ಬಿಎಸ್ವೈಗೆ ಶಾಸಕರ ಸಾಥ್ : 53 ಶಾಸಕರ ಅಭಿಮತ ಸಂಗ್ರಹಿಸಿದ ಅರುಣ್ ಸಿಂಗ್
Team Udayavani, Jun 18, 2021, 7:35 AM IST
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಮ್ಮ ಭೇಟಿಯ ದ್ವಿತೀಯ ದಿನ ಶಾಸಕರು ಮತ್ತು ಸಚಿವರ ಅಭಿಪ್ರಾಯ ಸಂಗ್ರಹ ನಡೆಸಿದ್ದು, ಬಹುತೇಕ ಶಾಸಕರು ಸಿಎಂ ಯಡಿಯೂರಪ್ಪ ಪರ ನಿಂತಿದ್ದಾರೆ. ಇಬ್ಬರು ಮಾತ್ರ ಬಿಎಸ್ವೈ ನಾಯಕತ್ವಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಸಿಎಂ ಪರ ಮತ್ತು ವಿರುದ್ಧ ಬಹಿರಂಗ ಹೇಳಿಕೆಗಳು ಕೂಡ “ಸ್ಫೋಟ’ ಗೊಂಡಿದ್ದು, ಪರಿಸ್ಥಿತಿ ಇನ್ನಷ್ಟು ಗೋಜಲಾಗಿದೆ.
ಅರುಣ್ ಸಿಂಗ್ ಒಟ್ಟು 53 ಶಾಸಕರು, ಸಚಿವರ “ಮುಖಾ ಮುಖೀ’ ಅಭಿಪ್ರಾಯ ಸಂಗ್ರಹದ ಸಂದರ್ಭದಲ್ಲಿ 15 ಮಂದಿ ತಟಸ್ಥರಾಗಿದ್ದರೆ, 36 ಮಂದಿ ಸಿಎಂ ಪರ ಇದ್ದರು ಎಂದು ಮೂಲಗಳು ತಿಳಿಸಿವೆ. ತಾವು ಸ್ಪಷ್ಟ ಸೂಚನೆ ನೀಡಿದ್ದರೂ ಬಹಿರಂಗ ಹೇಳಿಕೆ ಮುಂದುವರಿಸಿದ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅರುಣ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ.
ಈ ಮಧ್ಯೆ ಸಿಎಂ ಸ್ಥಾನಾಕಾಂಕ್ಷಿ ಎನ್ನಲಾದ ಪಂಚಮ ಸಾಲಿ ಸಮುದಾಯದ ಅರವಿಂದ ಬೆಲ್ಲದ ಅವರು “ಫೋನ್ ಕದ್ದಾಲಿಕೆ’ ಬಾಂಬ್ ಸ್ಫೋಟಿಸುವ ಮೂಲಕ ಸರಕಾರದ ವಿರುದ್ಧ ನೇರ ದಾಳಿ ನಡೆಸಿದರು.
ಒಂದೆಡೆ ಶಾಸಕರು, ಸಚಿವರು ಅರುಣ್ ಸಿಂಗ್ ಬಳಿ ಅಭಿಪ್ರಾಯಗಳನ್ನು ತಿಳಿಸುತ್ತಿದ್ದರೆ, ಇನ್ನೊಂದೆಡೆ ಬೆಲ್ಲದ ಅವರ ಹೇಳಿಕೆ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಟೀಕಾಸ್ತ್ರ “ಎಲ್ಲವೂ ಸರಿಯಾಗಿಲ್ಲ’ ಎಂಬ ಸಂದೇಶವನ್ನು ರವಾನಿಸಿತು.
ಬಿಎಸ್ವೈ ಪರ ಶಾಸಕರು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ನಿವಾಸದಲ್ಲಿ ಗುರುವಾರ ಬೆಳಗಿನ ಉಪಾಹಾರಕ್ಕಾಗಿ ಸೇರಿ ಚರ್ಚೆ ನಡೆಸಿದರು. ಬಳಿಕ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರ ಮಾರ್ಗದರ್ಶನದಂತೆ ಪಕ್ಷದ ಕಚೇರಿಯ ವರೆಗೆ ತಂಡವಾಗಿಯೇ ತೆರಳಿದರು. ಅರುಣ್ ಸಿಂಗ್ ಎದುರು ಸಿಎಂ ಪರ ವಕಾಲತ್ತು ವಹಿಸಿದ್ದಲ್ಲದೆ ಭಿನ್ನರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು ಎಂದು ತಿಳಿದು ಬಂದಿದೆ.
ಯಡಿಯೂರಪ್ಪ ಪರ ಶಾಸಕರು?
ಪಕ್ಷದ ಕಚೇರಿಯಲ್ಲಿ ಅರುಣ್ ಸಿಂಗ್ ಗುರುವಾರ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ನಿರಂತರವಾಗಿ ಶಾಸಕರಿಂದ ಅಭಿಪ್ರಾಯ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…