ಮಹಾರಾಷ್ಟ್ರದ ಬಳಿಕ ರಾಜಸ್ಥಾನ್, ಜಾರ್ಖಂಡ್, ಬಂಗಾಳ ಸರ್ಕಾರ ಕೂಡಾ ಪತನವಾಗಲಿದೆ: ಸುವೇಂದು
ಮೊದಲು ಮಹಾರಾಷ್ಟ್ರದ ಬಿಕ್ಕಟ್ಟನ್ನು ಪರಿಹರಿಸಬೇಕಾಗಿದೆ. ನಂತರ ಜಾರ್ಖಂಡ್, ರಾಜಸ್ಥಾನ ಸರ್ಕಾರಗಳ ಸರದಿ
Team Udayavani, Jun 28, 2022, 10:29 AM IST
ಕೋಲ್ಕತಾ: ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನಾದ ಶಾಸಕರು ಬಂಡಾಯವೆದ್ದು ಅಸ್ಸಾಂನ ಗುವಾಹಟಿಯ ಐಶಾರಾಮಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುವ ಮೂಲಕ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಸರ್ಕಾರ ಪತನದ ಅಂಚಿನಲ್ಲಿದೆ. ಅದೇ ರೀತಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಕೂಡಾ ಅವಧಿಗೂ ಮುನ್ನವೇ ಪತನವಾಗಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಸುವೇಂದು ಅಧಿಕಾರಿ ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:ಇಡಿ ನೋಟಿಸ್, ಪಾರ್ಟಿ ಮೀಟಿಂಗ್: ದೆಹಲಿಗೆ ಹೊರಟ ಡಿಕೆ ಶಿವಕುಮಾರ್
ಮಹಾರಾಷ್ಟ್ರ ಸರ್ಕಾರ ಪತನಗೊಂಡ ನಂತರ ಬಿಜೆಪಿಯೇತರ ರಾಜ್ಯಗಳಾದ ಜಾರ್ಖಂಡ್ ಮತ್ತು ರಾಜಸ್ಥಾನ್ ಸರ್ಕಾರ ಕೂಡಾ ಅದೇ ಹಾದಿ ಹಿಡಿಯಲಿದೆ. ಬಳಿಕ ಪಶ್ಚಿಮಬಂಗಾಳದ ಟಿಎಂಸಿ ಸರದಿ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೂಚ್ ಬೆಹಾರ್ ಜಿಲ್ಲೆಯಲ್ಲಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅಧಿಕಾರಿ, ಮೊದಲು ಮಹಾರಾಷ್ಟ್ರದ ಬಿಕ್ಕಟ್ಟನ್ನು ಪರಿಹರಿಸಬೇಕಾಗಿದೆ. ನಂತರ ಜಾರ್ಖಂಡ್, ರಾಜಸ್ಥಾನ ಸರ್ಕಾರಗಳ ಸರದಿ, ಆ ಬಳಿಕ ಪಶ್ಚಿಮಬಂಗಾಳಕ್ಕೂ ಇದೇ ಪರಿಸ್ಥಿತಿ ಎದುರಾಗಲಿದೆ. ಈ ಸರ್ಕಾರಗಳು 2026ರವರೆಗೆ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ. 2024ರೊಳಗೆ ಈ ಸರ್ಕಾರಗಳನ್ನು ಕಿತ್ತೊಗೆಯಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.
ಸುವೇಂದು ಅಧಿಕಾರಿ ಹೇಳಿಕೆಗೆ ಟಿಎಂಸಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ವಿಧಾನಸಭೆ ಚುನಾವಣೆಯಲ್ಲಿನ ಸೋಲಿನ ಹತಾಶೆಯಿಂದ ಕೇಸರಿ ಪಾಳಯ ಅಧಿಕಾರಕ್ಕಾಗಿ ಹತಾಶ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು
ಯಾವ ದೂರೂ ಬಂದಿಲ್ಲ: ಜಾಕ್ವೆಲಿನ್ ಪರ ವಕೀಲ
RTO ಅಧಿಕಾರಿ ಮನೆ ಮೇಲೆ ದಾಳಿ: ಆದಾಯಕ್ಕಿಂತ 650 ಪಟ್ಟು ಹೆಚ್ಚು ಮೌಲ್ಯದ ಆಸ್ತಿ ಪತ್ತೆ!
ರೇಪ್ ಕೇಸ್; ಬಿಜೆಪಿ ನಾಯಕ ಶಹನವಾಜ್ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ
MUST WATCH
ಹೊಸ ಸೇರ್ಪಡೆ
ವಿಟ್ಲ: ಮಹಿಳೆ ಮನೆಗೆ ತೆರಳುವ ರಸ್ತೆ ಅಗೆದು ಹಾಕಿ, ನಿಂದನೆ: ತಹಶೀಲ್ದಾರ್ಗೆ ದೂರು
ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ
ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ಗೆ ಸಕಲ ಸಿದ್ಧತೆ
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು