ಗುಜರಾತ್ ಮಾದರಿಯಲ್ಲಿ ವಿದ್ಯುತ್ ಉತ್ಪಾದಿಸುವಂತೆ ಸಿಎಂ ಗೆ ಮನವಿ ಮಾಡಿದ ಅನಿರುದ್ಧ
Team Udayavani, Dec 31, 2020, 2:58 PM IST
ಬೆಂಗಳೂರು: ರಾಜ್ಯದಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಗುಜರಾತ್ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಮುಂದಾದ ಮಾದರಿಯಂತೆ ರಾಜ್ಯದಲ್ಲಿಯೂ ಸಹ ತೆರೆದ ಕಾಲುವೆಗಳನ್ನು ಮುಚ್ಚಬೇಕು ಎಂದು ಚಿತ್ರನಟ, ಜೊತೆಜೊತೆಯಲಿ ಖ್ಯಾತಿಯ ಅನಿರುದ್ಧ ಜತ್ಕರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಗುಜರಾತ್ ರಾಜ್ಯದಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಸೌರಫಲಕಗಳನ್ನು ಬಳಸಿ, ಎರಡೂ ಬದಿಯಲ್ಲಿ ಗೋಡೆಗಳನ್ನು ನಿರ್ಮಿಸಿ ವರ್ಟಿಕಲ್ ಗಾರ್ಡನಿಂಗ್ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿಯೂ ಸಹ ಅದೇ ಮಾದರಿಯಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚ್ಛಕ್ತಿ ಉತ್ಪಾದನೆಗೆ ಸೌರಫಲಕಗಳನ್ನು ಬಳಸಬಹುದು ಹಾಗೂ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು. ಬರಡುಭೂಮಿಯಲ್ಲಿ ತೆರೆದ ಕಾಲುವೆಗಳನ್ನು ಮುಚ್ಚಿ ಸೌರ ವಿದ್ಯುತ್ ಅಳವಡಿಸುವುದರಿಂದ ಬೆಳೆ ಬೆಳೆದು, ನೆಲ ಹಸನು ಮಾಡಬಹುದು ಎಂದು ಸಲಹೆ ನೀಡಿದ್ದಾರೆ.
ಹೀಗೆ ತೆರೆದ ಕಾಲುವೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರಿಂದ ಒಂದೆಡೆ ವಿದ್ಯುತ್ ಉತ್ಪಾದನೆ ಮತ್ತೊಂದೆಡೆ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗಲಿದೆ. ಸರ್ಕಾರ ಗುಜರಾತ್ ಮಾದರಿಯನ್ನು ಒಮ್ಮೆ ಅವಲೋಕಿಸಿ ನಮ್ಮ ರಾಜ್ಯದಲ್ಲಿಯೂ ಸಹ ಈ ಬಗ್ಗೆ ಚಿಂತನೆ ನಡೆಸಬೇಕೆಂದು ಸರ್ಕಾರಕ್ಕೆ ಅನಿರುದ್ಧ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ