ಕೇರಳದಲ್ಲಿ ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ
Team Udayavani, Jul 17, 2021, 9:25 PM IST
ತಿರುವನಂತಪುರಂ: ವರದಕ್ಷಿಣೆ ಪಿಡುಗನ್ನು ಕೇರಳದಲ್ಲಿ ಮೂಲೋತ್ಪಾಟನೆ ಮಾಡಲು ವರದಕ್ಷಿಣೆ ನಿಷೇಧ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಆ ರಾಜ್ಯದ ಎಲ್ಲ 14 ಜಿಲ್ಲೆಗಳಲ್ಲೂ ವರದಕ್ಷಿಣೆ ನಿಗ್ರಹಾಧಿಕಾರಿಯನ್ನು ನೇಮಿಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಮಾತನಾಡಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್; ಇದುವರೆಗೆ ಎರ್ನಾಕುಳಂ, ತಿರುವನಂತಪುರಂ, ಕಲ್ಲಿಕೋಟೆ ಜಿಲ್ಲೆಗಳಲ್ಲಿ ವರದಕ್ಷಿಣೆ ನಿಗ್ರಹಾಧಿಕಾರಿಗಳಿದ್ದರು. ಇನ್ನು ಮುಂದೆ ಎಲ್ಲ ಜಿಲ್ಲೆಗಳಲ್ಲಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಈ ಪಾತ್ರವನ್ನೂ ನಿಭಾಯಿಸಲಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ಈ ವರದಕ್ಷಿಣೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ಅಧಿಕಾರಿಗಳಿಗೆ ಕೇರಳದಲ್ಲಿ ತರಬೇತಿ ನೀಡಲಾಗಿದೆ. ಹಾಗೆಯೇ ಮಹಿಳೆಯರಿಗೆ ನೆರವು ನೀಡಲು ಸ್ವಯಂಸೇವಾ ಸಂಘಟನೆಗಳ ಸಹಾಯವನ್ನು ಕೇಳಲಾಗಿದೆ. ಜಿಲ್ಲಾ ಸಲಹಾ ಮಂಡಳಿ, ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಲೂ ತೀರ್ಮಾನಿಸಲಾಗಿದೆ.
ಇದನ್ನೂ ಓದಿ :ಟಿಸಿಎಸ್, ಇನ್ಫಿ, ವಿಪ್ರೋದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಚಿಂತನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ