ಉಪ್ಪಿನಂಗಡಿ; ಪ್ರತಿಭಟನೆಯಲ್ಲಿ ಎಸ್ಐ ಕೊಲೆ ಯತ್ನ: ಮತ್ತೋರ್ವನ ಸೆರೆ
ಈತನನ್ನು ಮಂಗಳವಾರ ಅಪರಾಹ್ನ ಮಡಂತ್ಯಾರು ಪಂ. ಕಚೇರಿ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Team Udayavani, Jan 12, 2022, 10:36 AM IST
Representative Image
ಉಪ್ಪಿನಂಗಡಿ, ಜ. 11: ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಡಿ.14ರಂದು ನಡೆದ ಪ್ರತಿಭಟನೆಯ ಸಂದರ್ಭ ಬಂಟ್ವಾಳ ಗ್ರಾಮಾಂತರ ಠಾಣಾ ಉಪ ನಿರೀಕ್ಷಕ ಪ್ರಸನ್ನ ಕುಮಾರ್ ಅವರಿಗೆ ಚೂರಿಯಿಂದ ತಿವಿದು ಕೊಲೆ ಯತ್ನ ಸೇರಿದಂತೆ ಇನ್ನಿತರ ಕೃತ್ಯಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಬೋರುಗುಡ್ಡೆ ನಿವಾಸಿ ಮಹಮ್ಮದ್ ಹನೀಫ್ (41) ಬಂಧಿತ. ಈತನನ್ನು ಮಂಗಳವಾರ ಅಪರಾಹ್ನ ಮಡಂತ್ಯಾರು ಪಂ. ಕಚೇರಿ ಬಳಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಒಮ್ಮೆ ಐವರು ಬಳಿಕ ಇಬ್ಬರನ್ನು ಬಂಧಿಸಲಾಗಿತ್ತು. ಘಟನೆಯ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಕೃತ್ಯಕ್ಕೆ ಸಂಬಂಧಿಸಿ ಅದೇ ದಿನ 10 ಮಂದಿಯನ್ನು ಬಂಧಿಸಲಾಗಿತ್ತು. ಡಿ. 14ರ ಘಟನಾವಳಿಯಲ್ಲಿ ಈವರೆಗೆ ಒಟ್ಟು 18 ಮಂದಿಯ ಬಂಧನವಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ
2.35 ಕೋ.ರೂ. ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಕಟ್ಟಡ ಸಿದ್ಧ
ಕಾರು ಚಾಲಕನ ಆಟಾಟೋಪ: ಮಹಿಳೆಯರು ಕಕ್ಕಾಬಿಕ್ಕಿ; ಆರೋಪಿ ಪೊಲೀಸರ ವಶ
ನಿಬಿಡ ಶುಭ ಸಮಾರಂಭಗಳು: ಮೆಲ್ಕಾರ್-ಕಲ್ಲಡ್ಕ ಟ್ರಾಫಿಕ್ ಜಾಮ್
ಪುತ್ತೂರು: ಬಲ್ನಾಡು ಗ್ರಾ.ಪಂ.ಉಪಚುನಾವಣೆ ಫಲಿತಾಂಶ;ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು