ಸಕಲೇಶಪುರದಲ್ಲಿ ಪತ್ತೆಯಾದ ಯುವಕ ಅಪಘಾತದಿಂದಲೇ ಸಾವು

ಹಲವು ಸಂಶಯಗಳು ಇನ್ನೂ ಜೀವಂತ!

Team Udayavani, Jun 24, 2023, 6:12 AM IST

MARDALA DEATH

ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ವಿದ್ಯಾನಗರ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್‌ ಅವರ ಮೃತದೇಹವು ಸಕಲೇಶಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಕೆಂಪುಹೊಳೆ ಬಳಿ ಜೂ. 22 ರಂದು ಬೈಕ್‌ ಅಪಘಾತದಲ್ಲಿ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಅನುಮಾನಗಳಿದ್ದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪೊಲೀಸ್‌ ಮೂಲಗಳು ಅಪಘಾತದಿಂದಾಗಿಯೇ ನಾಗಪ್ರಸಾದ್‌ ಅವರ ಸಾವು ಸಂಭವಿಸಿದೆ ಎಂದು ಸ್ಪಷ್ಟಪಡಿಸಿವೆ.

ಜೂ. 22ರಂದು ಮರ್ದಾಳದಲ್ಲಿ ತನ್ನ ಮಾಲಕತ್ವದ ಚಿನ್ನದಂಗಡಿಯ ಉದ್ಘಾಟನೆಯ ಸಿದ್ಧತೆಯಲ್ಲಿದ್ದ ನಾಗಪ್ರಸಾದ್‌ ಅದೇ ದಿನ ಮುಂಜಾನೆ ಕೆಂಪುಹೊಳೆ ಬಳಿ ಶವವಾಗಿ ಪತ್ತೆಯಾಗಿದ್ದರು. ಘಟನೆಯ ಕುರಿತು ಸಾರ್ವಜನಿಕ ವಲಯದಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಜಖಂಗೊಂಡಿರುವ ಬೈಕ್‌ ಹಾಗೂ ಮೃತದೇಹ ಪತ್ತೆಯಾಗಿರುವ ಜಾಗದಲ್ಲಿನ ರಸ್ತೆಯ ಪಕ್ಕದ ಕಾಂಕ್ರೀಟ್‌ ಕಟ್ಟೆಗೆ ಬೈಕ್‌ ಢಿಕ್ಕಿ ಹೊಡೆದು ಬಳಿಕ ಚರಂಡಿಗೆ ಉರುಳಿ ಬಿದ್ದ ರೀತಿಯಲ್ಲಿ ಕುರುಹುಗಳು ಕಂಡುಬಂದಿರುವುದು ಮತ್ತು ಮರಣೋತ್ತರ ಪರೀಕ್ಷೆಯ ವರದಿಯಲ್ಲಿಯೂ ಅಪಘಾತದಿಂದಾಗಿಯೇ ಮರಣ ಸಂಭವಿಸಿದೆ ಎಂದು ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಅಪಘಾತದಿಂದಾಗಿಯೇ ನಾಗಪ್ರಸಾದ್‌ ಅವರ ಸಾವು ಸಂಭವಿಸಿದೆ ಎಂದು ಖಚಿತಗೊಂಡಿದೆ.

ಯಾವುದೋ ವಾಹನವನ್ನು ಓವರ್‌ಟೇಕ್‌ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಅಂಗಡಿ ಉದ್ಘಾಟನೆಯ ಆಮಂತ್ರಣ ವಿತರಿಸುವ ಸಲುವಾಗಿ ಹಿಂದಿನ ದಿನ (ಜೂ. 21) ಬೆಳಗ್ಗೆ 2 ಹೆಲ್ಮೆಟ್‌ಗಳ ಜತೆ ಒಬ್ಬರೇ ತನ್ನ ಬೈಕ್‌ನಲ್ಲಿ ಹೋಗಿರುವುದು ಸ್ಪಷ್ಟವಾಗಿದೆ. ಅಪಘಾತದ ಸ್ಥಳದಲ್ಲಿಯೂ 2 ಹೆಲ್ಮೆಟ್‌ಗಳು ಪತ್ತೆಯಾಗಿತ್ತು.

ಹಲವು ಸಂಶಯಗಳು ಇನ್ನೂ ಜೀವಂತ!
ಆಮಂತ್ರಣ ನೀಡಲು ಇಚ್ಲಂಪಾಡಿಗೆ ತೆರಳಿದ್ದ ನಾಗಪ್ರಸಾದ್‌ ಅಲ್ಲಿಂದ ಬೆಳ್ತಂಗಡಿಗೆ ಹೋಗಲಿರುವುದಾಗಿ ಹೇಳಿ ಸಕಲೇಶಪುರದತ್ತ ಹೋಗಿರುವುದು ಯಾಕೆ ಎನ್ನುವ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಹಾಗೆಯೇ 2 ಹೆಲ್ಮೆಟ್‌ ಕೊಂಡೊಯ್ದಿದ್ದೇಕೆ? ಅವರ ಮೊಬೈಲ್‌ ಫೋನ್‌ ಅಪಘಾತ ಸ್ಥಳದಿಂದ ನಾಪತ್ತೆಯಾಗಿದ್ಹೇಗೆ ಎನ್ನುವ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ಮೊಬೈಲ್‌ ಫೋನ್‌ನ ಕಾಲ್‌ಲಿಸ್ಟ್‌ ಮಾಹಿತಿ ಲಭಿಸಿದ ಮೇಲಷ್ಟೇ ಪ್ರಕರಣಕ್ಕೆ ಸಂಬಂಧಿಸಿದ ಸಂಶಯಗಳಿಗೆ ಉತ್ತರ ಸಿಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.