ಕುರುವಂಶದ ರಾಜಧಾನಿಗಾಗಿ ಶೋಧ!

ಮಿಳುನಾಡಿನ ಆದಿಚಲ್ಲನೂರುಗಳಲ್ಲೂ ಮಹಾಭಾರತದ ಕುರುಹುವಿಗಾಗಿ ಹುಡುಕಾಟ ನಡೆಯಲಿದೆ.

Team Udayavani, Jul 21, 2021, 11:30 AM IST

ಕುರುವಂಶದ ರಾಜಧಾನಿಗಾಗಿ ಶೋಧ!

ಮೀರತ್‌: ಮಹಾಭಾರತ ಪುರಾಣವೋ, ಇತಿಹಾಸವೋ ಎಂಬ ಜಿಜ್ಞಾಸೆ ಇನ್ನೂ ಹಲವರಲ್ಲಿ ಇದೆ. ಈಗಾಗಲೇ ದ್ವಾರಕಾ ನಗರ ಇದೆ ಎಂಬುದಕ್ಕೆ ಪುಷ್ಟಿ ಸಿಕ್ಕಿದ್ದರೂ ಮಹಾಭಾರತ ನಡೆದೇ ಇಲ್ಲ ಎಂದು ವಾದಿಸುವವರೂ ಇದ್ದಾರೆ. ಹೀಗಾಗಿಯೇ ಮಹಾಭಾರತದಲ್ಲಿ ಕುರುವಂಶದ ರಾಜಧಾನಿಯಾಗಿದ್ದ ಹಸ್ತಿನಾವತಿ ಅಥವಾ ಹಸ್ತಿನಾಪುರದ ಶೋಧನೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಲಯ ಹೊರಟಿದೆ.

ಸುಮಾರು 70 ವರ್ಷಗಳ ನಂತರ ಪುರಾತತ್ವ ಸರ್ವೇಕ್ಷಾಲಯ ಇಂಥದ್ದೊಂದು ಕೆಲಸ ಕೈಗೆತ್ತಿಕೊಂಡಿದೆ. ಉತ್ತರ ಪ್ರದೇಶದ ಮೀರತ್‌ನಿಂದ 40 ಕಿ.ಮೀ. ದೂರದಲ್ಲಿರುವ ಪ್ರದೇಶದಲ್ಲಿ ಉತVನನ ವನ್ನುನಡೆಸಲಾಗುತ್ತದೆ.ಸದ್ಯ ಮುಂಗಾರು ಮಳೆಯಾಗುತ್ತಿರುವುದರಿಂದ ಉತ್ಖನನ ಕಷ್ಟಕರ. ಹೀಗಾಗಿ ಸೆಪ್ಟೆಂಬರ್‌ನಲ್ಲಿ ಈ ಕೆಲಸ ಕೈಗೆತ್ತಿಕೊಳ್ಳಲಿದ್ದೇವೆ ಎಂದು ಭಾರ ತೀಯ ಪುರಾತತ್ವ ಇಲಾಖೆ ಹೇಳಿದೆ.

ಹೊಸ ದಾಖಲೆಗಾಗಿ ಹುಡುಕಾಟ:
ಭಾರತೀಯ ಪುರಾತತ್ವ ಇಲಾಖೆ ಈಗಾಗಲೇ ಹಲವಾರು ಸ್ಥಳಗಳನ್ನು ಶೋಧನೆ ಮಾಡಿ ಮಹಾಭಾರತ ನಡೆದಿತ್ತು ಎಂಬು ದನ್ನು ಸಾಬೀತು ಮಾಡಲು ಯತ್ನಿಸಿದೆ. ಈಗ ಇದೇ ಪ್ರಯತ್ನಕ್ಕೆ ಪೂರಕವಾಗಿ ಹಸ್ತಿನಾಪುರದ ಹುಡುಕಾಟಕ್ಕೆ ಮುಂದಾಗಿದೆ. ಹಸ್ತಿನಾಪುರವೂ ಸೇರಿದಂತೆ ಐದು ಸ್ಥಳಗಳ ಶೋಧನೆಗಾಗಿ ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಇದರ ಮೊದಲ ಅಂಗವಾಗಿ ಹುಡುಕಾಟ ನಡೆಯಲಿದೆ. ಅಂದರೆ, 2022ರ ಬಜೆಟ್‌ನಲ್ಲಿಯೇ ಈ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು.

ಹಸ್ತಿನಾಪುರ ಬಿಟ್ಟರೆ ಹರ್ಯಾಣದ ರಾಖೀಘಡ, ಅಸ್ಸಾಂನ ಶಿವಸಾಗರ, ಗುಜರಾತ್‌ನ ಢೋಲವಿರಾ, ತಮಿಳುನಾಡಿನ ಆದಿಚಲ್ಲನೂರುಗಳಲ್ಲೂ ಮಹಾಭಾರತದ ಕುರುಹುವಿಗಾಗಿ ಹುಡುಕಾಟ ನಡೆಯಲಿದೆ.

1952ರಲ್ಲಿ ನಡೆದಿತ್ತು ಸಂಶೋಧನೆ:
ಅಯೋಧ್ಯೆಯಲ್ಲಿ12ಕಂಬಗಳ ದೇಗುಲ ಇತ್ತು ಎಂಬುದನ್ನು ಸಂಶೋಧನೆಯಿಂದ ದೃಢಪಡಿಸಿದ್ದ ಪ್ರಾಚ್ಯವಸ್ತು ಸಂಶೋಧಕ ಪ್ರೊ.ಬಿ.ಬಿ.ಲಾಲ್‌ ನೇತೃತ್ವದಲ್ಲಿ ಹಸ್ತಿ ನಾಪುರದ ಬಗ್ಗೆ 1952ರಲ್ಲಿ ಮೊದಲ ಬಾರಿಗೆ ಸಂಶೋಧನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಮಹಾಭಾರತದ ಕಾಲ ಕ್ರಿಸ್ತಪೂರ್ವ 900 ಎಂದು ಅಂದಾಜಿಸ ಲಾಗಿತ್ತು. 2006ರಲ್ಲಿ ಹಸ್ತಿನಾಪುರದಿಂದ 90ಕಿಮೀ ದೂರದಲ್ಲಿರುವ ಸಿನೌಲಿಯಲ್ಲಿ ಕೂಡ ಉತ್ಖನನ ನಡೆಸಲಾಗಿತ್ತು. 2018 ರಲ್ಲಿ ಅಲ್ಲಿ ಕಂಚಿನಿಂದ ನಿರ್ಮಿಸಲಾಗಿದ್ದ ಕುದುರೆಗಳಿರುವ ರಥ ಸಿಕ್ಕಿತ್ತು. ಮಹಾ ಭಾರತದಲ್ಲಿ ರಥ-ಕುದುರೆಗಳ ಪ್ರಸ್ತಾಪ ಹೆಚ್ಚಾಗಿ ಇದ್ದುದರಿಂದ ಅದು ಕೂಡ ಮಹಾಭಾರತದ ಕಾಲಕ್ಕೇ ಸೇರಿದ್ದಿರಬಹುದು ಎಂದು ಇತಿಹಾಸ ಪ್ರಾಧ್ಯಾಪಕ ಡಾ.ಕೆ.ಕೆ.ಶರ್ಮಾ ಪ್ರತಿಪಾದಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.