ಎ.29 ರಂದು ಉಡುಪಿ, ಮಂಗಳೂರಿಗೆ ಶಾ ಭೇಟಿ
Team Udayavani, Apr 27, 2023, 7:55 AM IST
ಮಂಗಳೂರು/ಉಡುಪಿ, ಎ.26: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಎ.29 ರಂದು ಉಡುಪಿ ಹಾಗೂ ಮಂಗಳೂರಿಗೆ ಭೇಟಿ ನೀಡಲಿದ್ದು ರೋಡ್ ಶೋ ಹಾಗೂ ಪ್ರಚಾರ ಸಭೆ ಗಳಲ್ಲಿ ಪಾಲ್ಗೊಳ್ಳುವರು.
ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ 2.20ಕ್ಕೆ ಹೆಲಿ ಕಾಪ್ಟರ್ ಮೂಲಕ ಆದಿಉಡುಪಿಗೆ ಆಗಮಿಸಿ, ಅಲ್ಲಿಂದ ಕಟಪಾಡಿಯ ಗ್ರೀನ್ವ್ಯಾಲಿ ಮೈದಾನಕ್ಕೆ ರಸ್ತೆ ಮೂಲಕ ತೆರಳುವರು. ಅಲ್ಲಿ ಕಾಪು ಮತ್ತು ಉಡುಪಿ ಕ್ಷೇತ್ರದ ಕಾರ್ಯಕರ್ತರು ಹಾಗೂ ಬೆಂಬಲಿಗರ ಸಮಾವೇಶದಲ್ಲಿ ಭಾಷಣ ಮಾಡುವರು. ಬಳಿಕ ಮತ್ತೆ ಆದಿಉಡುಪಿಗೆ ಬಂದು ಹೆಲಿ ಕಾಪ್ಟರ್ ಮೂಲಕ ಬೈಂದೂರಿಗೆ ಹೊರಡುವರು. ಬೈಂದೂರು ಕ್ಷೇತ್ರದ ಸಿದ್ದಾಪುರದಲ್ಲಿ ಸಂಜೆ 4 ಗಂಟೆಗೆ ರೋಡ್ ಶೋ ನಡೆಸಿ, ಅನಂತರ ಸಿದ್ದಾಪುರ ವೃತ್ತದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವರು. ಈ ಎರಡು ಕಾರ್ಯಕ್ರಮಗಳಿಗೂ ಜಿಲ್ಲಾ ಬಿಜೆಪಿ ಸಿದ್ಧತೆ ನಡೆಸಿದೆ.
ಸಂಜೆ ಮಂಗಳೂರಿಗೆ
ಸಂಜೆ 5.25ಕ್ಕೆ ಮೇರಿ ಹಿಲ್ ಹೆಲಿಪ್ಯಾಡ್ಗೆ ಆಗ ಮಿಸಲಿದ್ದು, 5.40 ರಿಂದ 6.40 ರವರೆಗೆ ಪುರಭವನದಿಂದ ನವಭಾ ರತ ವೃತ್ತದವರೆಗೆ ರೋಡ್ ಶೋ ದಲ್ಲಿ ಪಾಲ್ಗೊಳ್ಳುವರು. ಬಳಿಕ ಕೊಂಚ ವಿಶ್ರಾಂತಿ ಪಡೆದು, 7 ರಿಂದ 8 ರವರೆಗೆ ಪಕ್ಷದ ಸಭೆ ನಡೆಸುವರು. 8.50ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊಸ ದಿಲ್ಲಿಗೆ ತೆರಳುವರು. ಈ ಹಿಂದೆ ಎ. 27 ಕ್ಕೆ ಕಾಯಕ್ರಮ ನಿಗದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ