ತಂದೆಯಿಂದಲೇ ಅತ್ಯಾಚಾರ: ಗಂಡು ಮಗುವಿಗೆ ಜನ್ಮ ನೀಡಿದ 8ನೇ ತರಗತಿ ವಿದ್ಯಾರ್ಥಿನಿ
ಬಾಲಕಿ ಪ್ರತಿದಿನ ಅಜ್ಜಿ ಮಾಡಿ ಕೊಡುತ್ತಿದ್ದ ಊಟವನ್ನು ಕೊಡಲು ತಂದೆ ಬಳಿ ಬರುತ್ತಿದ್ದಳು.
Team Udayavani, Aug 5, 2022, 3:17 PM IST
ಚೆನ್ನೈ: 13 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆಕೆ ಗರ್ಭಧರಿಸಲು ಕಾರಣನಾದ ತಂದೆಯನ್ನು ತಮಿಳುನಾಡಿನ ವೆಲ್ಲೂರ್ ಜಿಲ್ಲೆಯ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಿವುಡ ಮತ್ತು ಮೂಗ ಮಗಳನ್ನು ನಾಲ್ಕನೇ ಮಹಡಿಯಿಂದ ಎಸೆದ ತಾಯಿ
ಸರ್ಕಾರಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ಈ ಬಾಲಕಿ ಹೊಟ್ಟೆನೋವು ಎಂದು ತಿಳಿಸಿದ್ದು, ಬಳಿಕ ಆಕೆಯ ಸಂಬಂಧಿಕರು ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಾಲಕಿಯ ತಪಾಸಣೆ ನಡೆಸಿದ ಬಳಿಕ ಆಕೆ ಗರ್ಭಿಣಿಯಾಗಿದ್ದಾಳೆಂದು ವೈದ್ಯರು ತಿಳಿಸಿದ ಬಳಿಕ ವಿಷಯ ಬಹಿರಂಗಗೊಂಡಿತ್ತು ಎಂದು ವರದಿ ವಿವರಿಸಿದೆ.
ಆಗಸ್ಟ್ 2ರಂದು ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ಬಗ್ಗೆ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮಕ್ಕಳ ಕಲ್ಯಾಣಾಭಿವೃದ್ಧಿ ಸಮಿತಿಗೆ ಮಾಹಿತಿ ನೀಡಿದ್ದು, ನಂತರ ವೆಲ್ಲೂರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಘಟನೆ ಬಗ್ಗೆ ಅಪ್ರಾಪ್ತ ಬಾಲಕಿಯ ವಿಚಾರಣೆ ನಡೆಸಿದಾಗ, ಕಳೆದ ಹತ್ತು ತಿಂಗಳಿನಿಂದ ತಂದೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಬಾಲಕಿಯ ತಂದೆ ಮತ್ತು ತಾಯಿ ಪ್ರತ್ಯೇಕಗೊಂಡಿದ್ದು, ಬಾಲಕಿ ಮತ್ತು ಆಕೆಯ ಅಣ್ಣ ತಮ್ಮ ಅಜ್ಜಿ ಮನೆಯಲ್ಲಿ ವಾಸವಾಗಿದ್ದರು.
ಬಾಲಕಿ ಪ್ರತಿದಿನ ಅಜ್ಜಿ ಮಾಡಿ ಕೊಡುತ್ತಿದ್ದ ಊಟವನ್ನು ಕೊಡಲು ತಂದೆ ಬಳಿ ಬರುತ್ತಿದ್ದಳು. ಈ ಸಂದರ್ಭದಲ್ಲಿ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದಾಗಿ ತನಿಖೆ ವೇಳೆ ತಿಳಿಸಿದ್ದಳು. ಒಂದು ವೇಳೆ ಈ ವಿಷಯ ಯಾರ ಬಳಿ ಬಾಯ್ಬಿಟ್ಟರು ಕೊಲ್ಲುವುದಾಗಿ ಬೆದರಿಕೆ ಒಡ್ಡಿರುವುದಾಗಿ ಬಾಲಕಿ ಮಾಹಿತಿ ನೀಡಿದ್ದಾಳೆ.
ಬಾಲಕಿಯ ಹೇಳಿಕೆ ಆಧಾರದ ಮೇಲೆ ಪೊಲೀಸರು ಕಾಮುಕ ತಂದೆಯನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ನ್ಯಾಯಾಂಗ ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು