ಕ್ಯಾಪ್ಟನ್-ಬಿಜೆಪಿ ಮೈತ್ರಿ ಅಂತಿಮ : ಜಂಟಿ ಪ್ರಣಾಳಿಕೆ ಮಾಡಲು ಸಿದ್ಧತೆ
Team Udayavani, Dec 28, 2021, 8:20 AM IST
ಹೊಸದಿಲ್ಲಿ: ಪಂಜಾಬ್ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್, ಮಾಜಿ ಸಚಿವ ಸುಖ್ದೇವ್ ಧಿಂಡ್ಸಾ ಅವರ ಶಿರೋಮಣಿ ಅಕಾಲಿ ದಳ (ಸಂಯುಕ್ತ) ಪಕ್ಷದ ಜತೆಗೆ ಬಿಜೆಪಿ ಸ್ಥಾನ ಹೊಂದಾಣಿಕೆ ಮಾಡಿಕೊಡಿದೆ.
ಈ ಬಗ್ಗೆ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ಜೆಪಿ ನಡ್ಡಾ ಮತ್ತು ಕ್ಯಾ| ಅಮರಿಂದರ್ ಸೋಮವಾರ ಮಾತುಕತೆ ನಡೆಸಿ, ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲದೆ, ಮೂರು ಪಕ್ಷಗಳು ಸೇರಿಕೊಂಡು ಚುನಾವಣ ಪ್ರಣಾಳಿಕೆ ಸಿದ್ಧಗೊಳಿಸಿ, ಬಿಡುಗಡೆ ಮಾಡಲು ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ತಿಳಿಸಿದ್ದಾರೆ.
ಇಂದು 3 ರ್ಯಾಲಿ: ಉತ್ತರಪ್ರದೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ 3 ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹರ್ದೋಯಿ, ಸುಲ್ತಾನ್ಪುರ ಮತ್ತು ಭದೋಹಿ ಜಿಲ್ಲೆಗಳಲ್ಲಿ ರ್ಯಾಲಿ ಆಯೋಜಿಸಲಾಗಿದೆ.
ಬಿಜೆಪಿ ಸೇರಿದ ನಟಿ ತಂದೆ ಮೇಲೆ ಗುಂಡಿನ ದಾಳಿ: ಹಿಂದಿಯ ಬಿಗ್ಬಾಸ್ 13 ಸ್ಪರ್ಧಿ ಶೆಹನಾಜ್ ಗಿಲ್ ತಂದೆ ಸಂತೋಕ್ ಸಿಂಗ್ ಸುಖ್ ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಪಕ್ಷ ಸೇರಿದ ಬೆನ್ನಲ್ಲೇ ಕಿಡಿಗೇಡಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ್ದಾರೆ. ಶನಿವಾರ ಸಂಜೆ ಸಂತೋಕ್ ಅವರು ಅಮೃತಸರದಲ್ಲಿ ಕಾರಿನಲ್ಲಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಅದೃಷ್ಟವಶಾತ್, ಸಂತೋಕ್ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.
ಆಪ್ಗೆ ಭರ್ಜರಿ ಜಯ
ಪಂಜಾಬ್ ವಿಧಾನಸಭೆ ಚುನಾವಣೆಗೆ ಮುನ್ನವೇ ಚಂಡೀಗಢ ಮಹಾನಗರ ಪಾಲಿಕೆಗೆ ನಡೆದಿದ್ದ ಚುನಾವಣೆಯಲ್ಲಿ ಅಚ್ಚರಿಯೆಂಬಂತೆ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. 35 ವಾರ್ಡ್ಗಳ ಪೈಕಿ ಆಪ್ 14 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 12, ಕಾಂಗ್ರೆಸ್ 8, ಶಿರೋಮಣಿ ಅಕಾಲಿ ದಳ 1 ಕ್ಷೇತ್ರಗಳಲ್ಲಿ ಗೆದ್ದಿವೆ. ಈ ಹಿಂದಿನ ಚುನಾವಣೆ ವೇಳೆ, 26 ವಾರ್ಡ್ಗಳ ಪೈಕಿ 20 ಬಿಜೆಪಿ ಪಾಲಾಗಿತ್ತು. ಈ ಗೆಲುವಿಗೆ ಹರ್ಷ ವ್ಯಕ್ತಪಡಿಸಿರುವ ದಿಲ್ಲಿ ಸಿಎಂ ಕೇಜ್ರಿವಾಲ್, “ಚಂಡೀಗಢವು ಪ್ರಾಮಾಣಿಕ ರಾಜಕೀಯವನ್ನು ಆಯ್ಕೆ ಮಾಡಿದೆ. ಪಂಜಾಬ್ನಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ’ ಎಂದಿದ್ದಾರೆ.
ಹಗಲಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ರ್ಯಾಲಿ ಮಾಡುವುದು. ರಾತ್ರಿ ಹೊತ್ತು ಕರ್ಫ್ಯೂ ಹೇರುವುದು! ಉತ್ತರಪ್ರದೇಶದ ಸೀಮಿತ ಆರೋಗ್ಯ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ಆದ್ಯತೆಯಿರುವುದು ಕೊರೊನಾ ನಿಯಂತ್ರಣವೇ ಅಥವಾ ಚುನಾವಣಾ ರ್ಯಾಲಿಗಳೇ ಎಂಬುದನ್ನು ಮೊದಲು ನಾವು ನಿರ್ಧರಿಸಬೇಕು.
ವರುಣ್ ಗಾಂಧಿ, ಬಿಜೆಪಿ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ