ಚಿಕ್ಕೋಡಿಗೆ ಡಾ. ಅಂಬೇಡ್ಕರರು ಬಂದಾಗ ಆರೈಕೆ ಮಾಡಿದ್ದ ಶತಾಯುಷಿ ಅಜ್ಜಿ ವಿಧಿವಶ
Team Udayavani, Jun 3, 2020, 10:16 AM IST
ಚಿಕ್ಕೋಡಿ: ಭಾರತ ರತ್ನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಚಿಕ್ಕೋಡಿ ನ್ಯಾಯಾಲಯದಲ್ಲಿ ವಾದ ಮಾಡಲು ಬಂದಾಗ ಅವರನ್ನು ಆರೈಕೆ ಮಾಡಿದ ತಾಲೂಕಿನ ಕರೋಶಿ ಗ್ರಾಮದ ವೃದ್ದೆ ಜಿಗನಬಿ ಬಾಪುಲಾಲ್ ಪಟೇಲ (108) ಮಂಗಳವಾರ ರಾತ್ರಿ ವಿಧಿವಶರಾದರು.
ಮೃತ ಶತಾಯುಷಿ ಜಿಗನಬಿ ಅವರಿಗೆ ಐದು ಜನ ಮಕ್ಕಳಲ್ಲಿ ಹಿರಿಯ ಪುತ್ರ ನಿಧನರಾಗಿದ್ದು, ಓರ್ವ ಪುತ್ರ, ಮೂವರು ಪುತ್ರಿಯರು ಇದ್ದಾರೆ.
1927ರಲ್ಲಿ ಮಹಾರಾಷ್ಟ್ರದ ಔರವಾಡ ಗ್ರಾಮದ ದೇವಸ್ಥಾನದ ಜಮೀನು ಕುರಿತು ದೇವಸ್ತಾನ ಸಮಿತಿ ಹಾಗೂ ಪಟೇಲ ನಡುವೆ ವ್ಯಾಜ್ಯ ನಡೆದಿತ್ತು. ಅಂದಿನ ಬಾಂಬೆ ಹೈಕೋರ್ಟ್ ಸುಪ್ರಸಿದ್ಧ ನ್ಯಾಯವಾದಿ ಡಾ.ಅಂಬೇಡ್ಕರ್ ಅವರು ಶತಯುಷಿ ಜಗನಬಿ ಮನೆಯಲ್ಲಿ ವಾಸವಾಗಿದ್ದರು. ಅಂದು 9 ವರ್ಷದ ಬಾಲಕಿ ಇದ್ದ ಜಿಗನಬಿ ಅವರು ಅಂಬೇಡ್ಕರಗೆ ಊಟ ಉಪಚಾರ ಮಾಡಿದ್ದರು.
ಜಿಗನಬಿ ಅವರು ನೂರು ವರ್ಷ ದಾಟಿದರೂ ಮನೆಯಲ್ಲಿ ಕೆಲಸ ಕಾರ್ಯದಲ್ಲಿ ತೊಡಗುತ್ತಿದ್ದರು. ಯುವ ಪೀಳಿಗೆಗೆ ಮಾದರಿಯಾಗಿದ್ದರು. ಇತ್ತೀಚೆಗೆ ಅಂಬೇಡ್ಕರ್ ಮೊಮ್ಮಗ ಪ್ರಕಾಶ ಅಂಬೇಡ್ಕರ್, ಬಿಎಸ್ ಪಿ ರಾಷ್ಟ್ರೀಯ ಅಧ್ಯಕ್ಷ ಮಾಯಾವತಿ ಅವರು ಶತಾಯುಷಿ ಜಿಗನಬಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿದ್ದರು.
ಡಾ. ಅಂಬೇಡ್ಕರ್ ಅವರು ಜಿಗನಬಿ ಅವರಿಗೆ ಪ್ರೀತಿಯಿಂದ ಮುನ್ನಿ ಎಂದು ಕರೆಯುತ್ತಿದ್ದರು ಎಂದು ಬದುಕಿದ್ದಾಗ ಶತಾಯುಷಿ ಹೇಳಿದ್ದರು. ಚಿಕ್ಕೋಡಿ ತಾಲೂಕಿನ ಹಿರಿಯ ಜೀವ ಜಿಗನಬಿ ನಿಧನದಿಂದ ತಾಲೂಕಿನಾದ್ಯಂತ ಶೋಕ ಮಡುಗಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ