
ಕೊನೆಗೂ ಗುಡ್ ನ್ಯೂಸ್ ಕೊಟ್ಟ ನಟಿ ಹರಿಪ್ರಿಯಾ
Team Udayavani, Mar 22, 2023, 3:42 PM IST

ಕಳೆದ ಎರಡು-ಮೂರು ತಿಂಗಳಿನಿಂದ ಮದುವೆ, ಹನಿಮೂನ್ ಅಂಥ ಬ್ಯುಸಿಯಾಗಿದ್ದ ನಟ ವಸಿಷ್ಠ ಸಿಂಹ- ಹರಿಪ್ರಿಯಾ ಜೋಡಿ ಮತ್ತೆ ಸಿನಿಮಾ ಕೆಲಸದತ್ತ ಮುಖ ಮಾಡಿದ್ದಾರೆ. ಸದ್ಯ ವಸಿಷ್ಠ ಸಿಂಹ “ಲವ್ ಲಿ’ ಸಿನಿಮಾದ ಕೆಲಸಗಳಲ್ಲಿ ಬಿಝಿಯಾಗಿದ್ದರೆ, ಮತ್ತೂಂದೆಡೆ ನಟಿ ಹರಿಪ್ರಿಯಾ ಆದಷ್ಟು ಬೇಗ “ಗುಡ್ ನ್ಯೂಸ್’ ಕೊಡುವುದಾಗಿ ಕೆಲ ದಿನಗಳ ಹಿಂದಷ್ಟೇ ಹೇಳಿಕೊಂಡಿದ್ದರು. ಈಗ ಆ ಗುಡ್ ನ್ಯೂಸ್ ಏನಂದು ಹೇಳಿದ್ದು, ಯುಟ್ಯೂಬ್
ಚಾನೆಲ್ ವೊಂದನ್ನು ಶುರು ಮಾಡಲು ಹರಿಪ್ರಿಯಾ ಮುಂದಾಗಿದ್ದಾರೆ.
ಗುಡ್ ನ್ಯೂಸ್ ಕೊಡುತ್ತೇನೆ ಎಂದು ಹರಿ ಪ್ರಿಯಾ ಹೇಳಿದ ಬೆನ್ನಲ್ಲೇ “ಹೆಸರೇನು ಮೇಡಮ್…’, “ಯಾವಾಗ ಅನೌನ್ಸ್ ಮಾಡ್ತೀರಾ’, “ಕೇಳಿದ್ದು ನಿಜಾನಾ’, “ಗುಡ್ ನ್ಯೂಸ್’ ಎಂಬ ಮೆಸೇಜ್ ಇರುವ ಸ್ಕ್ರಿನ್ಶಾಟ್ಗಳನ್ನು ಹಂಚಿಕೊಂಡಿದ್ದ ಹರಿಪ್ರಿಯಾ, “ನನಗೆ ಗೊತ್ತು ನೀವೆಲ್ಲರೂ ಬಹುಶಃ ಏನೆಂದು ತಿಳಿಯುವ ಕುತೂಹಲ ಹೊಂದಿರುತ್ತೀರಿ. ಅನೌನ್ಸ್ ಮಾಡುವ ಮೊದಲು ಒಂದು ಊಹೆ ಮಾಡಿ’ ಎಂದು ಬರೆದುಕೊಂಡಿದ್ದರು.
ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಪೋಸ್ಟ್ ಅಪ್ಡೇಟ್ ಮಾಡುತ್ತಿದ್ದಂತೆ, ಅಭಿಮಾನಿಗಳು ಸಾಕಷ್ಟು ಕುತೂಹಲಭರಿತವಾಗಿ ಕಾಮೆಂಟ್ಸ್ ಮೂಲಕ ನೂರಾರು ಪ್ರಶ್ನೆಗಳನ್ನು ಕೇಳುತ್ತಿದ್ದರು. ಕೆಲವರು ಹರಿಪ್ರಿಯಾ ತಮ್ಮ ಮುಂದಿನ ಸಿನಿಮಾದ ಬಗ್ಗೆ ಅಪ್ಡೆàಟ್ ಕೊಡಬಹುದು ಎಂದು ಊಹಿಸಿದರೆ,
ಇನ್ನೂ ಅನೇಕರು, ಮರಿ ಸಿಂಹ ಅಥವಾ ಸಿಂಹಿಣಿ ಬರುತ್ತಿದ್ದಾರಾ? ಎಂದು ಕಾಮೆಂಟ್ಸ್ ಕೂಡ ಮಾಡಿದ್ದರು.
ಅಂದಹಾಗೆ,ಯುಗಾದಿ ಹಬ್ಬದ ಸಂದರ್ಭದಲ್ಲಿ ಹರಿಪ್ರಿಯಾ ತಮ್ಮದೇ ಆದ ಯು-ಟ್ಯೂಬ್ ಚಾನೆಲ್ ಶುರು
ಮಾಡುತ್ತಿದ್ದಾರೆ. ಈ ಯು-ಟ್ಯೂಬ್ ಚಾನೆಲ್ ಮೂಲಕ ಅಭಿಮಾನಿಗಳಿಗೆ ಹೊಸ ಹೊಸ ವಿಷಯವನ್ನು ಹೇಳಲಿದ್ದಾರಂತೆ. ಅಲ್ಲದೇ, ಅಭಿಮಾನಿಗಳ ಜೊತೆ ಸಂವಹನವನ್ನೂ ಇಟ್ಟುಕೊಳ್ಳುತ್ತಾರಂತೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು