Assam:ಕೊನೆಯುಸಿರೆಳೆದಿದೆ ಎಂದು ಘೋಷಿಸಿದ ವೈದ್ಯ…ಅಂತ್ಯ ಸಂಸ್ಕಾರದ ವೇಳೆ ಮಗು ಜೀವಂತ!
ಶವವನ್ನು ಪ್ಯಾಕ್ ಮಾಡಿ ಕೊಟ್ಟಿದ್ದು, ನಂತರ ನಾವು ಶವ ಸಂಸ್ಕಾರ ಮಾಡಲು ಸ್ಮಶಾನಕ್ಕೆ ತೆರಳಿದ್ದೇವು
Team Udayavani, Oct 5, 2023, 10:34 AM IST
ಸಿಲ್ಚಾರ್(ಅಸ್ಸಾಂ): ಅಸ್ಸಾಂನ ಸಿಲ್ಚಾರ್ ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ್ದ ನವಜಾತ ಶಿಶು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು. ಆದರೆ ಪವಾಡ ಎಂಬಂತೆ ನವಜಾತ ಶಿಶುವಿನ ಅಂತ್ಯಕ್ರಿಯೆ ನಡೆಸುವ ಕೆಲವೇ ಕ್ಷಣದ ಮೊದಲು ಮಗು ಜೀವಂತವಾಗಿರುವ ಘಟನೆ ನಡೆದಿದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Kadaba: ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ; ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು
ಏನಿದು ಘಟನೆ:
ನವಜಾತ ಶಿಶುವಿನ ತಂದೆ ರತನ್ ದಾಸ್ ಅವರ ಹೇಳಿಕೆ ಪ್ರಕಾರ, ಆರು ತಿಂಗಳ ಗರ್ಭಿಣಿ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆ ತಂದಿದ್ದರು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಇದು ತುಂಬಾ ಜಟಿಲ ಸಮಸ್ಯೆಯಾಗಿದ್ದು, ನಮಗೆ ಒಂದೋ ತಾಯಿಯನ್ನು ಇಲ್ಲವೇ ಮಗುವನ್ನು ಮಾತ್ರ ಬದುಕಿಸಲು ಸಾಧ್ಯ ಎಂದು ತಿಳಿಸಿದ್ದರು.
ಅದರಂತೆ ನಾವು ವೈದ್ಯರಿಗೆ ಅನುಮತಿ ನೀಡಿದ್ದು, ಡೆಲಿವರಿ ಮಾಡಿದ್ದು, ನಿಮ್ಮ ಪತ್ನಿ ಅವಧಿ ಪೂರ್ವ ಮಗುವಿಗೆ ಜನ್ಮ ನೀಡಿದ್ದು, ಮಗು ಕೊನೆಯುಸಿರೆಳೆದಿರುವುದಾಗಿ ಹೇಳಿ, ಬುಧವಾರ ಬೆಳಗ್ಗೆ ನವಜಾತ ಶಿಶುವಿನ ಶವವನ್ನು ಒಪ್ಪಿಸಿದ್ದರು ಎಂದು ದಾಸ್ ತಿಳಿಸಿದ್ದಾರೆ.
ಮಗುವಿನ ಶವವನ್ನು ಪ್ಯಾಕ್ ಮಾಡಿ ಕೊಟ್ಟಿದ್ದು, ನಂತರ ನಾವು ಶವ ಸಂಸ್ಕಾರ ಮಾಡಲು ಸ್ಮಶಾನಕ್ಕೆ ತೆರಳಿದ್ದೇವು. ನಾವು ಸಿಲ್ಚಾರ್ ನ ಸ್ಮಶಾನಕ್ಕೆ ಹೋಗಿ ಅಂತಿಮ ವಿಧಿವಿಧಾನ ನಡೆಸಲು ಪ್ಯಾಕ್ ಅನ್ನು ತೆರೆದಾಗ…ನನ್ನ ಮಗು ಅಳಲು ಪ್ರಾರಂಭಿಸಿತ್ತು. ಕೂಡಲೇ ಮಗುವನ್ನು ಆಸ್ಪತ್ರೆಗೆ ತಂದು ದಾಖಲಿಸಿದ್ದು, ಇದೀಗ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ದಾಸ್ ವಿವರಿಸಿದ್ದಾರೆ.
ಈ ವಿಷಯ ಹಬ್ಬುತ್ತಿದ್ದಂತೆಯೇ ಸಿಲ್ಚಾರ್ ನ ಖಾಸಗಿ ಆಸ್ಪತ್ರೆಯ ವಿರುದ್ಧ ಪ್ರತಿಭಟನೆ ನಡೆಸಿ, ಬೇಜವಾಬ್ದಾರಿ ವೈದ್ಯರು ಮತ್ತು ಸಿಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ನಿರ್ಲಕ್ಷ್ಯಕದ ವಿರುದ್ಧ ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಎಫ್ ಐಆರ್ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್