ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ಕ್ರಮ: ಸಚಿವ ಪ್ರಭು ಚವ್ಹಾಣ್
Team Udayavani, Jun 4, 2020, 3:27 PM IST
ಬೆಂಗಳೂರು : ರಾಜ್ಯದಲ್ಲಿ ‘ಅನಧಿಕೃತವಾಗಿ ಪ್ರಾಣಿಗಳ ಸಾಗಣೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರಾಣಿ ಹಿಂಸೆಗೆ ಸಂಬಂಧಪಟ್ಟ ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸಲು ಅಗತ್ಯಕ್ರಮ ಕೈಗೊಳ್ಳಲಾಗುವುದು’ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದ್ದು, ಅದರ ಪೂರ್ಣ ಪ್ರಮಾಣದ ಆಡಳಿತ ಮಂಡಳಿಯ ಸಭೆ ಇಂದು ವಿಕಾಸಸೌಧದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು. 2019 ರಂದು ಮಂಡಳಿ ನೋಂದಣಿಯಾಗಿದ್ದು, ಸದ್ಯ ನಮ್ಮರಾಜ್ಯದಲ್ಲಿ 85.22 ಲಕ್ಷದನ, 29.98 ಲಕ್ಷಎಮ್ಮೆ, 110.91 ಲಕ್ಷ ಕುರಿ, 61.96ಲಕ್ಷ ಮೇಕೆ , 3.26 ಲಕ್ಷ ಹಂದಿ ಮತ್ತು 617 ಲಕ್ಷ ಕೋಳಿಗಳಿವೆ. ಈ ಎಲ್ಲಾ ಜಾನುವಾರುಗಳ ಆರೋಗ್ಯರಕ್ಷಣೆಗಾಗಿ 4214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.
ನಿಯಮಗಳ ಪ್ರಕಾರ ಈ ಮಂಡಳಿಯ ಪ್ರಮುಖ ಕಾರ್ಯಗಳೆಂದರೆ:
– ಪ್ರಾಣಿಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸಂದರ್ಭಾನುಸಾರ ಎದುರಾಗುವ ಸಮಸ್ಯೆಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರಕ್ಕೆ ಕಾಲಕಾಲಕ್ಕೆ ಸಲಹೆ ನೀಡುವುದು.
– ಪಶು ಹಾಗೂ ಪಕ್ಷಿಗಳ ಸಂರಕ್ಷಣೆಗಾಗಿ ರಾಜ್ಯದಲ್ಲಿ ಸ್ಥಾಪಿಸಲಾದ ಪ್ರಾಣಿಕಲ್ಯಾಣ ಸಂಘಗಳು/ ನಿಕಾಯಗಳು/ ಸಂಸ್ಥೆಗಳಿಗೆ ಮಾನ್ಯತೆ ಹಾಗೂ ಸಲಗ್ನತೆ ನೀಡುವುದು.
– ಪ್ರಾಣಿಗಳಿಗಾಗಿ ಶೆಡ್ಡುಗಳು, ನೀರಿನ ತೊಟ್ಟಿಗಳ ನಿರ್ಮಾಣವನ್ನು ಪ್ರೋತ್ಸಾಹಿಸುವುದು.
– ಪ್ರಾಣಿಗಳನ್ನು ಕರುಣೆಯಿಂದ ನೋಡಿಕೊಳ್ಳಲು ಸಾರ್ವಜನಿಕರಲ್ಲಿಅರಿವು ಮೂಡಿಸುವುದು.
– ಪ್ರಾಣಿಗಳಿಗೆ ಸಾಗಾಣಿಕೆ, ಪ್ರಾಣಿಗಳಿಗೆ ಉಂಟಾಗುವ ಅನವಶ್ಯಕ ನೋವು ಅಥವಾ ಯಾತನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿಕ್ರಮ ಕೈಗೊಳ್ಳುವುದು.
ಮಂಡಳಿಯ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನದ ಅಡಿಯಲ್ಲಿ ಈ ಎಲ್ಲ ಕಾರ್ಯಗಳು ನಡೆಯಲಿವೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಪ್ರಾಣಿದಯಾ ಸಂಘಗಳ ಅಧ್ಯಕ್ಷರಾಗಿದ್ದು, ಪಶುಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.
ಮಂಡಳಿಗೆ ವಿವಿಧ ಕ್ಷೇತ್ರಗಳ ಅನುಭವಿಗಳನ್ನು ಸದಸ್ಯರನ್ನಾಗಿ ನೇಮಿಸಿದ್ದು, ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು, ಪ್ರಾಣಿಗಳ ಯೋಗಕ್ಷೇಮಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪ್ರಾಣಿಗಳಿಗೆ ಯಾರಿಂದಲೂ, ಯಾವುದೇ ರೀತಿಯ ನೋವು, ಯಾತನೆ ಸಂಭವಿಸುವುದನ್ನು ತಡೆಯಬೇಕು ಎಂದು ಸಚಿವರು ಸಲಹೆ ನೀಡಿದರು.
ಸಭೆಯಲ್ಲಿ ಪಶುಸಂಗೋಪನೆ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಆಯುಕ್ತರಾದ ನಟೇಶ್, ನಿರ್ದೇಶಕರಾದಎಂ.ಟಿ. ಮಂಜುನಾಥ ಹಾಗೂ ಕರ್ನಾಟಕ ಪ್ರಾಣಿಕಲ್ಯಾಣ ಮಂಡಳಿಯ ಎಲ್ಲ ಸದಸ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ