ಅಂಗನವಾಡಿ ಕಾರ್ಯಕರ್ತೆಯರ ಪರಿಷ್ಕೃತ ಗೌರವಧನ ನ.1 ರಿಂದಲೇ ಜಾರಿ


Team Udayavani, Oct 25, 2019, 5:48 PM IST

Minister-Shashikala-Jolle,

ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರಿಗೆ ಗೌರವ ಧನ ಹೆಚ್ಚಳ ನ. 1 ರಿಂದಲೇ ಜಾರಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಸಾವಿರ ರೂ., ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 1250 ರೂ. ಹಾಗೂ ಸಹಾಯಕಿಯರಿಗೆ 1 ಸಾವಿರ ರೂ. ಹೆಚ್ಚಳವಾಗಿದ್ದು ಅ.1  2018 ರಿಂದಲೇ ಪೂರ್ವಾನ್ವಯವಾಗಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು 1500 ರೂ. ಹೆಚ್ಚಳ ಮಾಡಿತ್ತು. ರಾಜ್ಯ ಸರ್ಕಾರ 500 ರೂ. ಹೆಚ್ಚಳ ಮಾಡಿತ್ತು. ಹಿಂದೆಯೇ ಘೋಷಣೆ ಮಾಡಿದ್ದರೂ ಇನ್ನೂ ಕೊಟ್ಟಿರಲಿಲ್ಲ. ಇದೀಗ ಆರ್ಥಿಕ ಇಲಾಖೆಯ ಅನುಮತಿಯೂ ದೊರೆತಿದೆ ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಪ್ರಸ್ತುತ 8 ಸಾವಿರ ಗೌರವ ಧನ ಪಡೆಯುತ್ತಿದ್ದು ಇದೀಗ 10 ಸಾವಿರ ರೂ. ಸಿಗಲಿದೆ. ಅದೇ ರೀತಿ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಪ್ರಸ್ತು 4750 ರೂ. ಪಡೆಯುತ್ತಿದ್ದು ಇದೀಗ ಆರು ಸಾವಿರ ರೂ. ಸಿಗಲಿದೆ. ಸಹಾಯಕಿಯರು ನಾಲ್ಕು ಸಾವಿರ ಪಡೆಯುತ್ತಿದ್ದು ಐದು ಸಾವಿರ ರೂ. ಸಿಗಲಿದೆ ಎಂದು ವಿವರಿಸಿದರು.

ಸುಮಾರು 1,28,491 ಅಂಗನವಾಡಿ ಕಾರ್ಯಕರ್ತೆಯರು , ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದು, ಗೌರವ ಧನ ಹೆಚ್ಚಳಕ್ಕಾಗಿ ಒಟ್ಟು 98.30 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಇಲಾಖೆಯಲ್ಲಿ ಶೇ.50 ರಷ್ಟು ಹುದ್ದೆಗಳ ಖಾಲಿ ಇದ್ದ ಕಾರಣ ಸಮಸ್ಯೆಯಾಗಿದೆ. ಇದೇ ಕಾರಣಕ್ಕಾಗಿ ಆಡಳಿತ ಸುಧಾರಣೆಗೆ ಇಲಾಖೆಯಿಂದ ಒತ್ತು ನೀಡಲಾಗುತ್ತಿದ್ದು 48 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ನೇಮಿಸಿ ಸ್ಥಳ ನಿಯುಕ್ತಿಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

33 ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿದ್ದು ಇವರಿಗೂ ಸ್ಥಳ ನಿಯುಕ್ತಿಗೊಳಿಸಲಾಗುತ್ತಿದೆ.

ಈಗಾಗಲೇ 628 ಮಹಿಳಾ ಮೆಲ್ವಿಚಾರಕಿಯರಿಗೆ ಸ್ಥಳ ನಿಯುಕ್ತಿಗೊಳಿಸಲು ಕ್ರಮ ವಹಿಸಲಾಗುತ್ತಿದೆ. ಇದರಲ್ಲಿ 374 ಮೇಲ್ವಿಚಾರಕರಿಗೆ ತರಬೇತಿ ಪೂರ್ಣಗೊಂಡಿದ್ದು ಬಾಕಿ 254 ಮೇಲ್ವಿಚಾರಕರಿಗೆ ತರಬೇತಿ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ.

ಐದು ವಿವಿಧ ವೃಂದದ ಅದಿಕಾರಿಗಳಿಗೆ ಮುಂಬಡ್ತಿ ನೀಡಿ ಇಲಾಖೆಯು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕ್ರಮ ವಹಿಸಲಾಗಿದ್ದು 104 ಅಧಿಕಾರಿಗಳಿಗೆ ಮುಂಬಡ್ತಿ ಸಲುವಾಗಿ ಇಲಾಖಾ ಮುಂಬಡ್ತಿ ಸಮಿತಿಯಿಂದ ಡಿಪಿಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಸ್ಥಳ ನಿಯುಕ್ತಿ ಬಾಕಿಯಿದೆ. ಇನ್ನೂ 80 ವಿವಿಧ ಹಂತದ ಅಧಿಕಾರಿಗಳಿಗೆ ಮುಂಬಡ್ತಿ ಸಂಬಂಧ ಡಿಪಿಸಿ ಪ್ರಕ್ರಿಯೆ ಪ್ರಾರಂಭಿಸಿದ್ದು ಪದೋನ್ನತಿ ಶೀಘ್ರದಲ್ಲಿಯೇ ನೀಡಲಾಗುವುದು ಎಂದು ವಿವರಿಸಿದರು.

1000 ಅಂಗನವಾಡಿ ಕೇಂದ್ರಗಳ ದುರಸ್ಥಿಗೆ10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಎರಡನೇ ಹಂತದಲ್ಲಿ ಇನ್ನೂ ದುರಸ್ಥಿ ಬಾಕಿ ಇರುವ ಅಂಗನವಾಡಿ ಕೇಂದ್ರಗಳಿಗೆ ಹಣ ಬಿಡುಗಡೆ ಮಾಡಲಾಗುವುದು. ನೆರೆ ಪೀಡಿತ ಪ್ರದೇಶಗಳಲ್ಲಿನ ಅಂಗನವಾಡಿ ಕೇಂದ್ರಗಳು ಮಳೆಯಿಂದ ಹಾನಿಯಾಗಿದ್ದರೆ ಶಾಲೆ, ದೇವಾಲಯ ಸೇರಿ ಬದಲಿ ಜಾಗದಲ್ಲಿ ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ಬೆಳಗಾವಿಯಲ್ಲಿ 1 ಸಾವಿರ ಅಂಗನವಾಡಿ ಪೈಕಿ ಮೊದಲ ಹಂತದಲ್ಲಿ 100 ಅಂಗನವಾಡಿ ಕೇಂದ್ರಗಳನ್ನು ಹೈಟೆಕ್‌ ಕೇಂದ್ರಗಳಾಗಿ ರೂಪಿಸಲು ಕಾರ್ಯ ಯೋಜನೆ ರೂಪಿಸಲಾಗಿದೆ. ಮುಂದಿನ ಹಂತದಲ್ಲಿ ಇತರೆ ಜಿಲ್ಲೆಗಳಲ್ಲೂ ಹೈಟೆಕ್‌ ಅಂಗನವಾಡಿ ಕೇಂದ್ರ ಸ್ಥಾಪಿಸಿ ಅಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆ, ಪೌಷ್ಠಿಕ ಆಹಾರ ಕಲ್ಪಿಸಲಾಗುವುದು ಎಂದು ವಿವರಿಸಿದರು. ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ನಿರ್ದೇಶಕ ದಯಾನಂದ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.