ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ


Team Udayavani, Mar 23, 2024, 12:45 AM IST

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಕಾಸರಗೋಡು: ಅಂಬಲತ್ತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯಲ್ಲಿ ಪತ್ತೆಯಾದ 2000 ರೂ. ಮುಖಬೆಲೆಯ ನೋಟುಗಳೆಲ್ಲವೂ ಖೋಟಾನೋಟುಗಳಾಗಿವೆ ಎಂದು ತನಿಖೆಯಿಂದ ಸ್ಪಷ್ಟಗೊಂಡಿದೆ.

ಹೀಗೆ ಒಟ್ಟು 6.96 ಕೋಟಿ ರೂ. ಖೋಟಾನೋಟುಗಳು ಪತ್ತೆ ಯಾಗಿದ್ದು ಅದಕ್ಕೆ ಸಂಬಂಧಿಸಿ ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಈ ಮನೆಯಿಂದ 7.25 ಕೋಟಿ ರೂ. ಪತ್ತೆಯಾಗಿದೆ ಎಂದು ಆರಂಭಿಕ ಹಂತದಲ್ಲಿ ಪೊಲೀಸರು ತಿಳಿಸಿದ್ದರೂ ಅವುಗಳನ್ನು ಯಂತ್ರದಲ್ಲಿ ಎಣಿಕೆ ಮಾಡಿದಾಗ ಎಲ್ಲವೂ ಖೋಟಾ ನೋಟು ಎಂಬುದು ಸ್ಪಷ್ಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದಲ್ಲಿ 2000 ರೂ. ಮುಖ ಬೆಲೆಯ ನೋಟುಗಳನ್ನು ಅಸಿಂಧು ಗೊಳಿಸಿದ್ದರೂ ಆರ್‌ಬಿಐ ಅದನ್ನು ಈಗಲೂ ಸ್ವೀಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಖೋಟಾನೋಟುಗಳನ್ನು ಮುದ್ರಿಸಿ ಅಸಲಿ ನೋಟು ಎಂದು ನಂಬಿಸಿ ವಿತರಿಸುವ ವ್ಯವಹಾರದಲ್ಲಿ ಈ ಅವ್ಯವಹಾರದವರು ತೊಡಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಈ ನೋಟುಗಳನ್ನು ಕರ್ನಾಟಕ ದಲ್ಲಿ ಮುದ್ರಿಸಿ ಇಲ್ಲಿಗೆ ತಲುಪಿಸಲಾಗಿದೆ ಎಂಬ ಬಲವಾದ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಈ ವರೆಗೂ ಯಾರನ್ನೂ ಆರೋಪಿಯನ್ನಾಗಿ ಸೇರಿಸಲಾಗಿಲ್ಲ ಮತ್ತು ಬಂಧಿಸಲಾಗಿಲ್ಲ. ತನಿಖೆ ಪೂರ್ಣಗೊಂಡು ಸ್ಪಷ್ಟ ಪುರಾವೆಗಳು ಲಭಿಸಿದ ಬಳಿಕವಷ್ಟೇ ಬಂಧನ ಇತ್ಯಾದಿ ಕ್ರಮಗಳು ಮುಂದೆ ನಡೆಯಲಿದೆ. ಈ ಖೋಟಾನೋಟು ವ್ಯವಹಾರದಲ್ಲಿ ಭಾಗಿ ಎಂದು ಹೇಳಲಾಗುತ್ತಿರುವ ಇಬ್ಬರು ವ್ಯಕ್ತಿಗಳು ತಲೆಮರೆಸಿಕೊಂಡಿದ್ದಾರೆ. ಅವರ ಮೊಬೈಲ್‌ ಫೋನ್‌ಗಳು ಸ್ವಿಚ್‌ ಆಫ್‌ ಆಗಿದೆ. ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯನ್ನು ಪೊಲೀಸರು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಬಂಧಿಸಿ ಸಮಗ್ರ ವಿಚಾರಣೆಗೊಳಪಡಿಸಿದ ಬಳಿಕವಷ್ಟೇ ಈ ಖೋಟಾನೋಟು ವ್ಯವಹಾರ ಕುರಿತಾದ ಸಂಪೂರ್ಣ ಮಾಹಿತಿಗಳು ಲಭಿಸಲಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ನಿವಾಸಿ ಮೂಲಕ ಈ ನೋಟುಗಳನ್ನು ಇಲ್ಲಿಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೋಟುಗಳನ್ನು ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯಲ್ಲಿ ಬಚ್ಚಿಡಲಾಗಿತ್ತು. ಈ ಖೋಟಾನೋಟುಗಳನ್ನು ವಿದೇಶದಲ್ಲಿ ಮುದ್ರಿಸಲಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.

 

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.