ಸತತ 4 ವರ್ಷಗಳಿಂದ ಡ್ರಗ್‌ ಸೇವನೆ; ಕೋರ್ಟ್‌ನಲ್ಲಿ ಎನ್‌ಸಿಬಿ ಉಲ್ಲೇಖ

ನಟ ಸಲ್ಮಾನ್‌ ಖಾನ್‌ ಅವರು ರವಿವಾರ ರಾತ್ರಿಯೇ ಶಾರುಖ್‌ ಮನೆಗೆ ಭೇಟಿ ಮಾತುಕತೆ ನಡೆಸಿದ್ದರು.

Team Udayavani, Oct 5, 2021, 10:29 AM IST

ಸತತ 4 ವರ್ಷಗಳಿಂದ ಡ್ರಗ್‌ ಸೇವನೆ; ಕೋರ್ಟ್‌ನಲ್ಲಿ ಎನ್‌ಸಿಬಿ ಉಲ್ಲೇಖ

ಹೊಸದಿಲ್ಲಿ: ಡ್ರಗ್ಸ್‌ ಜಾಲದಲ್ಲಿ ಬಂಧಿತನಾಗಿರುವ ಆರ್ಯನ್‌ ಖಾನ್‌ ಸತತ 4 ವರ್ಷ ಗಳಿಂದ ಡ್ರಗ್‌ ಸೇವಿಸುತ್ತಿದ್ದ ಎಂಬ ವಿಚಾರವನ್ನು ಎನ್‌ ಸಿಬಿ ಬಹಿರಂಗಪಡಿಸಿದೆ. ರವಿವಾರ ವಿಚಾರಣೆ ವೇಳೆ ಸ್ವತಃ ಆರ್ಯನ್‌ ಈ ವಿಚಾರವನ್ನು ಬಾಯಿ ಬಿಟ್ಟಿದ್ದಾನೆ. ತಾನು ದೀರ್ಘಾವಧಿಯಿಂದ ಡ್ರಗ್‌ ಸೇವಿಸುತ್ತಿದ್ದೆ.

ಇದನ್ನೂ ಓದಿ:ಪೆಂಡೋರಾ ತನಿಖಾ ವರದಿ:ಅನಿಲ್‌ ಹೆಸರಲ್ಲಿ 9,600 ಕೋ.ರೂ. ಆಸ್ತಿ, ತೆಂಡೂಲ್ಕರ್‌ ಗೌಪ್ಯ ಕಂಪೆನಿ

ಯುಕೆ, ದುಬಾೖ ಸೇರಿ ಬೇರೆ ದೇಶಗಳಲ್ಲಿ ವಾಸವಾಗಿದ್ದಾಗಲೂ ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದೆ ಎಂದು ಆರ್ಯನ್‌ ಹೇಳಿದ್ದಾನೆ. ವಿಚಾರಣೆ ವೇಳೆ ಆತ ಒಂದೇ ಸಮನೆ ಅಳುತ್ತಿದ್ದ. ಬಳಿಕ ತಂದೆ ಶಾರುಖ್‌ ಖಾನ್‌ ರೊಂದಿಗೆ 2 ನಿಮಿಷ  ಮಾತನಾಡಲು ಅವಕಾಶ ಕಲ್ಪಿಸ ಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಿಟ್‌ ಕಾಯಿನ್‌, ಡಾರ್ಕ್‌ ನೆಟ್‌ ನಂಟು?:
ಆರ್ಯನ್‌ ಪ್ರಕರಣದೊಂದಿಗೆ ನಂಟು ಹೊಂದಿರುವ ಡ್ರಗ್‌ ಪೆಡ್ಲರ್‌ ವೊಬ್ಬನನ್ನು ಎನ್‌ ಸಿಬಿ ಸೋಮವಾರ ಸಂಜೆ ವಶಕ್ಕೆ ಪಡೆದಿದೆ. ಆತನಿಂದ ಎಂಡಿ, ಎಂಡಿ ಎಂಎ ಮಾತ್ರೆಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಈತ ಡಾರ್ಕ್‌ ನೆಟ್‌ ಮೂಲಕ ಇತರರಿಗೆ ಡ್ರಗ್‌ ಪೂರೈಕೆ ಮಾಡುತ್ತಿದ್ದ ಹಾಗೂ ಬಿಟ್‌ ಕಾಯಿನ್‌ ಮೂಲಕ ಹಣ ಪಡೆಯುತ್ತಿದ್ದ ಎಂಬ ಮಾಹಿತಿಯೂ ಲಭ್ಯವಾಗಿದೆ.

ಮ್ಯಾರಥಾನ್‌ ವಿಚಾರಣೆ: ಸೋಮವಾರ ಆರ್ಯನ್‌ ನನ್ನು ತನ್ನ ವಶದಲ್ಲಿ ಮುಂದುವರಿಸಲು ಮುಂಬಯಿ ಕೋರ್ಟ್‌ನಲ್ಲಿ ಎನ್‌ಸಿಬಿ ಹಲವಾರು ರೀತಿಯ ವಾದಗಳನ್ನು ಮಂಡಿಸಿ ಯಶಸ್ವಿಯಾಗಿದೆ. ಎನ್‌ಸಿಬಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅನಿಲ್‌ ಸಿಂಗ್‌, “ಆರ್ಯನ್‌ ಫೋನ್‌ ನಲ್ಲಿ, ವಾಟ್ಸ್‌ ಆ್ಯಪ್‌ ಚಾಟ್‌ ನಲ್ಲಿ ಹಲವು ಆಘಾತಕಾರಿ ಅಂಶಗಳು ಕಂಡು ಬಂದಿವೆ. ಡ್ರಗ್ಸ್‌ಗಾಗಿ ಹಣ ನೀಡಿರುವ ಬಗ್ಗೆ ಉಲ್ಲೇಖವಾಗಿದೆ’ ಎಂದರು.

ಶಾರುಖ್‌ಗೆ ಬೆಂಬಲ
ಶಾರುಖ್‌ರ ಈ ಕಷ್ಟಕಾಲದಲ್ಲಿ ಅವರ ಅಭಿಮಾನಿಗಳು ಟ್ವಿಟರ್‌ನಲ್ಲಿ #WeStand WithSRK ಎಂಬ ಅಭಿಯಾನದ ಮೂಲಕ ನೈತಿಕ ಬೆಂಬಲ ನೀಡಲಾರಂಭಿಸಿದ್ದಾರೆ. ಒಬ್ಬ ಅಭಿಮಾನಿ, “ನಿಮ್ಮ ಘನತೆ ಮಣ್ಣುಪಾಲು ಮಾಡಲು ಯಾರೆಷ್ಟೇ ಪ್ರಯತ್ನಿಸಿದರೂ ಆ ಎಲ್ಲ ಪ್ರಯತ್ನಗಳು ನೀವು ಏರಿದ ಎತ್ತರಕ್ಕಿಂತ ಕಡಿಮೆಯೇ ಆಗಿರುತ್ತವೆ’ ಎಂದಿದ್ದಾರೆ. ಇಂಥ ಅನೇಕ ಟ್ವೀಟ್‌ಗಳು ಈ ಅಭಿಯಾ ನದಡಿ ಮೂಡಿಬಂದಿವೆ. ಪೂಜಾ ಭಟ್‌, ಸುಚಿತ್ರಾ ಕೃಷ್ಣ ಮೂರ್ತಿ, ಹನ್ಸಲ್‌ ಮೆಹ್ತಾ ಸೇರಿ  ಬಾಲಿವುಡ್‌ ಗಣ್ಯರೂ ಶಾರುಖ್‌ಗೆ ಬೆಂಬಲ ಸೂಚಿಸಿದ್ದಾರೆ. ನಟ ಸಲ್ಮಾನ್‌ ಖಾನ್‌ ಅವರು ರವಿವಾರ ರಾತ್ರಿಯೇ ಶಾರುಖ್‌ ಮನೆಗೆ ಭೇಟಿ ಮಾತುಕತೆ ನಡೆಸಿದ್ದರು.

ನಾನು ಯಾವುದೇ ಡ್ರಗ್‌ನ ಫ್ಯಾನ್‌ ಅಲ್ಲ. ಆದರೆ ಆರ್ಯನ್‌ ಖಾನ್‌ ಬಂಧನ ಹಿನ್ನೆಲೆ ಅವನ ಅಪ್ಪ ಶಾರುಖ್‌ ಖಾನ್‌ ರನ್ನು ಹೀಗಳೆಯುತ್ತಿರುವ ವಿಘ್ನ ಸಂತೋಷಿಗಳನ್ನು ನೋಡಿ ಅಚ್ಚರಿಯಾಗುತ್ತಿದೆ. ಜನರೇ, ಸ್ವಲ್ಪವಾದರೂ ಸಹಾನುಭೂತಿ ಇರಲಿ.
● ಶಶಿ ತರೂರ್‌, ಕಾಂಗ್ರೆಸ್‌ ಸಂಸದ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.