Bihar: ರೈಲು ಎಂಜಿನ್‌ ಕದ್ದಾಯ್ತು…ರಾತ್ರೋರಾತ್ರಿ ಕೊಳ ನಾಪತ್ತೆ…ಗುಡಿಸಲು ನಿರ್ಮಾಣ!

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿ ಯಾರೂ ಇರಲಿಲ್ಲವಾಗಿತ್ತು

Team Udayavani, Jan 1, 2024, 1:23 PM IST

Bihar: ರೈಲು ಎಂಜಿನ್‌ ಕದ್ದಾಯ್ತು…ರಾತ್ರೋರಾತ್ರಿ ಕೊಳ ನಾಪತ್ತೆ…ಗುಡಿಸಲು ನಿರ್ಮಾಣ!

ಪಾಟ್ನಾ: ಕಬ್ಬಿಣದ ಸೇತುವೆ, ರೈಲು ಎಂಜಿನ್‌ ಕಳವು ಮಾಡುತ್ತಿರುವ ಘಟನೆಯ ಪಟ್ಟಿಗೆ ಇದೀಗ ಇಡೀ ನೀರಿನ ಕೊಳವನ್ನು ರಾತ್ರೋರಾತ್ರಿ ಮಣ್ಣಿನಿಂದ ತುಂಬಿಸಿ ಅಲ್ಲಿ ಗುಡಿಸಲನ್ನು ಕಟ್ಟಿರುವ ಘಟನೆ ಬಿಹಾರದ ದರ್ಭಾಂಗ್‌ ಜಿಲ್ಲೆಯಲ್ಲಿ ನಡೆದಿದ್ದು, ಇದರಿಂದ ಸ್ಥಳೀಯರಿಗೆ ಅಚ್ಚರಿಯಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:

ಅಚ್ಚರಿಯ ಬೆಳವಣಿಗೆ ಎಂಬಂತೆ ಜಲಮೂಲವಿದ್ದ ಜಾಗದಲ್ಲಿ ಏಕಾಏಕಿ ಗುಡಿಸಲನ್ನು ನಿರ್ಮಿಸಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಭೂ ಮಾಫಿಯಾ ಗ್ಯಾಂಗ್‌ ಈ ಕೃತ್ಯ ಎಸಗಿರಬೇಕೆಂಬುದು ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿ ಯಾರೂ ಇರಲಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ಈ ಕೊಳ ಸಾರ್ವಜನಿಕ ಸ್ವತ್ತಾಗಿದ್ದು, ಇದನ್ನು ಮೀನು ಸಾಕಾಣೆ ಹಾಗೂ ಇತರ ಚಟುವಟಿಕೆಗಳಿಗೆ ಬಳಸಲಾಗುತ್ತಿತ್ತು. ಆದರೆ ದರ್ಭಾಂಗ್‌ ನಲ್ಲಿ ಭೂಮಿಯ ಬೆಲೆ ಹೆಚ್ಚಳವಾಗುತ್ತಿದ್ದಂತೆಯೇ ಭೂ ಮಾಫಿಯಾ ಇದೀಗ ಜಲಮೂಲದ ಮೇಲೆ ದೃಷ್ಟಿ ನೆಟ್ಟಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಆರಂಭದಲ್ಲಿ ಕೊಳವನ್ನು ಮಣ್ಣಿನಿಂದ ಮುಚ್ಚಲು ಶುರು ಮಾಡಿದ ಸಂದರ್ಭದಲ್ಲಿ ಸ್ಥಳೀಯರು ವಲಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೆಲಸವನ್ನು ನಿಲ್ಲಿಸಿದ್ದರು. ಆದರೆ ಭೂ ಮಾಫಿಯಾ ರಾತ್ರೋರಾತ್ರಿ ಕಾರ್ಯನಿರ್ವಹಿಸುವ ಮೂಲಕ ಇಡೀ ಕೊಳವನ್ನೇ ತುಂಬಿಸಿ ಗುಡಿಸಲು ಕಟ್ಟಿರುವುದಾಗಿ ವರದಿ ವಿವರಿಸಿದೆ.

ಬಿಹಾರದಲ್ಲಿ ಇತ್ತೀಚೆಗೆ ಊಹಿಸಲು ಸಾಧ್ಯವಿಲ್ಲದಂತಹ ನಡೆದ ಕೆಲವು ಕಳವು ಘಟನೆಗಳಿಂದ ಹೆಚ್ಚು ಸುದ್ದಿಯಲ್ಲಿತ್ತು. 2022ರ ನವೆಂಬರ್‌ ನಲ್ಲಿ ರೈಲಿನ ಡೀಸೆಲ್‌ ಎಂಜಿನ್‌ ಅನ್ನು ಕಳವು ಮಾಡಿದ ಘಟನೆ ನಡೆದಿತ್ತು. ಅದೇ ರೀತಿ ರೋಹ್ಟಾಸ್‌ ಜಿಲ್ಲೆಯಲ್ಲಿ 60 ಅಡಿ ಉದ್ದದ ಕಬ್ಬಿಣದ ಸೇತುವೆಯನ್ನು ಕಳವು ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.