ಝವಾಹಿರಿ ಹತ್ಯೆ ಬಳಿಕ “ಈ ಮೋಸ್ಟ್ ವಾಂಟೆಡ್ ಉಗ್ರ” ಅಲ್ ಖೈದಾ ನೂತನ ಮುಖ್ಯಸ್ಥನಾಗಲಿದ್ದಾನೆ?

ಆಲ್ ಖೈದಾ ಉಗ್ರಗಾಮಿ ಸಂಘಟನೆಯ ನೂತನ ಮುಖ್ಯಸ್ಥನಾಗುವ ಸಾಧ್ಯತೆ ಇದ್ದಿರುವುದಾಗಿ ಹಲವಾರು ವರದಿ ತಿಳಿಸಿದೆ.

Team Udayavani, Aug 2, 2022, 4:51 PM IST

ಝವಾಹಿರಿ ಹತ್ಯೆ ಬಳಿಕ “ಈ ಮೋಸ್ಟ್ ವಾಂಟೆಡ್ ಉಗ್ರ” ಅಲ್ ಖೈದಾ ನೂತನ ಮುಖ್ಯಸ್ಥನಾಗಲಿದ್ದಾನೆ?

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಅಮೆರಿಕ ಸೇನಾಪಡೆ ರಹಸ್ಯ ಕಾರ್ಯಾಚರಣೆ ಮೂಲಕ ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಐಮನ್ ಅಲ್ ಝವಾಹಿರಿಯನ್ನು ಹತ್ಯೆಗೈದಿದೆ. ಝವಾಹಿರಿ ಹತ್ಯೆಯಿಂದಾಗಿ ಅಮೆರಿಕದ 9/11 ದಾಳಿಯಲ್ಲಿ ಸಾವನ್ನಪ್ಪಿರುವ 3,000 ಕುಟುಂಬ ಸದಸ್ಯರಿಗೆ ನ್ಯಾಯ ಒದಗಿಸಿಕೊಟ್ಟಂತಾಗಿದೆ ಎಂದು ಅಧ್ಯಕ್ಷ ಜೋ ಬೈಡೆನ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:ರಕ್ಷಿಸುವ ಪ್ರಯತ್ನ ವಿಫಲ; ಗಂಜಿ ಬೇಯಿಸುತ್ತಿದ್ದ ದೊಡ್ಡ ಪಾತ್ರೆಯೊಳಗೆ ಬಿದ್ದು ವ್ಯಕ್ತಿ ಸಾವು

ಪಾಕಿಸ್ತಾನದ ಅಬೋಟಾಬಾದ್ ನಲ್ಲಿ ಅಮೆರಿಕ ಸೇನಾಪಡೆ 2011ರಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಒಸಾಮಾ ಬಿನ್ ಲಾಡೆನ್ ನನ್ನು ಹತ್ಯೆಗೈದ ನಂತರ ಝವಾಹಿರಿ ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥನಾಗಿ ನೇಮಕಗೊಂಡಿದ್ದ. ಇದೀಗ ಝವಾಹಿರಿ ಹತ್ಯೆಯಾಗಿದ್ದು, ಅಲ್ ಖೈದಾ ಸಂಘಟನೆಯ ಹೊಣೆ ಯಾರಿಗೆ ವಹಿಸಬಹುದು ಎಂಬ ಬಗ್ಗೆ ಊಹಾಪೋಹ ಹರಿದಾಡತೊಡಗಿರುವುದಾಗಿ ವರದಿ ವಿವರಿಸಿದೆ.

ಐಮನ್ ಝವಾಹಿರಿ ಹತ್ಯೆಯಿಂದ ತೆರವಾದ ಸ್ಥಾನಕ್ಕೆ ಅಲ್ ಖೈದಾ ಯಾರನ್ನ ನೇಮಕ ಮಾಡಲಿದೆ ಎಂಬ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಆದರೆ ಈಜಿಪ್ಟ್ ನ ಮಾಜಿ ಕರ್ನಲ್ ಸೈಫ್ ಅಲ್ ಅಡೆಲ್ ಆಲ್ ಖೈದಾ ಉಗ್ರಗಾಮಿ ಸಂಘಟನೆಯ ನೂತನ ಮುಖ್ಯಸ್ಥನಾಗುವ ಸಾಧ್ಯತೆ ಇದ್ದಿರುವುದಾಗಿ ಹಲವಾರು ವರದಿ ತಿಳಿಸಿದೆ.

ಯಾರೀತ ಸೈಫ್ ಅಲ್ ಅಡೆಲ್?

ಮಧ್ಯಏಷ್ಯಾದ ವರದಿಗಳ ಪ್ರಕಾರ, ಅಡೆಲ್ ಬಹುತೇಕ ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥನಾಗಬಹುದು ಎಂದು ಹೇಳಿವೆ. ಅಮೆರಿಕದ ಗುಪ್ತಚರ ಇಲಾಖೆಯ ಮಾಹಿತಿಯಂತೆ, ಈಜಿಪ್ಟ್ ನ ಮಾಜಿ ಸೇನಾಧಿಕಾರಿ ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬನಾಗಿದ್ದಾನೆ. ಇದಕ್ಕೂ ಮೊದಲು ಸೈಫ್ ಮುಕ್ತಾಬ್ ಅಲ್ ಖಿಡಮತ್ (ಎಂಎಕೆ) ಭಯೋತ್ಪಾದಕ ಸಂಘಟನೆಯಲ್ಲಿದ್ದ.

1980ರಲ್ಲಿ ಒಸಾಮಾ ಬಿನ್ ಲಾಡೆನ್ ಈ ಎಂಎಕೆ ಭಯೋತ್ಪಾದಕ ಸಂಘಟನೆಯನ್ನು ಹುಟ್ಟುಹಾಕಿದ್ದ. ಇದರ ಮುಖ್ಯ ಉದ್ದೇಶವೇ ಜಗತ್ತಿನಾದ್ಯಂತ ಹಣಕಾಸು ನೀಡುವ ಮತ್ತು ಉಗ್ರರನ್ನು ನೇಮಕ ಮಾಡುವುದಾಗಿತ್ತು. 80ರ ದಶಕದಲ್ಲಿ ಲಾಡೆನ್ ರಷ್ಯಾ ಸೈನಿಕರ ವಿರುದ್ಧ ಹೋರಾಡಲು ಅಫ್ಘಾನಿಸ್ತಾನಕ್ಕೆ ಸಾವಿರಾರು ಉಗ್ರರನ್ನು ಕಳುಹಿಸಿದ್ದ. ನಂತರ ಈ ಉಗ್ರಗಾಮಿ ಸಂಘಟನೆ ಇಬ್ಭಾಗವಾಗಿ ಹೋಗಿದ್ದು, ಒಸಾಮಾ ಬಿನ್ ಲಾಡೆನ್ ಅಲ್ ಖೈದಾವನ್ನು ಸ್ಥಾಪಿಸಿದ್ದ.

ಈ ಹಿಂದೆ ಅಡೆಲ್ ಒಸಾಮಾ ಬಿನ್ ಲಾಡೆನ್ ನ ಭದ್ರತಾ ಮುಖ್ಯಸ್ಥನಾಗಿದ್ದ. 2001ರ ಬಳಿಕ ಅಡೆಲ್ ಎಫ್ ಬಿಐನ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿ ಸೇರ್ಪಡೆಯಾಗಿದ್ದ. 1998ರಲ್ಲಿ ಕೀನ್ಯಾ ಮತ್ತು ತಾಂಜನಿಯಾದಲ್ಲಿ ಅಮೆರಿಕದ ರಾಯಭಾರ ಕಚೇರಿ ಮೇಲೆ ಬಾಂಬ್ ದಾಳಿ ನಡೆಸಿದ್ದ ಘಟನೆಯಲ್ಲಿ ಅಡೆಲ್ ಶಾಮೀಲಾಗಿದ್ದ.

ಉಗ್ರ ಅಡೆಲ್ ತಲೆಗೆ ಎಫ್ ಬಿಐ 10 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿತ್ತು. ಇತ್ತೀಚೆಗೆ ಅಡೆಲ್ ಇರಾನ್ ನಲ್ಲಿ ಬಿರುಸಿನ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದಾಗಿ ವರದಿ ತಿಳಿಸಿದೆ. ಅಷ್ಟೇ ಅಲ್ಲ ಸಿರಿಯಾದಲ್ಲಿರುವ ಭಯೋತ್ಪಾದಕ ಗುಂಪುಗಳಿಗೆ ಟೆಲಿಗ್ರಾಮ್ ಮೂಲಕ ನಿರ್ದೇಶನ ನೀಡುತ್ತಿದ್ದಾನೆ ಎಂದು ವರದಿ ತಿಳಿಸಿದೆ.

1993ರಲ್ಲಿ ಸೋಮಾಲಿಯಾದ ಮೊಗಾದಿಶುವಿನಲ್ಲಿ ಅಮೆರಿಕದ ಸೇನಾ ಪಡೆ ಮತ್ತು ಹೆಲಿಕಾಪ್ಟರ್ ಮೇಲೆ ಹೊಂಚುದಾಳಿ ನಡೆಸಿ 18 ಅಮೆರಿಕ ಸೈನಿಕರನ್ನು ಹತ್ಯೆಗೈದ ಘಟನೆ ನಂತರ ಅಡೆಲ್ ನನ್ನು ಅಮೆರಿಕ ಪಡೆ ಬೇಟೆಯಾಡಲು ಹವಣಿಸುತ್ತಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.