ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಮಹಿಳಾ ಅಭ್ಯರ್ಥಿಗಳಿಗೆ ಅನ್ಯಾಯದ ಆರೋಪ


Team Udayavani, Feb 7, 2023, 6:25 AM IST

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಮಹಿಳಾ ಅಭ್ಯರ್ಥಿಗಳಿಗೆ ಅನ್ಯಾಯದ ಆರೋಪ

ಉಡುಪಿ : ಸರಕಾರಿ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಆಯ್ಕೆ ಪಟ್ಟಿಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

ಆಯ್ಕೆ ಪಟ್ಟಿಯಲ್ಲಿ ಅಭ್ಯರ್ಥಿಗಳ ಅಂಕದ ಆಧಾರದಲ್ಲಿ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮಹಿಳಾ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ. ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ಹೊರತುಪಡಿಸಿ, ಬೇರೆ ಯಾವುದೇ ವಿಭಾಗದಲ್ಲೂ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡಿಲ್ಲ ಮತ್ತು ಆಯ್ಕೆಯನ್ನು ಮಾಡಿಲ್ಲ. ಮಹಿಳಾ ಅಭ್ಯರ್ಥಿಗಳನ್ನು ಕೇವಲ ಶೇ. 33ರಷ್ಟು ಮೀಸಲಾತಿಗೆ ಸೀಮಿತಗೊಳಿಸಿ, ಉಳಿದ ಶೇ. 67ರಷ್ಟು ಮೀಸಲಾತಿಯನ್ನು ಪುರುಷರಿಗೆ ನೀಡಲಾಗಿದೆ. ಅಲ್ಲದೆ ವಿವಿಧ ವರ್ಗದಲ್ಲಿ ಹೆಚ್ಚು ಅಂಕವಿದ್ದು, ಸಾಮಾನ್ಯ ವರ್ಗದಡಿ ಉನ್ನತ ರ್‍ಯಾಂಕ್‌ನಲ್ಲಿ ಆಯ್ಕೆಯಾಗಬಹುದಾದ ಮಹಿಳಾ ಅಭ್ಯರ್ಥಿಯನ್ನು ಮೀಸಲು ಕೋಟಕ್ಕೆ ಸೀಮಿತಗೊಳಿಸಿ, ಆ ಜಾಗಕ್ಕೆ ಪುರುಷ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ ಎಂದು ಮಹಿಳಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಉದ್ದೇಶ ಬಹಿರಂಗಕ್ಕೆ ಆಗ್ರಹ
ಮಹಿಳಾ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಕನ್ನಡ ಮಾಧ್ಯಮ, ಗ್ರಾಮೀಣ ಮೀಸಲಾತಿ ಇತ್ಯಾದಿ ಯಾವುದನ್ನು ಗಣನೆಗೆ ತೆಗೆದುಕೊಂಡಿಲ್ಲ. ಆಯ್ಕೆ ಪಟ್ಟಿಯಲ್ಲಿ ಕಡಿಮೆ ಅಂಕ ಬಂದಿರುವವರು ಸಾಮಾನ್ಯ ವರ್ಗದಡಿ ಆಯ್ಕೆಯಾಗಿ ಹೆಚ್ಚು ಅಂಕ ಬಂದಿರುವ ಮಹಿಳಾ ಅಭ್ಯರ್ಥಿಯನ್ನು ಸಾಮಾನ್ಯ ವರ್ಗದ ಬದಲಿಗೆ ಮಹಿಳಾ ಮೀಸಲಾತಿಯಡಿ ಆಯ್ಕೆ ಮಾಡಲಾಗಿದೆ. ಇದರ ಹಿಂದಿನ ಉದ್ದೇಶ ಏನು? ಯಾರಿಗೆ ಅನುಕೂಲ ಮಾಡಿಕೊಡಲು ಹೀಗೆ ಮಾಡಿದ್ದಾರೆ ಎಂಬುದನ್ನು ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮಹಿಳಾ ಅಭ್ಯರ್ಥಿಗಳಿಗೆ ಶೇ. 33ರಷ್ಟು ಮೀಸಲಾತಿ ಮಾತ್ರವೇ ನೀಡಲಾಗುವುದು, ಉಳಿದ ಯಾವುದೇ ವರ್ಗದಲ್ಲೂ ಸ್ಪರ್ಧೆ ಮಾಡಲು ಅವಕಾಶ ಇಲ್ಲ ಎಂಬುದನ್ನು ಅಧಿಸೂಚನೆಯಲ್ಲೇ ಹೇಳಬೇಕಿತ್ತು. ಅಧಿಸೂಚನೆ ಅಥವಾ ಬೇರೆ ಯಾವುದೇ ನೇಮಕಾತಿಯಲ್ಲೂ ಈ ರೀತಿಯ ನಿಯಮ ಇಲ್ಲ. ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ಇತ್ಯಾದಿಗೆ ಸಂಬಂಧಿಸಿದ ದಾಖಲೆಗಳನ್ನೆಲ್ಲ ಪಡೆದು, ನೇಮಕಾತಿಯನ್ನು ಮಾತ್ರ ಮಹಿಳಾ ಮೀಸಲಾತಿಯಡಿ ನೀಡಲಾಗಿದೆ. ಕನ್ನಡ ಮಾಧ್ಯಮ, ಗ್ರಾಮೀಣ ಅಭ್ಯರ್ಥಿ ವರ್ಗದಡಿ ಓರ್ವ ಮಹಿಳಾ ಅಭ್ಯರ್ಥಿಯೂ ಆಯ್ಕೆಯಾಗಿಲ್ಲ ಎಂದು ನೊಂದ ಅಭ್ಯರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ.

ಅಧಿಕಾರಿಗಳು ಹೇಳುವುದೇನು?
ಸಹಾಯ ಪ್ರಾಧ್ಯಾಪಕರ ಆಯ್ಕೆ ಪ್ರಕ್ರಿಯೆ ನಿರ್ದಿಷ್ಟ ನಿಯಮದ ಆಧಾರದಲ್ಲೇ ನಡೆಯುತ್ತಿದೆ. ಯಾವುದೇ ಅಭ್ಯರ್ಥಿಗಳಿಗೆ ಈ ಬಗ್ಗೆ ಗೊಂದಲ ಅಥವಾ ಸ್ಪಷ್ಟತೆ ಇಲ್ಲದೆ ಇದ್ದಲ್ಲಿ ಬೆಂಗಳೂರಿನ ಮಲ್ಪೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಗೆ ಬಂದು ಈ ಸಂಬಂಧ ಸುತ್ತೋಲೆ ಮತ್ತು ನಿಯಮದ ಪ್ರತಿಯನ್ನು ಪಡೆದುಕೊಂಡು ಪರಿಶೀಲಿಸಬಹುದು. ನಿಯಮ ಮೀರಿ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್‌. ತಿಳಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.