ಎಪಿಎಂಸಿ ಕಾಯ್ದೆ ಜಾರಿಗೆ ಅಸ್ತು
ಸ್ಥಳೀಯ ಮಾರುಕಟ್ಟೆ ಸಮಿತಿ ಅಧಿಕಾರ ಮೊಟಕು ಖಾಸಗಿಗೆ ರಹದಾರಿ
Team Udayavani, May 15, 2020, 5:55 AM IST
ಬೆಂಗಳೂರು: ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಅಧ್ಯಾದೇಶದ ಮೂಲಕ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸ್ಥಳೀಯ ಮಾರುಕಟ್ಟೆ ಸಮಿತಿಗಳ ಅಧಿಕಾರ ಮೊಟಕು, ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆಗಳ ಸ್ಥಾಪನೆ ಮತ್ತು ಖಾಸಗಿ ಕಂಪೆನಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಕೇಂದ್ರ ಸರಕಾರದ 2017 ಮಾದರಿ ಕೃಷಿ ಉತ್ಪನ್ನ ಮತ್ತು ಜೀವನೋಪಾಯ ಮಾರುಕಟ್ಟೆ ಕಾಯ್ದೆಯಡಿ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂ ತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಅಧ್ಯಾದೇಶ 2020ಕ್ಕೆ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಸಚಿವ ಜೆ.ಸಿ. ಮಾಧು ಸ್ವಾಮಿ, ಕೇಂದ್ರ ಸರಕಾರವು ಮಾದರಿ ಕಾಯ್ದೆ ಕಳುಹಿಸಿತ್ತು. ರಾಜ್ಯ ಸರಕಾರವು ರೈತರ ಹಿತಕ್ಕೆ ಮಾರಕವಾಗದಂತೆ ಮುನ್ನೆಚ್ಚ ರಿಕೆ ವಹಿಸಿ ಎರಡು ಅಂಶಗಳಿಗೆ ಮಾತ್ರ ತಿದ್ದುಪಡಿ ತಂದು ಅಧ್ಯಾ ದೇಶದ ಮೂಲಕ ಜಾರಿಗೆ ತೀರ್ಮಾನಿಸಿದೆ ಎಂದರು.
ಏನೇನು ತಿದ್ದುಪಡಿ?
ಸ್ಥಳೀಯ ಸಮಿತಿ ಅಧಿಕಾರ ಮೊಟಕು ಈ ಮೊದಲು ರೈತ ತನ್ನ ವ್ಯಾಪ್ತಿ ಬಿಟ್ಟು ಬೇರೆಡೆ ಉತ್ಪನ್ನ ಮಾರಾಟ ಮಾಡಿದರೆ ಚುನಾಯಿತ ಸಮಿತಿಗೆ ನಿಯಂತ್ರಿಸುವ ಅಧಿಕಾರ ಇತ್ತು. ಆದರೆ ಈಗ ಸಮಿತಿಯ ಅಧಿಕಾರ ಕೇವಲ ಮಾರುಕಟ್ಟೆ ಒಳಗೆ ಮಾತ್ರ. ಆದರೆ ರಾಜ್ಯ ಮಟ್ಟದ ನಿರ್ದೇಶಕ ಮಂಡಳಿಗೆ ಪೂರ್ಣ ಪ್ರಮಾಣದ ಅಧಿಕಾರ ಇರುತ್ತದೆ. ಇದು ಎಲ್ಲವನ್ನೂ ನಿಯಂತ್ರಣ ಮಾಡಬಹುದಾಗಿದೆ.
ಖಾಸಗಿ ಮಾರುಕಟ್ಟೆಗೆ ಅವಕಾಶ
ಖಾಸಗಿ ಮಾರುಕಟ್ಟೆಗಳ ಸ್ಥಾಪನೆ ಮತ್ತು ಖಾಸಗಿ ಸಂಸ್ಥೆಗಳ ಪ್ರವೇಶಕ್ಕೆ ತಿದ್ದುಪಡಿ ಅವಕಾಶ ಕಲ್ಪಿಸಿದೆ. ಆದರೆ ಖಾಸಗಿ ಕಂಪೆನಿ ಅಥವಾ ಖಾಸಗಿ ಮಾರುಕಟ್ಟೆ ಸ್ಥಾಪಿಸುವವರು ಸೂಕ್ತ ಬ್ಯಾಂಕ್ ಖಾತರಿ, ಠೇವಣಿ, ರಾಜ್ಯ ಮಟ್ಟದ ಸಮಿತಿಯ ಅನುಮತಿ ಪಡೆಯುವುದು ಅಗತ್ಯ. ತೂಕ ಮತ್ತು ಅಳತೆ ಮತ್ತಿತರ ವಿಚಾರ, ಬೆಲೆ ನಿಗದಿ, ಪಾವತಿ ಅಕ್ರಮವಾದರೆ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಸಮಿತಿಗೆ ಇರುತ್ತದೆ.
ರೈತರಿಗೆ ಏನು ಉಪಯೋಗ?
ಸರಕಾರದ ಪ್ರಕಾರ ರೈತ ತಾನು ಬೆಳೆದ ಉತ್ಪನ್ನವನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ಖಾಸಗಿ ಮಾರುಕಟ್ಟೆಯಲ್ಲಿ ಅಥವಾ ಬೇರೆ ಎಲ್ಲಾದರೂ ತನಗೆ ಬೇಕಾದ ಕಡೆ ಮಾರಬಹುದು. ಇದರಿಂದ ಆತನಿಗೆ ತನ್ನ ಬೆಳೆ ಅಥವಾ ಉತ್ಪನ್ನವನ್ನು ತಾನು ಬಯಸಿದವರಿಗೆ ಮಾರಾಟ ಮಾಡುವ ಅವಕಾಶ ಇರುತ್ತದೆ. ಖಾಸಗಿಯವರು ರೈತನ ಹೊಲಕ್ಕೆ ಹೋಗಿ ಖರೀದಿಸಬಹುದು.
ಮಾರಕ ಏನು?
ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವವರ ಪ್ರಕಾರ, ಖಾಸಗಿ ಕಂಪೆನಿಗಳು ಪ್ರವೇಶ ಮಾಡಿದರೆ ಪ್ರಾರಂಭದಲ್ಲಿ ರೈತರ ಉತ್ಪನ್ನಗಳಿಗೆ ಆಕರ್ಷಕ ಬೆಲೆಯ ರುಚಿ ತೋರಿಸಿ ಅನಂತರ ತಾವು ನಿಗದಿ ಪಡಿಸಿದ ಬೆಲೆಗೆ ಮಾರಾಟ ಮಾಡುವ ಅನಿವಾರ್ಯತೆ ಸೃಷ್ಟಿಸಬಹುದು. ರೈತರಿಗೆ ತೂಕ ಮತ್ತು ಅಳತೆ, ಹಣ ಪಾವತಿಯಲ್ಲಿ ಸಮಸ್ಯೆಯಾದರೆ ದೂರು ಕೊಡಲು ರಾಜ್ಯ ಸಮಿತಿಯತ್ತ ನೋಡಬೇಕು. ಇದರಿಂದ ರೈತರಿಗೆ ಭವಿಷ್ಯದಲ್ಲಿ ತೊಂದರೆ ಇದೆ. ಸ್ಥಳೀಯ ಬೀದಿ ಬದಿ ವ್ಯಾಪಾರ, ಸಣ್ಣ ಪುಟ್ಟ ಮಾರುಕಟ್ಟೆ ಮುಚ್ಚಬೇಕಾಗುತ್ತದೆ.
ಸಮಾಧಾನದ ಅಂಶ
ಸಮಾಧಾನಕರ ಅಂಶ ಎಂದರೆ ರಾಜ್ಯ ಮಟ್ಟದ ನಿರ್ದೇಶಕ ಮಂಡಳಿ ಸಮಿತಿಯ ಅಧಿಕಾರ ಮೊಟಕುಗೊಳಿಸಿಲ್ಲ. ಖಾಸಗಿ ಕಂಪೆನಿ, ಮಾರುಕಟ್ಟೆ ಸ್ಥಾಪನೆಗೆ ಅನುಮತಿ ಪಡೆಯುವುದು, ಮೋಸವಾದರೆ ಮಧ್ಯಪ್ರವೇಶ ಅಧಿಕಾರ, ಬ್ಯಾಂಕ್ ಖಾತರಿ, ಠೇವಣಿ ಕಡ್ಡಾಯ ಮಾಡಿರುವುದು ಸಮಾಧಾನಕರ. ಆದರೆ ರಾಜ್ಯ ಸಮಿತಿಯ ಅಧಿಕಾರ ಯಾವ ಪ್ರಮಾಣ ಎಷ್ಟು ವ್ಯಾಪ್ತಿ ಎಂಬುದು ನಿಯಮಾವಳಿ ರಚನೆಯಾದ ಅನಂತರವೇ ಸ್ಪಷ್ಟತೆ ಸಿಗಲಿದೆ.
ಕಾರ್ಮಿಕ ಕಾಯ್ದೆ ತಿದ್ದುಪಡಿ ಮುಂದೂಡಿಕೆ
ವಿವಾದದ ಸ್ವರೂಪ ಪಡೆದಿದ್ದ “ಕಾರ್ಮಿಕ ಕಾಯ್ದೆ’ ತಿದ್ದುಪಡಿ ಕುರಿತು ಗುರುವಾರದ ಸಂಪುಟ ಸಭೆಯಲ್ಲಿ ಚರ್ಚೆ ಆಯಿತಾದರೂ ವಿರೋಧ ವ್ಯಕ್ತವಾದ ಕಾರಣ ಮುಂದೂಡಲಾಯಿತು. ಸಾಧಕ-ಬಾಧಕ ಅಧ್ಯಯನ, ಕಾರ್ಮಿಕ ಸಂಘಟನೆಗಳ ಜತೆ ಸಮಾಲೋಚನೆಯ ಅನಂತರ ಆ ಬಗ್ಗೆ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ