ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ದಾಳಿ: APMC ಅಧಿಕಾರಿಯ ಬಂಧನ
Team Udayavani, Dec 1, 2020, 6:16 PM IST
ಶಿವಮೊಗ್ಗ : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.
ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಡೆಂಟ್ ಆಗಿರುವ ಸಾಮ್ಯಾ ನಾಯ್ಕ ಬಂಧಿತರು. ವ್ಯಕ್ತಿಯೊಬ್ಬರಿಂದ ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.
ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಇದನ್ನೂ ಓದಿ:ವಾಟ್ಸಾಪ್ ಹೇಗೆ ಹ್ಯಾಕ್ ಆಗುತ್ತದೆ ಗೊತ್ತಾ? ಏನಿದು ನಿಗೂಢ OTP ಸ್ಕ್ಯಾಮ್…
ಸಾಮ್ಯಾ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆಯಲಾಗಿದ್ದು ಎಸಿಬಿ ಅಧಿಕಾರಿಗಳಿಂದ ವಿಚಾರಣೆ ನಡೆಯುತ್ತಿದೆ. ಡಿವೈಎಸ್ಪಿ ಜೆ.ಲೋಕೇಶ್ ನೇತೃತ್ವದಲ್ಲಿ, ಇನ್ಸ್ ಪೆಕ್ಟರ್ ಎನ್.ವೀರೇಂದ್ರ, ಸಿಬ್ಬಂದಿಗಳಾದ ಕೆ.ವಸಂತ, ನಾಗರಾಜ್, ರಘು ನಾಯ್ಕ, ಸುರೇಂದ್ರ, ಶ್ರೀನಿವಾಸ್, ಹರೀಶ್ ತಂಡದಲ್ಲಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುದ್ದೆ ನೇಮಕಾತಿಗೆ ವ್ಯಕ್ತಿಯಿಂದ ಹಣ ಸ್ವೀಕರಿಸುತ್ತಿದ್ದ ಮಹಿಳಾ ಅಧಿಕಾರಿ ಎಸಿಬಿ ಬಲೆಗೆ
ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು
ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್
ಗೋಹತ್ಯೆ ನಿಷೇಧ ಕಾಯ್ದೆ: ಕರಂಬಳ್ಳಿಯಲ್ಲಿ ಮುಖ್ಯಮಂತ್ರಿಗಳಿಂದ ಗೋಪೂಜೆ
ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ