ಆನಂದ್ ರಾವ್ ವೃತ್ತದ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣನ ಹೆಸರು : ಸಿಎಂ ಯಡಿಯೂರಪ್ಪ
Team Udayavani, Jan 26, 2020, 6:07 PM IST
ಬೆಂಗಳೂರು : ನಗರದ ಆನಂದ್ರಾವ್ ವೃತ್ತದ ಮೇಲ್ಸೇತುವೆಗೆ ಸಂಗೋಳ್ಳಿ ರಾಯಣ್ಣ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸಂಗೋಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯ ಅಂಗವಾಗಿ ಮೆಜೆಸ್ಟಿಕ್ ಸಮೀಪವಿರುವ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಅವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ನೆರವೇರಿಸಿದ ನಂತರ ಮಾತನಾಡಿದ ಅವರು, ಅಪ್ರತಿಮ ದೇಶಭಕ್ತ ಸಂಗೋಳ್ಳಿ ರಾಯಣ್ಣ ಅವರನ್ನು ಸದಾ ಸ್ಮರಿಸುವ ದೃಷ್ಟಿಯಿಂದ ಬಿಬಿಎಂಪಿ ವ್ಯಾಪ್ತಿಯ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಆನಂದ್ರಾವ್ ವೃತ್ತದ ಮೇಲ್ಸೇತುವೆಗೆ ಸಂಗೋಳ್ಳಿ ರಾಯಣ್ಣ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಈಗಾಗಲೇ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಕನ್ನಡಿಗರ ಶೌರ್ಯದ ಸಂಕೇತ:
ಸಂಗೋಳ್ಳಿ ರಾಯಣ್ಣ ಅವರು ಒಂದು ಜನಾಂಗ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ಕನ್ನಡದ ಮೊದಲ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಇವರು, ಸಮಸ್ತ ಕನ್ನಡಿಗರ ಶೌರ್ಯದ ಪ್ರತೀಕವಾಗಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದು ಅಪ್ರತಿಮ ಹೋರಾಟಗಾರರಾಗಿ ಬೆಳೆದಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಬಂಟನಾಗಿ ಬ್ರಿಟಿಷ್ ಇಸ್ಟ್ಇಂಡಿಯಾ ಕಂಪೆನಿ ವಿರುದ್ಧ ಹೋರಾಟ ಮಾಡಿದ ದಿಟ್ಟ ವೀರ ಎಂದು ಬಣ್ಣಿಸಿದರು.
ಅಪ್ರತಿಮ ದೇಶಭಕ್ತ ಸಂಗೋಳ್ಳಿ ರಾಯಣ್ಣ ಅವರನ್ನು ಸದಾ ಸ್ಮರಿಸಿಕೊಳ್ಳಬೇಕು. ಕಿತ್ತೂರಿನ ಸಣ್ಣ ಸಂಸ್ಥಾನದಲ್ಲಿದ್ದ ರಾಯಣ್ಣ, ಬ್ರಿಟಿಷರ ವಿರುದ್ಧ ಹೋರಾಡಿದ ಚರಿತ್ರೆ ರೋಚಕವಾಗಿದೆ. ಸಂಗೋಳ್ಳಿ ರಾಯಣ್ಣನವರ ಜೀವನ ನಮಗೆಲ್ಲ ಪ್ರೇರಣೆಯಾಗಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾಗಿದ್ದಾರೆ. ಅವರ ಧ್ಯೇಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಸಂಗೋಳ್ಳಿ ರಾಯಣ್ಣ ಅವರಿಗೆ ನಾವು ಸಲ್ಲಿಸುವ ನಮನ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ