ಬಿಜೆಪಿ ಮುಕ್ತ ಕರ್ನಾಟಕ ಮಾಡುವುದೇ ಯೂತ್ ಕಾಂಗ್ರೆಸ್ ಗುರಿ: ಡಿ.ಕೆ ಶಿವಕುಮಾರ್
Team Udayavani, Feb 7, 2021, 8:10 PM IST
ಬೆಂಗಳೂರು: ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದವರು, ಸೋತವರು, ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲರೂ ನಮ್ಮ ಹುಡುಗರೇ. ಎಲ್ಲರೂ ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯಲಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದು, ಬಿಜೆಪಿ ಮುಕ್ತ ಕರ್ನಾಟಕ ಮಾಡುವುದೇ ಅವರ ಗುರಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಪಕ್ಷದಲ್ಲಿ ಆಂತರಿಕವಾಗಿ ಚುನಾವಣೆ ನಡೆದಿದೆ. ಅದರ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಗೆಲುವು, ಸೋಲು ನನಗೆ ಮುಖ್ಯ ಅಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ತಮ್ಮ ಹೋರಾಟದ ಛಲ ತೋರಿರುವುದು ಬಹಳ ಮುಖ್ಯ. ಗೆದ್ದವರು ಹಾಗೂ ಸೋತವರನ್ನು ಸಮಾನಾಗಿ ತೆಗೆದುಕೊಂಡು ಹೋಗುವ ಕೆಲಸ ನಾನು ಮಾಡುತ್ತೇನೆ ಎಂದು ನುಡಿದರು.
ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಕಾಳಜಿ ಮುಖ್ಯ. ನಾವು ಎಲ್ಲರ ಶಕ್ತಿಯನ್ನು ಬಳಕೆ ಮಾಡಿಕೊಳ್ಳಬೇಕು. ಅದನ್ನು ಮಾಡುತ್ತೇವೆ ಎಂದ ಅವರು, ಈ ಫಲಿತಾಂಶದಿಂದ ಯಾವ ಗೊಂದಲವೂ ಸೃಷ್ಟಿ ಆಗಿಲ್ಲ. ಕೇಸಿನ ವಿಚಾರವಾಗಿ ಕೆಲವು ನಿರ್ಧಾರ ತೆಗೆದುಕೊಂಡಿದ್ದಾರೆ. ನನ್ನ ಮೇಲೂ ಬಿಜೆಪಿ ಸ್ನೇಹಿತರು ಕೇಸು ಹಾಕಿಸಿದ್ದಾರೆ. ಹೈಕಮಾಂಡ್ ಯಾರನ್ನು ನೇಮಕ ಮಾಡುತ್ತದೆಯೋ ಅವರ ಜತೆಗೂ ಕೆಲಸ ಮಾಡುತ್ತೇನೆ. ಯಾರು ನೇಮಕ ಆಗುವುದಿಲ್ಲವೋ ಅವರನ್ನೂ ಸೇರಿಸಿಕೊಂಡು ಕೆಲಸ ಮಾಡುತ್ತೇನೆ. ಅವರಲ್ಲೂ ನಾಯಕತ್ವ ಗುಣಗಳಿವೆ. ನಾನು ಕೂಡಾ ವಿದ್ಯಾರ್ಥಿ ಚುನಾವಣೆಯಲ್ಲಿ ಮೊದಲು ಸೋತಿದ್ದೆ. ನಂತರ ಗೆದ್ದೆ ಎಂದರು.
ಸಚಿವರು ಮೀಸಲಾತಿಗೆ ಹೋರಾಟ ಮಾಡುತ್ತಿರುವುದು ಅಚ್ಚರಿ:
ಕುರುಬ ಹಾಗೂ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ವಿಚಾರದಲ್ಲಿ ಸರ್ಕಾರ ಮಾತನಾಡಬೇಕು. ನಾನು ಆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ಇಂತಹ ವಿಚಾರಗಳ ಬಗ್ಗೆ ಮಾತನಾಡುವ ಮುನ್ನ ಪಕ್ಷದ ಒಳಗೆ ಚರ್ಚೆ ಮಾಡಬೇಕು. ಪಕ್ಷದ ಅಭಿಪ್ರಾಯ ತೆಗೆದುಕೊಳ್ಳಬೇಕು. ಇದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರ ಅಲ್ಲ ಎಂದು ನುಡಿದರು.
ಈ ವಿಚಾರದಲ್ಲಿ ನನಗೆ ಆಘಾತ ಎನಿಸಿದ್ದು, ಸಚಿವರೇ ಬೀದಿಗಿಳಿದು ಹೋರಾಟ ಮಾಡುತ್ತಿರುವುದು. ಅವರ ಬಳಿಯೇ ಅಧಿಕಾರ ಇದೆ. ಅವರ ಕೈಯಲ್ಲಿ ಪೆನ್ನು, ಪೇಪರ್ ಇದೆ. ಆದರೂ ಅವರು ಬೀದಿಗೆ ಯಾಕೆ ಇಳಿದಿದ್ದಾರೋ ಗೊತ್ತಾಗುತ್ತಿಲ್ಲ . ಸ್ವಾಮೀಜಿಗಳು ಹೋರಾಟ ಮಾಡುವುದರಲ್ಲಿ ಒಂದು ಅರ್ಥ ಇದೆ. ಅವರಿಗೆ ಧ್ಯೇಯ, ಉದ್ದೇಶ ಇರುತ್ತದೆ. ಆದರೆ ಮಂತ್ರಿಗಳು ಹೋರಾಟ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದರು.
ಇದನ್ನೂ ಓದಿ:ಉತ್ತರಾಖಂಡ ಹಿಮಪಾತ; ಪ್ರವಾಹ ಪೀಡಿತರ ರಕ್ಷಣೆಗೆ ಕೇಂದ್ರ ಸಿದ್ಧ: ಅಮಿತ್ ಶಾ
ಸಭಾಪತಿ ಸ್ಥಾನಕ್ಕೆ ನಜೀರ್ ಪಕ್ಷದ ಅಭ್ಯರ್ಥಿ:
ವಿಧಾನ ಪರಿಷತ್ತಿನ ಸಭಾಪತಿ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ನಜೀರ್ ಅಹ್ಮದ್ ಅವರನ್ನು ಕಣಕ್ಕಿಳಿಸುತ್ತೇವೆ. ಯಾವ ಯಾವ ಪಕ್ಷದವರು ಏನು ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡೋಣ ಎಂದರು.
ಉತ್ತರಾಖಂಡದ ಘಟನೆ ದುರಾದೃಷ್ಟಕರ:
ಉತ್ತರಾಖಂಡದಲ್ಲಿ ಹಿಮಪಾತದಿಂದ 150ಕ್ಕೂ ಹೆಚ್ಚು ಜನ ಕಾಣೆಯಾಗಿರುವುದು ದುರಾದೃಷ್ಟಕರ ಘಟನೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಕೆಲವು ಶವಗಳು ಸಿಕ್ಕಿರುವ ವರದಿ ಬರುತ್ತಿವೆ. ಆ ಘಟನೆಯಲ್ಲಿ ನೊಂದ ಜನರ ಜತೆ ಇಡೀ ಮಾನವ ಕುಲವೇ ನಿಲ್ಲಬೇಕು. ಭಗವಂತ ಒಳ್ಳೆಯದು ಮಾಡಲಿ, ಯಾರಿಗೂ ತೊಂದರೆಯಾಗುವುದು ಬೇಡ. ಕಾಣೆಯಾಗಿರುವವರು ಜೀವಂತವಾಗಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡೋಣ. ಕೇಂದ್ರ ಸರ್ಕಾರ ಕೂಡಲೇ ಸೇನೆ ಬಳಸಿ ಅಲ್ಲಿನ ಜನರಿಗೆ ರಕ್ಷಣೆ ನೀಡಬೇಕು ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…