ಕೇಂದ್ರ ಸಚಿವ ತೇಲಿ ಹಾಜರಿದ್ದ ಕಾರ್ಯಕ್ರಮದ ವೇಳೆ ನೀಲಿ ಚಿತ್ರ ಪ್ರಸಾರ; ಅಧಿಕಾರಿಗಳು ಕಂಗಾಲು
ಕೆಲವು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದು, ತನಿಖೆ ಮುಂದುವರಿದಿರುವುದಾಗಿ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.
Team Udayavani, May 3, 2022, 12:54 PM IST
ದೀಬ್ರುಗಢ್:ಪ್ರಮುಖ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ಕಂಪನಿ ಅಸ್ಸಾಂನ ಟಿನ್ಸುಕಿಯಾದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಈ ಸಂದರ್ಭದಲ್ಲಿ ವೇದಿಕೆ ಹಿಂಬದಿಯ ಸ್ಕ್ರೀನ್ ನಲ್ಲಿ ಪೋರ್ನ್ ವಿಡಿಯೋ ತುಣುಕು ಪ್ರಸಾರವಾದ ಪರಿಣಾಮ ಕೇಂದ್ರ ಸಚಿವ ರಾಮೇಶ್ವರ್ ತೇಲಿ, ಸಚಿವ ಸಂಜಯ್ ಕಿಸಾನ್ ಹಾಗೂ ಇಂಡಿಯನ್ ಆಯಿಲ್ ಕಂಪನಿಯ ಹಿರಿಯ ಅಧಿಕಾರಿಗಳು ಮುಜುಗರಕ್ಕೊಳಗಾದ ಘಟನೆ ನಡೆದಿತ್ತು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿದ್ದು, ತನಿಖೆ ಮುಂದುವರಿದಿರುವುದಾಗಿ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.
ಏನಿದು ಘಟನೆ:
ಇಂಡಿಯನ್ ಆಯಿಲ್ ಟಿನ್ಸುಕಿಯಾದಲ್ಲಿ ಆಯೋಜಿಸಿದ್ದ ಮೆಥನಾಲ್ ಸಂಯೋಜನೆಯ ಎಂ-15 ಪೆಟ್ರೋಲ್ ನ ಪ್ರಾಯೋಗಿಕ ಬಳಕೆಯ ಕಾರ್ಯಕ್ರಮದ ವೇಳೆ ಈ ಅಚಾತುರ್ಯ ನಡೆದಿದೆ ಎಂದು ವರದಿ ತಿಳಿಸಿದೆ.
ಕೇಂದ್ರ ಸಚಿವ ರಾಮೇಶ್ವರ್ ತೇಲಿ ಅವರು ಎಂ-15 ಪೆಟ್ರೋಲ್ ಪ್ರಾಯೋಗಿಕ ಬಳಕೆಯನ್ನು ಉದ್ಘಾಟಿಸಿದ್ದರು. ಈ ಸಂದರ್ಭದಲ್ಲಿ ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಸರಸ್ವತ್, ಅಸ್ಸಾಂ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಅಧ್ಯಕ್ಷ ಬಿಕುಲ್ ಡೇಕಾ ಹಾಗೂ ತೈಲ ಕಂಪನಿಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ನಗರದ ಹೋಟೆಲ್ ವೊಂದರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೂಲಗಳ ಪ್ರಕಾರ ಇಂಡಿಯನ್ ಆಯಿಲ್ ಅಧಿಕಾರಿಯೊಬ್ಬರು ಭಾಷಣ ಮಾಡುತ್ತಿದ್ದ ವೇಳೆ, ವೇದಿಕೆಯ ಹಿಂಭಾಗದಲ್ಲಿದ್ದ ಸ್ಕ್ರೀನ್ ನಲ್ಲಿ ಇದ್ದಕ್ಕಿದ್ದಂತೆ ನೀಲಿ ಚಿತ್ರದ ತುಣುಕು ಪ್ರಸಾರವಾಗಿತ್ತು. ಆಪರೇಟರ್ ಗಮನಕ್ಕೆ ಬಂದ ಕೂಡಲೇ ಪ್ರಸಾರ ಸ್ಥಗಿತಗೊಳಿಸುವ ಮುನ್ನ 3-4 ಸೆಕೆಂಡ್ಸ್ ಗಳ ತುಣುಕು ಪ್ರಸಾರವಾಗಿ ಗಣ್ಯರು ಹಾಗೂ ಆಹ್ವಾನಿತರು ಮುಜುಗರಕ್ಕೊಳಗಾಗಿರುವ ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.
ಸಚಿವ ತೇಲಿ ಆಕ್ರೋಶ:
ಇಂಡಿಯನ್ ಆಯಿಲ್ ಅಧಿಕಾರಿ ಮಾತನಾಡುವ ವೇಳೆ ನಾನು ಅವರ ಭಾಷಣವನ್ನು ಆಲಿಸುತ್ತಿದ್ದೆ. ನನಗೆ ಹಿಂಬದಿಯ ಸ್ಕ್ರೀನ್ ನಲ್ಲಿ ಏನು ಪ್ರಸಾರವಾಗಿತ್ತು ಎಂಬ ಬಗ್ಗೆ ತಿಳಿಯಲಿಲ್ಲ. ಆದರೆ ನಂತರ ನನ್ನ ಕಾರ್ಯದರ್ಶಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂಡಾ ಹಾಜರಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಕೇಂದ್ರ ಸಚಿವ ರಾಮೇಶ್ವರ ತೇಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ