ಅದಲು ಬದಲಾದ ಬ್ಯಾಲೆಟ್ ಪೇಪರ್: ಗೊಂದಲ ಸೃಷ್ಟಿ, ಚುನಾವಣೆ ಮುಂದೂಡಿಕೆ


Team Udayavani, Dec 22, 2019, 3:40 PM IST

shimogha

ಶಿವಮೊಗ್ಗ: ಕುರುಬರ ಸಂಘದ ರಾಜ್ಯ ನಿರ್ದೇಶಕರ ಸ್ಥಾನಕ್ಕೆ ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ದಿಢೀರ್ ಸ್ಥಗಿತಗೊಳಿಸಲಾಗಿದೆ. ಬ್ಯಾಲೆಟ್ ಪೇಪರ್ ಅದಲು ಬದಲು ಆಗಿದ್ದರಿಂದ, ಮತಗಟ್ಟೆಯಲ್ಲಿ ಭಾರಿ ಗೊಂದಲ ಸೃಷ್ಟಿಯಾಯಿತು.

ಗೊಂದಲಕ್ಕೆ ಕಾರಣವೇನು?
ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಕುರುಬರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಶಿವಮೊಗ್ಗದಿಂದ ನಾಲ್ಕು ನಿರ್ದೇಶಕರ ಆಯ್ಕೆ ಆಗಬೇಕಿತ್ತು. ಆದರೆ ಬ್ಯಾಲೆಟ್ ಪುಸ್ತಕದಲ್ಲಿ ಶಿವಮೊಗ್ಗ ಜಿಲ್ಲೆಯ ನಿರ್ದೇಶಕರ ಬದಲು, ಬೀದರ್ ಜಿಲ್ಲೆಯ ನಿರ್ದೇಶಕರ ಫೋಟೊ, ಚಿಹ್ನೆ ಇರುವ ಬ್ಯಾಲೆಟ್ ಪೇಪರ್’ಗಳಿದ್ದವು. ವಿಚಾರ ತಿಳಿಯುತ್ತಿದ್ದಂತೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಚುನಾವಣಾ ಅಕ್ರಮದ ಆರೋಪ ಮಾಡಿದರು.

ಗೊಂದಲ, ಗದ್ದಲ, ಮತದಾನ ಸ್ಥಗಿತ
ಬೆಳಗ್ಗೆ 9 ಗಂಟೆಗೆ ದುರ್ಗಿಗುಡಿ ಶಾಲೆಯಲ್ಲಿ ಮತದಾನ ಆರಂಭವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಸುಮಾರು 600 ಮಂದಿ ಮತ ಚಲಾಯಿಸಿದ್ದರು. ಬ್ಯಾಲೆಟ್ ಪೇಪರ್ ಗೊಂದಲ ಸೃಷ್ಟಿಯಾಗುತ್ತಿದ್ದಂತೆ ಮತ ಕೇಂದ್ರದಲ್ಲಿ ಗೊಂದಲ, ಗದ್ದಲ ಶುರುವಾಯಿತು. ಪೊಲೀಸರು ಕೂಡಲೆ ಮತಗಟ್ಟೆ ಬಳಿ ಜನರನ್ನು ನಿಯಂತ್ರಿಸಿದರು. ಇನ್ನು, 9 ಬೂತ್’ನಲ್ಲಿ ನಡೆಯುತ್ತಿದ್ದ ಮತದಾನ ಸ್ಥಗಿತಗೊಳಿಸಲಾಯಿತು.

ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ
ಬ್ಯಾಲೆಟ್ ಪೇಪರ್’ನಲ್ಲಿ ಗೊಂದಲಕ್ಕೆ ಚುನಾವಣಾಧಿಕಾರಿಗಳೇ ಕಾರಣ ಎಂದು ಆರೋಪಿಸಿ ಕೆಲವರು ಮತಗಟ್ಟೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಚುನಾವಣಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಈ ನಡುವೆ ಸ್ಥಳಕ್ಕೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಅಭ್ಯರ್ಥಿಗಳು, ಚುನಾವಣಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ನಂತರ ಸ್ಥಳಕ್ಕೆ ಬಂದ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಅಭ್ಯರ್ಥಿಗಳು, ಚುನಾವಣಾಧಿಕಾರಿ ಅವರನ್ನು ಪ್ರತ್ಯೇಕ್ಷ ಕೊಠಡಿಯಲ್ಲಿ ಕೂರಿಸಿ ಸಭೆ ನಡೆಸಿದರು.

ಎಲೆಕ್ಷನ್ ಮುಂದೂಡಿದ ಚುನಾವಣಾಧಿಕಾರಿ
ಸಭೆ ಬಳಿಕ ಚುನಾವಣಾಧಿಕಾರಿ ಸುಧೀರ್ ಪಾಷಾ ಅವರು ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿದರು. ಇದರಿಂದ ಪರಿಸ್ಥಿತಿ ಶಾಂತವಾಯಿತು. ಆದರೆ ಮತಗಟ್ಟೆಯ ಹೊರಗೆ ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.