Agriculture: ಯಡಮೊಗೆ- ಕೃಷಿಯಲ್ಲಿ ಖುಷಿ ಕಂಡ ಉದ್ಯಮಿ


Team Udayavani, Nov 10, 2023, 10:28 AM IST

Agriculture: ಯಡಮೊಗೆ- ಕೃಷಿಯಲ್ಲಿ ಖುಷಿ ಕಂಡ ಉದ್ಯಮಿ

ಸಿದ್ದಾಪುರ: ಕೃಷಿ ಎಂದಾಗ ದೂರ ಸರಿಯುವ ಕಾಲಘಟ್ಟದಲ್ಲಿ ಹಡಿಲು ಭೂಮಿಯಲ್ಲಿ ಭತ್ತ ಸಹಿತ ಮಿಶ್ರ ಬೆಳೆ ಬೆಳೆಯುವ ಮೂಲಕ ಕೃಷಿಯಲ್ಲಿ ಖುಷಿ ಕಂಡ ಯುವ ಉದ್ಯಮಿ ದೇವಿ ಪ್ರಸಾದ ಶೆಟ್ಟಿ ಸಿದ್ದಾಪುರ.

ಉದ್ಯಮಿಯಾಗಿರುವ ಸಿದ್ದಾಪುರ ಗ್ರಾಮದ ಬಾಳೆಬೇರು ದೇವಿಪ್ರಸಾದ ಶೆಟ್ಟಿ ಅವರು ತನ್ನ ಮನೆಯಿಂದ ಸುಮಾರು 15 ಕಿ.ಮೀ. ದೂರದ ಪಶ್ಚಿಮಘಟ್ಟದ ತಪ್ಪಲಿನ ಕುಗ್ರಾಮವಾದ ಯಡಮೊಗೆ ಗ್ರಾಮದ ವಡ್ನಾಳಿ ಎಂಬಲ್ಲಿ ಹಡಿಲು ಬಿದ್ದ ಸುಮಾರು 8 ಎಕರೆ ಭೂಮಿ ಲೀಸಿಗೆ ತೆಗೆದುಕೊಂಡು, ಉತ್ತಮ ಭತ್ತದ ಕೃಷಿ ಸಹಿತ ಮಿಶ್ರ ಬೆಳೆ ಬೆಳೆಯುವ ಮೂಲಕ ಮಾದರಿ ಕೃಷಿಕ ಎನಿಸಿದ್ದಾರೆ.

ಎಂ4 ತಳಿಯ ಸುಮಾರು 90 ಕೆ.ಜಿ. ಭತ್ತವನ್ನು ಬೀಜೋಪಚಾರ ಮಾಡಿ, 70 ಕ್ವಿಂಟಾಲ್‌ ಭತ್ತದ ಬೆಳೆ ಬೆಳೆದಿದ್ದಾರೆ. ಭತ್ತ ಬೇರ್ಪಡಿಸಿದ ಮೇಲೆ ಸುಮಾರು 6 ಲೋಡು ಒಣ ಹುಲ್ಲು ಕೂಡ ಅವರಿಗೆ ಸಿಕ್ಕಿದೆ. ಭತ್ತ ಬೆಳೆ ಬೆಳೆಯಲು ಸುಮಾರು 1.5 ಲಕ್ಷ ರೂ. ಖರ್ಚು ಮಾಡಿದ್ದಾರೆ. ಹಡಿಲು ಭೂಮಿ ಹದ ಮಾಡಲು ಯಂತ್ರದ ಜತೆಯಲ್ಲಿ ಸ್ಥಳೀಯ ಕಾರ್ಮಿಕರನ್ನು ನೇಮಿಸಿ ಸುಮಾರು 8
ಎಕರೆ ಭೂಮಿಯಲ್ಲಿ ಭತ್ತ ಕೃಷಿ ಸಹಿತ ಇತರ ಉಪ ಬೆಳೆ ಬೆಳೆಯುವ ಮೂಲಕ ಉತ್ತಮ ಆದಾಯ ಗಳಿಸುತ್ತಿದ್ದಾರೆ.

ಯಡಮೊಗೆಯ ಹೊಸಬಾಳು ಎಂಬಲ್ಲಿ ಖಾಲಿ ಜಾಗ ಖರೀದಿಸಿದ ಅವರು ಅಲ್ಲಿ ಎರಡು ಸಾವಿರ ಅಡಿಕೆ ಗಿಡ, 300 ತೆಂಗಿನ ಗಿಡ ಬೆಳೆಸಿದ್ದಾರೆ. ಅಡಿಕೆ ಹಾಗೂ ತೆಂಗಿನ ಗಿಡಗಳ ನಡುವೆಯಲ್ಲಿ ಫೈನಾಪುಲ್‌ ಹಾಗೂ ಇತರ ಬೆಳೆ ಬೆಳೆದಿದ್ದಾರೆ.

ಸಿದ್ದಾಪುರದ ಬಾಳೆಬೇರು ಎಂಬಲ್ಲಿ 2 ಸಾವಿರ ಅಡಿಕೆ ಗಿಡ, ಅರ್ಧ ಎಕರೆಯಲಿ ಬಾಳೆ ಮತ್ತು ಶುಂಠಿಯ ಬೆಳೆ ಬೆಳೆದಿದ್ದಾರೆ. ಕಳೆದ ವರ್ಷ ಅಡಿಕೆ ತೋಟಗಳ ನಡುವೆ ಉಪ ಬೆಳೆಯಾಗಿ ಸುಮಾರು 3 ಟನ್‌ ಶುಂಠಿ ಬೆಳೆ ಬೆಳೆದಿದ್ದಾರೆ. ಇವುಗಳ ಮಧ್ಯೆ ಉಪ ಬೆಳೆಯಾಗಿ ಮರಗೆಣಸು, ಮಾವು, ಲಿಂಬು, ತರಕಾರಿ ಮತ್ತು ಇತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಕಾಡುಪ್ರಾಣಿಗಳು, ಇತರ ಪಕ್ಷಿಗಳ ಹಾವಳಿ, ಕೂಲಿ ಕಾರ್ಮಿಕರ ಕೊರತೆ ನಡುವೆಯೂ ಉತ್ತಮ ಭತ್ತದ ಬೆಳೆ, ಇತರ ಉಪ ಬೆಳೆ ಬೆಳೆದಿದ್ದಾರೆ. ಈ ಬಾರಿ ಭತ್ತದ ನಾಟಿಯ ಸಮಯ ಮಳೆ ಕೊರತೆಯ ನಡುವೆ ಪರ್ಯಾಯ ನೀರಿನ ವ್ಯವಸ್ಥೆ ಮಾಡಿಕೊಂಡು ಭತ್ತ ಬೆಳೆದಿದ್ದಾರೆ.

ಹಡಿಲು ಭೂಮಿಯಲ್ಲಿ ಉತ್ತಮ ಕೃಷಿ ಮಾಡಿ ಮಾದರಿ ಎನಿಸಿದ್ದರೂ ಇಲಾಖೆಗಳ ಸಹಾಯ ಇಲ್ಲದಿರುವುದು ಕೃಷಿ ಇಲಾಖೆಯ ನಿರ್ಲಕ್ಷ ಎದ್ದು ಕಾಣುತ್ತದೆ. ಇಂತಹ ಮಾದರಿ ಕೃಷಿಕರನ್ನು ಇಲಾಖೆಗಳು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ.

*ಸತೀಶ ಆಚಾರ್‌ ಉಳ್ಳೂರು

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.