ವಿವಿಧ ತರಕಾರಿಗಳ ಆರೋಗ್ಯಕರ ಖಾದ್ಯಗಳು…

ತೆಳುವಾದ ದೋಸೆ ಹೊಯ್ದು ಎರಡೂ ಬದಿ ಕಾಯಿಸಿರಿ. ಊಟ, ಉಪಾಹಾರಕ್ಕೆ ಸವಿಯಬಹುದು.

Team Udayavani, Nov 17, 2022, 12:11 PM IST

ವಿವಿಧ ತರಕಾರಿಗಳ ಆರೋಗ್ಯಕರ ಖಾದ್ಯಗಳು…

ತಾಜಾ ತ‌ರಕಾರಿ ಹಾಗೂ ಸೊಪ್ಪುಗಳನ್ನು ಬಳಸಿ ಬೆಳಗ್ಗಿನ ತಿಂಡಿ ಹಾಗೂ ಊಟಕ್ಕಾಗಿ ಆರೋಗ್ಯಕರ ಖಾದ್ಯಗಳನ್ನು ತಯಾರಿಸಬಹುದು. ಹಾಗೆ ತಯಾರಿಸಬಹುದಾದ ಕೆಲವು ಖಾದ್ಯಗಳ ಮಾಹಿತಿ ಇಲ್ಲಿದೆ:

ಮಸಾಲಾ ಕ್ಯಾಪ್ಸಿಕಮ್‌
ಬೇಕಾಗುವ ಸಾಮಗ್ರಿ: ಕ್ಯಾಪ್ಸಿಕಮ್‌- 3, ತೆಂಗಿನತುರಿ- 1 ಕಪ್‌, ಕೊತ್ತಂಬರಿ ಬೀಜ- 2 ಚಮಚ, ಜೀರಿಗೆ- 1 ಚಮಚ, ಹುಣಸೆಹಣ್ಣು ಗೋಲಿಗಾತ್ರ, ಮೆಂತೆ- 1/2 ಚಮಚ, ಎಣ್ಣೆ- 3 ಚಮಚ, ಒಗ್ಗರಣೆಗೆ ಕರಿಬೇವು, ಸಾಸಿವೆ, ಹುರಿದ ಒಣಮೆಣಸಿನಕಾಯಿ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ದೊಣ್ಣೆ ಮೆಣಸನ್ನು ಎರಡು ಇಂಚಿನಷ್ಟು ತುಂಡರಿಸಿಡಿ. ಕೊತ್ತಂಬರಿ, ಜೀರಿಗೆ, ಮೆಂತ್ಯೆ ಹುರಿದು, ಒಣಮೆಣಸಿನಕಾಯಿ, ತೆಂಗಿನ ತುರಿ, ಹುಣಸೆಹಣ್ಣು ಹಾಕಿ ತರಿ ತರಿಯಾಗಿ ರುಬ್ಬಿರಿ. ಬಾಣಲೆಗೆ ಎಣ್ಣೆ ಹಾಕಿ ಸಾಸಿವೆ, ಕರಿಬೇವಿನ ಒಗ್ಗರಣೆ ಮಾಡಿ ಕ್ಯಾಪ್ಸಿಕಮ್‌, ರುಬ್ಬಿದ ಮಸಾಲೆ, ಉಪ್ಪು ಹಾಕಿ ಸ್ವಲ್ಪ ನೀರು ಹಾಕಿ ಬಾಣಲೆ ಮುಚ್ಚಿ ಬೇಯಿಸಿರಿ. ಅನ್ನ, ದೋಸೆ, ಚಪಾತಿಯೊಂದಿಗೆ ಸವಿಯಲು ರುಚಿಯಾಗಿರುವುದು.

ಸಬ್ಬಸಿಗೆ, ಮೆಂತೆಸೊಪ್ಪಿನ ದೋಸೆ
ಬೇಕಾಗುವ ಸಾಮಗ್ರಿ: ಸಬ್ಬಸಿಗೆ ಸೊಪ್ಪು- 1 ಕಟ್ಟು , ಮೆಂತೆಸೊಪ್ಪು- 1/2 ಕಟ್ಟು , ಬೆಳ್ತಿಗೆ ಅಕ್ಕಿ- 1 ಕಪ್‌, ತೆಂಗಿನತುರಿ- 1/2 ಕಪ್‌, ಬೆಲ್ಲ- ಗೋಲಿ ಗಾತ್ರ, ಹುರಿದ ಒಣಮೆಣಸಿನಕಾಯಿ 4-5, ಉಪ್ಪು ರುಚಿಗೆ, ಹುಣಸೆಹಣ್ಣು- ಗೋಲಿಗಾತ್ರ, ಎಣ್ಣೆ ದೋಸೆ ತೆಗೆಯಲು.

ತಯಾರಿಸುವ ವಿಧಾನ: ಸಬ್ಬಸಿಗೆ, ಮೆಂತ್ಯೆಸೊಪ್ಪು ಶುಚಿಗೊಳಿಸಿ ಸಪೂರ ತುಂಡರಿಸಿ ತೊಳೆದಿಡಿ. ಎರಡು ಗಂಟೆ ನೆನೆಸಿಟ್ಟ ಅಕ್ಕಿ ತೊಳೆದು ತೆಂಗಿನತುರಿ, ಒಣಮೆಣಸಿನಕಾಯಿ, ಹುಣಸೆ, ಬೆಲ್ಲ, ಉಪ್ಪು ಸೇರಿಸಿ ನಯವಾಗಿ ರುಬ್ಬಿ ಸೊಪ್ಪು ಹಾಕಿ ಬೆರೆಸಿಡಿ. ಒಲೆ ಮೇಲೆ ದೋಸೆ ಕಾವಲಿ/ತವಾ ಬಿಸಿಯಾದ ಮೇಲೆ ಸ್ವಲ್ಪ ಎಣ್ಣೆ ಹಾಕಿ ತೆಳುವಾದ ದೋಸೆ ಹೊಯ್ದು ಎರಡೂ ಬದಿ ಕಾಯಿಸಿರಿ. ಊಟ, ಉಪಾಹಾರಕ್ಕೆ ಸವಿಯಬಹುದು.

ಚಿಕ್ಕ ಗುಳ್ಳ ತಳಾಸಣೆ (ಪಲ್ಯ)
ಬೇಕಾಗುವ ಸಾಮಗ್ರಿ: ಚಿಕ್ಕ ಗುಳ್ಳ 5-6, ಬೆಳ್ಳುಳ್ಳಿ ಎಸಳು 6-7, ಎಣ್ಣೆ- 4 ಚಮಚ, ಒಣಮೆಣಸಿನಕಾಯಿ- 3, ಉಪ್ಪು ರುಚಿಗೆ, ಜೀರಿಗೆ- 1 ಚಮಚ, ಕೊತ್ತಂಬರಿಪುಡಿ- 1/2 ಚಮಚ.

ತಯಾರಿಸುವ ವಿಧಾನ: ಗುಳ್ಳ ಉದ್ದಕ್ಕೆ ಸೀಳಿಡಿ. ಬಾಣಲೆಯಲ್ಲಿ ಎಣ್ಣೆ ಹಾಕಿ ಬೆಳ್ಳುಳ್ಳಿ ಜಜ್ಜಿ ಹಾಕಿ ಹೊಂಬಣ್ಣ ಬಂದಾಗ ಒಣಮೆಣಸಿನ ಕಾಯಿ ಚೂರು ಹಾಕಿ ಪರಿಮಳ ಬಂದ ಮೇಲೆ ಜೀರಿಗೆ, ಕೊತ್ತಂಬರಿ ಹುಡಿ, ಗುಳ್ಳ ಹಾಕಿ, ಉಪ್ಪು ಹಾಕಿ ಸ್ವಲ್ಪ ನೀರು ಹಾಕಿ ಮುಚ್ಚಿ ಸಣ್ಣ ಉರಿಯಲ್ಲಿ ಬೇಯಿಸಿರಿ. ಆರೋಗ್ಯಕಾರಿ ಪಲ್ಯ ತಯಾರು.

ಹಸಿ ಅವರೆ, ಬಟಾಣಿಕಾಳು ಅಂಬಟ
ಬೇಕಾಗುವ ಸಾಮಗ್ರಿ: ಅವರೆಕಾಳು-1/4 ಕಪ್‌, ಬಟಾಣಿ- 1/4 ಕಪ್‌, ಬಟಾಟೆ- 1, ಹುರಿದ ಒಣಮೆಣಸಿನಕಾಯಿ 4-5, ನೀರುಳ್ಳಿ- 3, ರುಚಿಗೆ ಉಪ್ಪು , ಎಣ್ಣೆ- 3 ಚಮಚ, ತೆಂಗಿನತುರಿ- 1 ಕಪ್‌, ಹುಣಸೆಹಣ್ಣು ಸ್ವಲ್ಪ.

ತಯಾರಿಸುವ ವಿಧಾನ: ತೆಂಗಿನತುರಿ, ಒಣಮೆಣಸಿನಕಾಯಿ, ಹುಣಸೆಹಣ್ಣು ಒಟ್ಟಿಗೆ ರುಬ್ಬಿರಿ. ಸಿಪ್ಪೆ ತೆಗೆದು ತುಂಡರಿಸಿದ ಆಲೂಗಡ್ಡೆ, ಅವರೆ, ಬಟಾಣಿ, ಎರಡು ನೀರುಳ್ಳಿ ಚೂರು ಕುಕ್ಕರ್‌ಗೆ ಹಾಕಿ ಬೇಯಿಸಿರಿ. ನಂತರ ರುಬ್ಬಿದ ಮಸಾಲೆ, ಉಪ್ಪು ಹಾಕಿ ಕುದಿಸಿರಿ. ಒಂದು ನೀರುಳ್ಳಿ ಚೂರನ್ನು ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೆ ಕಾಯಿಸಿ ಬೇಯಿಸಿಟ್ಟ ಅವರೆ, ಬಟಾಣಿ ಹಾಕಿ ಮುಚ್ಚಿಡಿ. ಅನ್ನದೊಂದಿಗೆ, ದೋಸೆ, ಇಡ್ಲಿ, ಚಪಾತಿಯೊಂದಿಗೆ ರುಚಿ ನೋಡಿರಿ.

ಎಸ್‌. ಜಯಶ್ರೀ ಶೆಣೈ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.