ಮುಂಗಾರು ಆಗಮನ: ರೈತರ ಮೊಗದಲ್ಲಿ ಮಂದಹಾಸ


Team Udayavani, Jun 10, 2023, 5:39 AM IST

rain

ಗುರುವಾರದಂದು ನೈಋತ್ಯ ಮಾರುತಗಳು ಕೇರಳ ಪ್ರವೇಶಿಸುವು ದರೊಂದಿಗೆ ದೇಶದಲ್ಲಿ ಮುಂಗಾರು ಋತು ಆರಂಭಗೊಂಡಿದೆ. ನೈಋತ್ಯ ಮಾರುತಗಳು ಈ ಬಾರಿ ಒಂದು ವಾರ ತಡವಾಗಿ ಕೇರಳವನ್ನು ಪ್ರವೇಶಿ ಸಿದ್ದು ಅಲ್ಲಿನ ಕರಾವಳಿ ಮತ್ತು ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮಾತ್ರವಲ್ಲದೆ ಖಾಸಗಿ ಹವಾಮಾನ ಸಂಸ್ಥೆಗಳು ಕೂಡ ಪ್ರಸಕ್ತ ಸಾಲಿನಲ್ಲಿ ಮುಂಗಾರು ಕೊಂಚ ವಿಳಂಬವಾಗಲಿದೆ ಎಂದು ಮುನ್ಸೂಚನೆ ನೀಡಿದ್ದವು. ಆದರೆ ಅರಬಿ ಸಮುದ್ರದಲ್ಲಿ ನೈಋತ್ಯ ಮಾರುತಗಳ ಚಲನೆಗೆ ಪೂರಕ ವಾತಾವರಣ ನಿರ್ಮಾಣಗೊಳ್ಳದೇ ಮತ್ತಷ್ಟು ವಿಳಂಬವಾಗಿತ್ತು. ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್‌ ಚಂಡಮಾರುತದ ಪರಿಣಾಮ ನೈಋತ್ಯ ಮಾರುತಗಳು ತೀವ್ರತೆಯನ್ನು ಕಂಡುಕೊಂಡು ಗುರುವಾರ ಕೇರಳದ ಕರಾವಳಿಯನ್ನು ಪ್ರವೇಶಿಸಿದ್ದು ಕರಾವಳಿ ಜಿಲ್ಲೆಗಳು ಮತ್ತು ಒಳನಾಡಿನ ಕೆಲವೆಡೆ ಭಾರೀ ಮಳೆ ಸುರಿಯಲಾರಂಭಿಸಿದೆ.

ನೈಋತ್ಯ ಮಾರುತಗಳು ರಾಜ್ಯದ ಕರಾವಳಿಯನ್ನು ಪ್ರವೇಶಿಸುತ್ತಿದ್ದಂತೆ ಮುಂಗಾರು ಮಾರುತಗಳು ರಾಜ್ಯದೆಲ್ಲೆಡೆ ವ್ಯಾಪಿಸಿ ಮಳೆ ಸುರಿಸಲಿದೆ. ಅನಂತರದ ದಿನಗಳಲ್ಲಿ ಮುಂಗಾರು ಮಾರುತಗಳ ಚಲನೆಯ ತೀವ್ರತೆ ಯನ್ನು ಅವಲಂಬಿಸಿ ಹಂತಹಂತವಾಗಿ ರಾಜ್ಯ, ದೇಶದೆಲ್ಲೆಡೆ ವ್ಯಾಪಿಸಲಿದೆ.

ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್‌ ಚಂಡ ಮಾರುತ ನೈಋತ್ಯ ಮಾರುತಗಳ ಚಲನೆಗೆ ತಡೆಯಾಗಲಿದೆ ಎಂಬ ಆತಂಕ ಆರಂಭದಲ್ಲಿ ವ್ಯಕ್ತವಾಗಿತ್ತಾದರೂ ಇದೀಗ ಮುಂಗಾರು ಮಾರುತಗಳು ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿ ಮಳೆ ಸುರಿಸತೊಡಗಿರುವುದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಅಷ್ಟು ಮಾತ್ರವಲ್ಲದೆ ಇದರಿಂದಾಗಿ ಕರ್ನಾಟಕ ಸಹಿತ ದೇಶದೆಲ್ಲೆಡೆ ನೀರಿಗಾಗಿ ಎದ್ದಿದ್ದ ಹಾಹಾಕಾರ ಮುಂಬರುವ ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ. ಮಳೆಗಾಗಿ ಕಾತರದಿಂದ ಆಗಸದತ್ತ ದೃಷ್ಟಿ ನೆಟ್ಟಿದ್ದ ಜನರು ಅದರಲ್ಲೂ ಮುಖ್ಯವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಮುಂಗಾರು ಆಗಮನದ ಬೆನ್ನಲ್ಲೇ ಕೃಷಿ ಚಟುವಟಿಕೆಗಳು ಬಿರುಸು ಪಡೆಯಲಿವೆ. ಕೃಷಿ, ತೋಟಗಾರಿಕೆ ಇಲಾಖೆಯೂ ರೈತರಿಗೆ ಅಗತ್ಯವಿರುವ ಗುಣಮಟ್ಟದ ಬಿತ್ತನೆ ಬೀಜ, ಕೃಷಿ ಸಾಧನ, ಸಲಕರಣೆಗಳು, ರಸಗೊಬ್ಬರ ಪೂರೈಕೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿವೆ. ದೇಶದಲ್ಲಿರುವ ಒಟ್ಟಾರೆ ಕೃಷಿ ಪ್ರದೇಶದಲ್ಲಿ ಶೇ. 52ರಷ್ಟು ಭಾಗವು ಮಳೆಯನ್ನೇ ಅವಲಂಬಿಸಿಕೊಂಡಿದೆ. ಅಷ್ಟು ಮಾತ್ರವಲ್ಲದೆ ದೇಶದ ಒಟ್ಟಾರೆ ಕೃಷಿ ಉತ್ಪಾದನೆಯಲ್ಲಿ ಸುಮಾರು ಶೇ. 40ರಷ್ಟನ್ನು ಮಳೆಯಾಶ್ರಿತ ಕೃಷಿಯಿಂದಲೇ ಉತ್ಪಾದಿಸಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ಜಲಮೂಲಗಳ ಮರುಪೂರಣ ಮತ್ತು ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಿಸಲು ಉತ್ತಮ ಮಳೆ ಸುರಿಯುವುದು ಅತ್ಯವಶ್ಯಕವಾಗಿದೆ.

ಕುಡಿಯುವ ನೀರು, ಜಲ ವಿದ್ಯುದಾಗಾರಗಳಿಗೆ ಅವಶ್ಯವಿರುವ ನೀರಿಗೂ ಮಳೆಯೇ ಆಧಾರವಾಗಿದೆ. ದೇಶದಲ್ಲಿ ಆಹಾರ ಭದ್ರತೆ ಮತ್ತು ಆರ್ಥಿಕತೆಗೆ ಮಳೆ ನಿರ್ಣಾಯಕ ಕೊಡುಗೆಯನ್ನು ನೀಡುತ್ತದೆ. ಈ ಬಾರಿ ದೇಶದಲ್ಲಿ ವಾಡಿಕೆಯಷ್ಟು ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದು ರೈತರು ಅತ್ಯುತ್ಸಾಹದಿಂದಲೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸನ್ನದ್ಧರಾಗಿದ್ದಾರೆ. ಪ್ರಸಕ್ತ ವರ್ಷದ ಮುಂಗಾರು ಋತು, ಭೂಮಿ ಹಚ್ಚಹಸುರಿನಿಂದ ನಳನಳಿಸುವಂತೆ ಮಾಡಿ, ರೈತರ ಬದುಕನ್ನು ಹಸನಾಗಿಸಲಿ.

ಟಾಪ್ ನ್ಯೂಸ್

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್‌ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್

army

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WORLD CUP IN INDIA

Cricket: ಕ್ರಿಕೆಟ್‌ ವಿಶ್ವಕಪ್‌ ಗೆದ್ದು ಬರಲಿ ಭಾರತ

Caste census ಹಲವು ವಾದಗಳ ತೆರೆದಿಟ್ಟ ಬಿಹಾರ ಜಾತಿಗಣತಿ

Caste census ಹೊಸ ಚರ್ಚೆಗೆ ವೇದಿಕೆ ತೆರೆದಿಟ್ಟ ಬಿಹಾರ ಜಾತಿಗಣತಿ

MANIPUR ARMY

Manipur ಗಲಭೆ: ವಿದೇಶಿ ಉಗ್ರರ ಕೈವಾಡ ಆತಂಕಕಾರಿ ಬೆಳವಣಿಗೆ

sammati sex

18+: ಸಮ್ಮತಿ ವಯಸ್ಸು ಇಳಿಕೆ ಮಾಡದಿರುವ ನಿಲುವು ಸ್ವಾಗತಾರ್ಹ

ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

Green revolution ಆಹಾರ ಭದ್ರತೆಯ ಹರಿಕಾರ ಸ್ವಾಮಿನಾಥನ್‌ ಚಿರಸ್ಥಾಯಿ

MUST WATCH

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

ಹೊಸ ಸೇರ್ಪಡೆ

1-sadsad

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

arrested

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

1-asddas

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

Gaming App Case:ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಗೆ ಜಾರಿ ನಿರ್ದೇಶನಾಲಯದ ಸಮನ್ಸ್‌ ಜಾರಿ

1-dsadas

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.