ಎಫ್ಐಆರ್ ರದ್ದು : ಆದಿತ್ಯ ಅರ್ಜಿ ವಜಾ , ಪ್ರಿಯಾಂಕಾಗೆ ಸಿಸಿಬಿ ನೋಟಿಸ್
Team Udayavani, Oct 18, 2020, 6:00 AM IST
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ತನ್ನ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಆರೋಪಿ ಆದಿತ್ಯ ಆಳ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಈ ಅರ್ಜಿಯು ನ್ಯಾ| ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಸಿಸಿಬಿ ಪರ ವಕೀಲರು, ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವ ಭಾಗಿಯಾಗಿದ್ದಾನೆ. ಆತ ಇತರ ಆರೋಪಿಗಳಿಗೆ ಡ್ರಗ್ಸ್ ಮಾರಾಟ ಮಾಡಿರುವ ಬಗ್ಗೆ ಸಾಕ್ಷಾಧಾರಗಳು ಸಿಕ್ಕಿವೆ. ಡ್ರಗ್ಸ್ ಮಾರಾಟದ ಜತೆಗೆ ಸೇವನೆ ಮಾಡಿರುವ ಬಗ್ಗೆಯೂ ತನಿಖೆಯಿಂದ ತಿಳಿದು ಬಂದಿದೆ. ಸದ್ಯ ಆತ ತಲೆಮರೆಸಿಕೊಂಡಿದ್ದು, ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ. ಆದ್ದರಿಂದ ಅವನ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ವಾದಿಸಿದರು.
ಆದಿತ್ಯ ಆಳ್ವ ವಿರುದ್ಧದ ಪ್ರಕರಣ ತನಿಖಾ ಹಂತದಲ್ಲಿದ್ದು, ಎಫ್ಐಆರ್ ರದ್ದತಿಗೆ ಅರ್ಜಿ ಸಲ್ಲಿಸಿರುವುದು ಸರಿಯಲ್ಲ ಎಂದು ನ್ಯಾಯ ಪೀಠ ಅರ್ಜಿಯನ್ನು ವಜಾಗೊಳಿಸಿತು.
ಸಹೋದರಿ ಪ್ರಿಯಾಂಕಾಗೆ ಮತ್ತೂಂದು ನೋಟಿಸ್
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಸಂಬಂಧ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ, ಆರೋಪಿ ಆದಿತ್ಯ ಆಳ್ವ ಸಹೋದರಿ ಪ್ರಿಯಾಂಕಾ ಆಳ್ವ ಅವರಿಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮತ್ತೂಂದು ನೋಟಿಸ್ ಜಾರಿ ಮಾಡಿ ದ್ದಾರೆ. ಶುಕ್ರವಾರ ಮಧ್ಯಾಹ್ನ ಖುದ್ದು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಲಾಗಿತ್ತಾದರೂ ಮಳೆ ಹಾಗೂ ಇತರ ಕಾರಣ ನೀಡಿ ಗೈರಾಗಿದ್ದರು. ಈ ಸಂಬಂಧ ಅ.20ರಂದು ಖುದ್ದು ಹಾಜರಾಗಲೇಬೇಕು ಎಂದು ವಾಟ್ಸಾಪ್ ಮೂಲಕ ಮತ್ತೂಂದು ನೋಟಿಸ್ ನೀಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ರಾಗಿಣಿ ಅರ್ಜಿ: ಸಿಸಿಬಿಗೆ ನೋಟಿಸ್
ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಸಿಸಿಬಿಗೆ ನೋಟಿಸ್ ಜಾರಿಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ| ಬಿ.ಎ ಪಾಟೀಲ್ ಅವರಿದ್ದ ನ್ಯಾಯಪೀಠ, ಸಿಸಿಬಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಅ.23ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ