ಆಲಂಕಾರು: ಸಾರ್ವಜನಿಕ ಶೌಚಾಲಯ ಕಾಮಗಾರಿ ಸ್ಥಗಿತ


Team Udayavani, Feb 17, 2022, 5:15 AM IST

ಆಲಂಕಾರು: ಸಾರ್ವಜನಿಕ ಶೌಚಾಲಯ ಕಾಮಗಾರಿ ಸ್ಥಗಿತ

ಆಲಂಕಾರು: ಮರು ನಿರ್ಮಾಣದ ಉದ್ದೇಶದಿಂದ ತೆರವು ಗೊಳಿಸಿದ್ದ ಸಾರ್ವಜನಿಕ ಶೌಚಾಲಯದ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಆಲಂಕಾರು ಪೇಟೆಯ ಬಸ್‌ ತಂಗು ದಾಣದ ಬಳಿಯಿದ್ದ ತನ್ನ ಅಧೀನದ ಶೌಚಾಲಯವನ್ನು ಗ್ರಾಮ ಪಂಚಾ ಯತ್‌ ಒಂದು ತಿಂಗಳ ಮೊದಲು ತೆರವುಗೊಳಿಸಿತ್ತು. ಇದೀಗ ಶೌಚಾಲಯ ನಿರ್ಮಾಣದ ವಿಚಾರದಲ್ಲಿ ಮೀನಮೇಷ ಎಣಿಸುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಆರಂಭದಲ್ಲೇ ಕಳಪೆ
ಕಾಮಗಾರಿ
ಸುಮಾರು ಹತ್ತು ವರ್ಷಗಳ ಹಿಂದೆ ಈ ಶೌಚಾಲಯವನ್ನು ನಿರ್ಮಿಸಲಾಗಿತ್ತು. ನಿರ್ಮಾಣದ ಕಾಮಗಾರಿಯು ಕಳಪೆ ಯಾಗಿದೆ ಎಂದು ಆರೋಪಿಸಿ ಆರಂಭ ದಲ್ಲೇ ಸಾರ್ವಜನಿಕರು ನಿರ್ಮಾಣಕ್ಕೆ ತಡೆಹಿಡಿದ್ದರು. ಬಳಿಕ ಗುತ್ತಿದಾರರು ಪಂಚಾಂಗವನ್ನು ಮರುನಿರ್ಮಿಸಿ ಕಾಮಗಾರಿಯ ಗುಣಮಟ್ಟ ಕಾಯ್ದು ಕೊಳ್ಳುವ ಬಗ್ಗೆ ಭರವಸೆ ನೀಡಿದ ಬಳಿಕ ಮುಂದುವರಿಸಲಾಗಿತ್ತು. ಆದರೆ ಶೌಚಾಲಯದ ಗುಂಡಿ ಆಳವಾಗಿರದ ಪರಿಣಾಮ ಒಂದು ವರ್ಷದಲ್ಲಿಯೇ ಶೌಚಾಲಯ ತುಂಬಿ ತುಳುಕಿತ್ತು. ಮಳೆಗಾಲದಲ್ಲಿ ಈ ಶೌಚಾಲಯ ನೀರು ತುಂಬಿ ಬರುವ ಕಾರಣ ಸಾರ್ವಜನಿಕರು ಬಳಸದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ದರಿಂದ ದುರಸ್ತಿಗೊಳಿಸುವಂತೆ ಸಾರ್ವಜನಿಕರು ಸ್ಥಳಿಯಾಡಳಿತಕ್ಕೆ ಒತ್ತಡ ಹೇರಿದ್ದರು. ಒಂದು ತಿಂಗಳ ಹಿಂದೆ ಹಳೆಯ ಕಟ್ಟಡವನ್ನು ಕೆಡವಿ ಹಾಕಲಾಗಿತ್ತು. ಬೃಹತ್‌ ಶೌಚಾಲಯದ ಗುಂಡಿಯನ್ನು ಬಸ್‌ ತಂಗುದಾಣದ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದೆ. ಇದರಿಂದ ಯಾವ ಕ್ಷಣದಲ್ಲಿಯೂ ಅಪಾಯ ಸಂಭವಿಸಬಹುದಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಆಲಂಕಾರು ಪೇಟೆಗೆ ಬಂದ ಜನರು ಶೌಚಾಲಯಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಯಾವುದಾದರು ಕಚೇರಿ ಅಥವಾ ಅಂಗಡಿಗಳ ಶೌಚಾಲಯಕ್ಕೆ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ.

ಇಚ್ಛಾ ಶಕ್ತಿಯ ಕೊರತೆ
ಶೌಚಾಲಯದ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬಲ್ಲ ಗುತ್ತಿಗೆದಾರರಿಗೆ ನೀಡದಿರುವುದು ವಿಳಂಬಕ್ಕೆ ಕಾರಣ. ಸ್ಥಳಿಯಾಡಳಿತ ವಿವಿಧ ಅನುದಾನಗಳನ್ನು ಬಳಸಿ ಕೊಂಡು ಇನ್ನಿತರ ಅಭಿವೃದ್ದಿ ಕಾರ್ಯ ಗಳನ್ನು ಮುತುವರ್ಜಿಯಿಂದ ಮುಂದುವರಿಸುತ್ತಿದೆ. ಆದರೆ ಸಾರ್ವ ಜನಿಕವಾಗಿ ಉಪಯೋಗಕ್ಕೆ ಬರುವಂತಹ ಶೌಚಾಲಯದ ಕಾಮಗಾರಿಗೆ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಪರಿಣಾಮ ಸಾರ್ವಜನಿಕರು ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವುದರ ಮೂಲಕ ಪೇಟೆಯ ಸ್ವತ್ಛತೆ ಕಡಿಮೆಯಾಗಿ ಗಬ್ಬು ವಾಸನೆ ಬರುತ್ತಿದೆ ಎಂದು ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಪುರಂದರ ಗೌಡ ಆರೋಪಿಸಿದರು.

ಗುತ್ತಿಗೆದಾರರಿಗೆ ಸೂಚನೆ
ತಾ.ಪಂ. , ಗ್ರಾ.ಪಂ.ನ ಜಂಟಿ ಅನುದಾನಗಳನ್ನು ಬಳಸಿ ಕೊಂಡು ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುವುದು. 1.82 ಲಕ್ಷ ರೂ. ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದ್ದು, ಗುತ್ತಿಗೆದಾರರು ವಿಳಂಬ ನೀತಿ ಅನುಸರಿಸದೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ.
-ಸದಾನಂದ ಆಚಾರ್ಯ,
ಗ್ರಾ.ಪಂ. ಅಧ್ಯಕ್ಷರು, ಅಲಂಕಾರು

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.