ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಚಿವ ಅರವಿಂದ ಲಿಂಬಾವಳಿ ಸೂಚನೆ
Team Udayavani, May 24, 2021, 10:28 PM IST
ಬೆಂಗಳೂರು : ಕಟ್ಟಡ ಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕರಿಗೆ ಕೋವಿಡ್-19 ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್- 19 ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ನೋಡಲ್ ಅಧಿಕಾರಿಗಳು ಸೇರಿದಂತೆ ಇತರರೊಂದಿಗೆ ವರ್ಚುಯಲ್ ಮೂಲಕ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನನಿತ್ಯ ಕನಿಷ್ಠ 200 ಕೋವಿಡ್ ಪರೀಕ್ಷೆಗಳಂತೆ ಟೆಸ್ಟ್ ಪ್ರಮಾಣ ಹೆಚ್ಚಿಸಬೇಕು , ಇದರಿಂದ ಕೋವಿಡ್ ನಿಯಂತ್ರಿಸಬಹುದು ಎಂದು ಅವರು ಹೇಳಿದರು.
ಇದನ್ನೂ ಓದಿ :ಖ್ಯಾತ ನೃತ್ಯ ಕಲಾವಿದೆ ಬಿ. ಭಾನುಮತಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಈ ವೇಳೆ ಆವಲಹಳ್ಳಿ ಭಾಗದ ಪಿ ಎಚ್ ಸಿ ಯಲ್ಲಿ ಕೋವಿಡ್ ಲಸಿಕೆ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಬಗ್ಗೆ ವಿಚಾರಿಸಿದ ಅವರು ಎಲ್ಲರಿಗೂ ಲಸಿಕೆ ಸಿಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿನ ಕೋವಿಡ್ ಪಾಸಿಟಿವ್ ಕೇಸ್, ಗುಣಮುಖರಾದವರು, ಹೋಮ್ ಐಸೋಲೇಷನ್ ನಲ್ಲಿರುವವರ ಮಾಹಿತಿ ಪಡೆದರು.
ಹೋಮ್ ಐಸೋಲೇಷನ್ ನಲ್ಲಿ ಇರುವವರಿಗೆ ವಾರ್ ರೂಮ್ ಗಳ ಮೂಲಕ ನಿತ್ಯ ಎರಡು ಬಾರಿ ಕರೆ ಮಾಡಿ ಆರೋಗ್ಯ ವಿಚಾರಿಸಬೇಕು ಎಂದ ಅವರು
ಕೋವಿಡ್ ಪರೀಕ್ಷೆ ಮತ್ತು ಲಸಿಕೆಯನ್ನು ನೀಡುವುದಕ್ಕೆ ಪ್ರತ್ಯೇಕ ಸ್ಥಳ ನಿಗದಿ ಮಾಡಬೇಕು ಎಂದು ತಿಳಿಸಿದರು.
ಮಾಸ್ಕ್, ಸ್ಯಾನಿಟೈಸರ್, ಸುರಕ್ಷಿತ ಅಂತರ ಪಾಲಿಸುವ ಮೂಲಕ ಕೋವಿಡ್ ಕುರಿತು ಭಯ ಪಡೆದೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ಸೂಚಿಸಿದರು.
ವರ್ಚುಯಲ್ ಸಭೆಯಲ್ಲಿ ತಹಶೀಲ್ದಾರರಾದ ಶ್ರೀ ಅಜೀತ ರೈ, ತಾಲ್ಲೂಕು ಪಂಚಾಯತ ಇಒ ಶ್ರೀ ಮಂಜುನಾಥ, ಶ್ರೀ ಚಂದ್ರಶೇಖರ, ನೋಡಲ್ ಅಧಿಕಾರಿಗಳು, ವಾರ್ ರೂಮ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಸ್ವಯಂ ಸೇವಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್