ್ದೇವೆ ಎಂದು ಪ್ರಚಾರ ಪಡೆಯುತ್ತಿದ್ದು ಕೇವಲ 100 ರಿಂದ 300ಮೀ. ರಸ್ತೆ ಮಾಡಿದ್ದೇ ಸಾಧನೆಯಲ್ಲ. ಸಾಗರವನ್ನು ಗೋವಾ ಮಾಡುವ ಕೆಲಸದಲ್ಲಿ ಶಾಸಕರು ನಿರತರಾಗಿದ್ದು, ಗಣಪತಿ ಕೆರೆಯನ್ನು ಈಜುಕೊಳ ಮಾಡಿ ಅದಕ್ಕೊಂದು ಕ್ರೂಸ್ನರ್ ಬಿಟ್ಟರೆ ಪ್ರವಾಸಿಗರು ಗೋವಾಕ್ಕೆ ಹೋಗುವುದೇ ಬೇಡ ಎಂದು ವ್ಯಂಗ್ಯವಾಗಿ ನುಡಿದ ಬೇಳೂರು ಹಾಲಪ್ಪ ಅವಧಿಯಲ್ಲಿ ಯಾವ ಪ್ರವಾಸಿ ಕ್ಷೇತ್ರವೂ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಬಿ.ಎ.ಇಂದೂಧರ ಗೌಡ, ತಾರಾಮೂರ್ತಿ, ಡಿ.ದಿನೇಶ್, ಅಶೋಕ ಬೇಳೂರು, ಮಹಾರಾಜ ಕೆಳದಿ, ಗಣಪತಿ ಮಂಡಗಳಲೆ, ಮೈಕೆಲ್ ಡಿಸೋಜ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ