ಅಣ್ಣಾಮಲೈ ರಾಜಕೀಯ ಪ್ರವೇಶ ಖಚಿತ


Team Udayavani, May 19, 2020, 6:45 AM IST

ಅಣ್ಣಾಮಲೈ ರಾಜಕೀಯ ಪ್ರವೇಶ ಖಚಿತ

ಉಡುಪಿ: ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ರಾಜಕೀಯ ಪ್ರವೇಶಿಸುವುದು ಖಚಿತವಾಗಿದೆ. 2021ರಲ್ಲಿ ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸಿ ಅಧಿಕಾರಿಗಳಿಗೆ ಜನರ ಸೇವೆಯನ್ನು ಮಾಡಲು ಉತ್ತಮ ವಾತಾವರಣ ಸೃಷ್ಟಿಸಬೇಕಾಗಿದೆ. “ಯಾವ ಪಕ್ಷ ಸೇರುತ್ತೇನೆ? ಯಾವ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ’ ಎನ್ನುವುದನ್ನು ಒಂದು ತಿಂಗಳಲ್ಲಿ ಪ್ರಕಟಿಸುವುದಾಗಿ “ಉದಯವಾಣಿ’ಗೆ ತಿಳಿಸಿದ್ದಾರೆ.

ಪೊರೆ ಕಳಚುವ ಹಾವುಗಳಂತೆ ಇರಬೇಕು
ಹಾವುಗಳು ಪೊರೆ ಕಳಚಿಕೊಂಡು ಹೊಸ ಪೊರೆಯನ್ನು ಸೃಷ್ಟಿಸಿಕೊಳ್ಳುತ್ತದೆ. ಇದು ಪ್ರಕೃತಿ ಧರ್ಮ. ನಾವೂ ಕೂಡ ಕೋವಿಡ್-19 ಅವಧಿಯಲ್ಲಿ ಮುಂದೆ ಯಾವ ದಾರಿಯಲ್ಲಿ ಸಾಗಬೇಕು ಎಂದು ನಿರ್ಧರಿಸಿ ಅದರತ್ತ ಹೆಜ್ಜೆ ಇಡಬೇಕು. ಇಂತಹ ಉತ್ತಮ ಸಂದರ್ಭ ಇನ್ನು ಸಿಗುವುದಿಲ್ಲ. 100 ವರ್ಷಗಳ ಹಿಂದೆ ಇಂತಹ ಸೋಂಕು ಜಗತ್ತಿನಾದ್ಯಂತ ಆವರಿಸಿತ್ತು. ಇನ್ನೂ ಆರು ತಿಂಗಳು ಇರಬಹುದು ಎನ್ನುತ್ತಾರೆ ಅಣ್ಣಾಮಲೈ.

ಮದ್ಯ ಸೇವನೆ ತಪ್ಪು
ಎಲ್ಲ ಸರಕಾರಗಳೂ ಕಳಪೆ ಹಣಕಾಸು ನೀತಿಯನ್ನು ಅನುಸರಿಸುತ್ತಿವೆ. ಕರ್ನಾಟಕದ ಬಜೆಟ್‌ ಗಾತ್ರ 2.48 ಲ.ಕೋ.ರೂ., 1.9 ಲ.ಕೋ.ರೂ. ಆದಾಯವಿದೆ. ಇದರ ಅಂತರವನ್ನು ಸಾಲ ಮಾಡಲಾಗುತ್ತದೆ. ಆಲ್ಕೋಹಾಲ್‌ (ಮದ್ಯ) ಸೇವನೆಯಿಂದ 21,000 ಕೋ.ರೂ. ಆದಾಯ ಬರುತ್ತಿದೆ. ತಮಿಳುನಾಡಿನಲ್ಲಿ 31,000 ಕೋ.ರೂ. ಆದಾಯ ಬರುತ್ತಿದೆ. ಇದು ಸರಿಯೋ? ತ‌ಪ್ಪೋ? ಎಂದು ಪ್ರಶ್ನಿಸಿದರೆ ನಾನು ತಪ್ಪು ಎನ್ನುತ್ತೇನೆ. ಇದರಿಂದ ಆಗುವ ಒಳಿತಿಗಿಂತ ಕೆಡುಕು ಹೆಚ್ಚಿರುವುದು ಇದಕ್ಕೆ ಕಾರಣ.

ವ್ಯವಸ್ಥೆ ಬದಲಾಗಲಿ
ನಾವೀಗ ಆದಾಯ ಬರುವ ಮಾರ್ಗವನ್ನು ಬದಲಾಯಿಸಬೇಕು. ಇದನ್ನೇ ಸಿಸ್ಟಮ್‌ ಬದಲಾಯಿಸುವುದು ಎನ್ನುತ್ತೇನೆ. ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮದ್ಯ ಮಾರಾಟದ ಪ್ರಮಾಣವನ್ನು ಹೆಚ್ಚಿಸಬೇಕೆಂದೇ ಸರಕಾರಗಳು ಹೇಳುತ್ತವೆ. ಈ ಗುರಿ ಹೆಚ್ಚಿಸದೆ ಇದ್ದರೆ ಸರಕಾರ ಅಂತಹ ಅಧಿಕಾರಿಯನ್ನು ಚೆನ್ನಾಗಿ ನೋಡಿಕೊಳ್ಳುವುದಿಲ್ಲ. ಇದು ಬದಲಾಗಬೇಕಾಗಿದೆ. ಇದು ಬದಲಾಗಬೇಕಾದರೆ ಉತ್ತಮ ಆಡಳಿತ ಬೇಕು. ರಾಜಕೀಯ ವ್ಯವಸ್ಥೆ ಬದಲಾಗಬೇಕು. ಇದನ್ನೆಲ್ಲ ದೃಷ್ಟಿಯಲ್ಲಿರಿಸಿಕೊಂಡು ಮುಂದಿನ ಐದು ಹತ್ತು ವರ್ಷಗಳಲ್ಲಿ ಬದಲಾವಣೆ ತರುವ “ವಿಶನ್‌ ಪ್ಲಾನ್‌’ ತಯಾರಿಸಬೇಕು ಎಂದು ಅಣ್ಣಾಮಲೈ ಅಭಿಪ್ರಾಯಪಟ್ಟರು.

ಮೆರಿಟ್‌ ಆಯ್ಕೆ ಅಗತ್ಯ
ಎಲ್ಲರೂ ಸರಕಾರಿ ಉದ್ಯೋಗವನ್ನು ನಿರೀಕ್ಷಿಸಿದರೆ ಆಗುವುದಿಲ್ಲ. ಕೇವಲ ಮೆರಿಟ್‌ ಮೇಲೆ ಆಯ್ಕೆ ಆಗುತ್ತಿದೆ ಎಂಬ ವಿಶ್ವಾಸ ಸಾರ್ವಜನಿಕರಲ್ಲಿ ಮೂಡಬೇಕು. ಕೇವಲ ಯುಪಿಎಸ್‌ಸಿ ಮಾತ್ರ ಶುದ್ಧ ಇದ್ದರೆ ಸಾಲದು, ಕೆಪಿಎಸ್‌ಸಿಯೂ ಶುದ್ಧ ಇರಬೇಕು. ಇದು ಚುನಾಯಿತ ಜನಪ್ರತಿನಿಧಿಗಳ ಪರಿಶ್ರಮದಿಂದಲೇ ಆಗಬೇಕು. ಅಧಿಕಾರ ಇರುವುದು ಪ್ರತಿಷ್ಠೆಗಾಗಿ ಅಲ್ಲ. ಹಾಗೆ ನೋಡಿದ್ದರೆ ಅದೇ ಖುರ್ಚಿಯಲ್ಲಿ ಕುಳಿತಿರುತ್ತಿದ್ದೆ ಎಂದು ಅಣ್ಣಾಮಲೈ ಹೇಳಿದ್ದಾರೆ.

ಪ್ಯಾಕೇಜ್‌ ಸದ್ಬಳಕೆ ಆಗಬೇಕು
ಈಗ ಕೇಂದ್ರ ಸರಕಾರ ಬೇರೆ ಬೇರೆ ಕ್ಷೇತ್ರಗಳಿಗೆ 20 ಲ.ಕೋ.ರೂ. ಪ್ಯಾಕೇಜ್‌ ಘೋಷಿಸಿದೆ. ಇದರಲ್ಲಿ ಕೃಷಿಯೂ ಒಂದು. ನಾವು ಇದನ್ನು ಬಳಕೆ ಮಾಡಬೇಕು. ಹಿಂದೆಂದೂ ಕಂಡಿರದಂತಹ ಆರ್ಥಿಕ ಮುಗ್ಗಟ್ಟು ಈಗ ಜಗತ್ತಿನಲ್ಲಿ ಕಂಡುಬಂದಿದೆ. ಸರಕಾರ ಈಗ ಆರ್ಥಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ಕೊಡಲೇಬೇಕು. ಈ ಘೋಷಣೆ ಕಾರ್ಯರೂಪಕ್ಕೆ ಬರಲು ಒಂದು ವರ್ಷವಾದರೂ ಬೇಕು. ಇದೆಲ್ಲ ನಿಂತಿರುವುದು ಬ್ಯಾಂಕುಗಳ ಕಾರ್ಯ ನಿರ್ವಹಣೆ ಮೇಲೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.